AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಮುಖ್ಯ ನ್ಯಾಯಾಧೀಶರಾಗುವ ಕನಸು ನನ್ನದು ಎಂದು ಹೇಳಿದ ಪ್ರತಿಭಾನ್ವಿತ ಬಾಲಕಿಗೆ ಮೋದಿ ಕೊಟ್ಟ ಸಲಹೆ ಹೀಗಿತ್ತು

ತನಿಷ್ಕಾ ಸುಜಿತ್‌ಗೆ 13ನೇ ವಯಸ್ಸಿನಲ್ಲಿ ಬಿಎ (ಮನೋವಿಜ್ಞಾನ) ಮೊದಲ ವರ್ಷ ಪ್ರವೇಶ ನೀಡಲಾಗಿದ್ದು, ವಿಶ್ವವಿದ್ಯಾನಿಲಯವು ಆಕೆಗೆ ನಡೆಸಿದ ಪ್ರವೇಶ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದರು ಎಂದು ದೇವಿ ಅಹಲ್ಯಾ ವಿಶ್ವವಿದ್ಯಾನಿಲಯದ ಸಮಾಜ ವಿಜ್ಞಾನ ಅಧ್ಯಯನ ವಿಭಾಗದ ಮುಖ್ಯಸ್ಥೆ ರೇಖಾ ಆಚಾರ್ಯ ಹೇಳಿದ್ದಾರೆ.

ದೇಶದ ಮುಖ್ಯ ನ್ಯಾಯಾಧೀಶರಾಗುವ ಕನಸು ನನ್ನದು ಎಂದು ಹೇಳಿದ ಪ್ರತಿಭಾನ್ವಿತ ಬಾಲಕಿಗೆ ಮೋದಿ ