ತಮಿಳುನಾಡು: ರೈಲ್ವೆ ನಿಲ್ದಾಣದೊಳಗೆ ಸೂಟ್​ಕೇಸ್​ನಲ್ಲಿ ಮಹಿಳೆಯ ಶವ ಪತ್ತೆ

ತಮಿಳುನಾಡಿನ ರೈಲ್ವೆ ನಿಲ್ದಾಣದೊಳಗೆ ಸೂಟ್​ಕೇಸ್​ವೊಂದರಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ತಮಿಳುನಾಡಿನ ಚೆನ್ನೈನ ಹೊರವಲಯದಲ್ಲಿರುವ ಮಿಂಜೂರ್ ರೈಲ್ವೇ ನಿಲ್ದಾಣದಲ್ಲಿ ಸೂಟ್‌ಕೇಸ್‌ನಲ್ಲಿ ಶವ ಪತ್ತೆಯಾಗಿದೆ. ಮಧ್ಯವಯಸ್ಕನೊಬ್ಬ ತನ್ನ ಸಾಮಾನು ಸರಂಜಾಮು ಬಿಟ್ಟು ಹೋಗಿದ್ದರಿಂದ ಆತಂಕಗೊಂಡ ನಿಲ್ದಾಣದಲ್ಲಿದ್ದ ಪ್ರಯಾಣಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಒಳಗೆ ಶವ ಪತ್ತೆಯಾಗಿದೆ.

ತಮಿಳುನಾಡು: ರೈಲ್ವೆ ನಿಲ್ದಾಣದೊಳಗೆ ಸೂಟ್​ಕೇಸ್​ನಲ್ಲಿ ಮಹಿಳೆಯ ಶವ ಪತ್ತೆ
ಸೂಟ್​ಕೇಸ್​
Image Credit source: India Today

Updated on: Nov 05, 2024 | 2:57 PM

ತಮಿಳುನಾಡಿನ ರೈಲ್ವೆ ನಿಲ್ದಾಣದೊಳಗೆ ಸೂಟ್​ಕೇಸ್​ವೊಂದರಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ತಮಿಳುನಾಡಿನ ಚೆನ್ನೈನ ಹೊರವಲಯದಲ್ಲಿರುವ ಮಿಂಜೂರ್ ರೈಲ್ವೇ ನಿಲ್ದಾಣದಲ್ಲಿ ಸೂಟ್‌ಕೇಸ್‌ನಲ್ಲಿ ಶವ ಪತ್ತೆಯಾಗಿದೆ.
ಮಧ್ಯವಯಸ್ಕನೊಬ್ಬ ತನ್ನ ಸಾಮಾನು ಸರಂಜಾಮು ಬಿಟ್ಟು ಹೋಗಿದ್ದರಿಂದ ಆತಂಕಗೊಂಡ ನಿಲ್ದಾಣದಲ್ಲಿದ್ದ ಪ್ರಯಾಣಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಒಳಗೆ ಶವ ಪತ್ತೆಯಾಗಿದೆ.

ನವೆಂಬರ್ 4 ರ ಸೋಮವಾರ ತಡರಾತ್ರಿ 43 ವರ್ಷದ ಬಾಲಸುಬ್ರಮಣ್ಯಂ ಮತ್ತು ಅವರ 17 ವರ್ಷದ ಮಗಳು ದೊಡ್ಡ ಸೂಟ್‌ಕೇಸ್‌ನೊಂದಿಗೆ ನಿಲ್ದಾಣಕ್ಕೆ ಬಂದಿದ್ದರು. ಬಾಲಸುಬ್ರಹ್ಮಣ್ಯಂ ಆ ಸೂಟ್​ಕೇಸ್​ನ್ನು ಅಲ್ಲಿಯೇ ಬಿಟ್ಟು ರೈಲ್ವೆ ನಿಲ್ದಾಣದಿಂದ ಹೊರಹೋಗಲು ಯತ್ನಿಸುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸಾಮಾನು ಸರಂಜಾಮು ಬಿಟ್ಟು ಹೋಗಿರುವ ಬಗ್ಗೆ ಆತಂಕಗೊಂಡ ಪ್ರಯಾಣಿಕರು ಕೂಡಲೇ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಸೂಟ್‌ಕೇಸ್ ತುಂಬಾ ದೊಡ್ಡದಾಗಿದ್ದ ಕಾರಣ, ಅಲ್ಲಿಂದ ಸ್ಥಳಾಂತರಗೊಳ್ಳಲು ಸಾಧ್ಯವಾಗದ ಕಾರಣ ಆರ್‌ಪಿಎಫ್ ಅಧಿಕಾರಿಗಳು ಅನುಮಾನಗೊಂಡು ಕೊರುಕ್ಕುಪೇಟೆ ಪೊಲೀಸರನ್ನು ಕೂಡಲೇ ಸಂಪರ್ಕಿಸಿದರು.

ಏನೋ ತಪ್ಪಾಗಿದೆ ಎಂದು ಗ್ರಹಿಸಿದ ಅಧಿಕಾರಿಗಳು ಸೂಟ್‌ಕೇಸ್‌ನ ವಿಷಯಗಳ ಬಗ್ಗೆ ವಿಚಾರಿಸಲು ಬಾಲಸುಬ್ರಮಣ್ಯಂ ಅವರನ್ನು ಸಂಪರ್ಕಿಸಿದರು. ಅವರು ಕೊಟ್ಟ ವಿವರಣೆ ಅಸ್ಪಷ್ಟವಾಗಿತ್ತು, ಮತ್ತಷ್ಟು ಅನುಮಾನವನ್ನು ಹುಟ್ಟುಹಾಕಿತ್ತು. ಪೊಲೀಸರು ಸೂಟ್​ಕೇಸ್​ ತೆರೆದು ನೋಡಿ ಬೆಚ್ಚಿಬಿದ್ದಿದ್ದಾರೆ.

ಮತ್ತಷ್ಟು ಓದಿ: ರಾಜಸ್ಥಾನದಿಂದ ವಿಮಾನದಲ್ಲಿ ಬೆಂಗಳೂರಿಗೆ ಬಂದು ಕಾರು ಕದಿಯುವ ಖದೀಮರ ಬಂಧನ

ಬಾಲಸುಬ್ರಮಣ್ಯಂ ಸೂಟ್‌ಕೇಸ್‌ ಬಿಚ್ಚುತ್ತಿದ್ದಂತೆ ಪಕ್ಕದಲ್ಲಿದ್ದವರು ಪ್ಲಾಸ್ಟಿಕ್‌ ಕವರ್​ನಲ್ಲಿ ಸುತ್ತಲಾಗಿತ್ತು, ಶವದ ತಲೆಯಲ್ಲಿ  ಗಾಯಗಳಿದ್ದವು. ತಕ್ಷಣವೇ ಪೊಲೀಸರು ಬಾಲಸುಬ್ರಮಣ್ಯಂ ಮತ್ತು ಅವರ ಪುತ್ರಿ ಇಬ್ಬರನ್ನೂ ಬಂಧಿಸಿ, ಘಟನೆಯ ಬಗ್ಗೆ ವಿವರವಾದ ತನಿಖೆಯನ್ನು ಪ್ರಾರಂಭಿಸಿದರು.

ಇತ್ತೀಚೆಗೆ, ಚೆನ್ನೈನಲ್ಲಿ ಮಹಿಳೆಯ ತುಂಡು-ತುಂಡಾದ ಮಹಿಳೆಯ ದೇಹವನ್ನು ಸೂಟ್‌ಕೇಸ್‌ನಿಂದ ಹೊರತೆಗೆಯಲಾಗಿತ್ತು, ಸ್ಥಳೀಯರೊಬ್ಬರು ಬ್ಯಾಗ್‌ನಿಂದ ರಕ್ತ ಸೋರುತ್ತಿರುವುದನ್ನು ಗಮನಿಸಿ ಮಾಹಿತಿ ನೀಡಿದ್ದರು. ಪ್ರಕರಣದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us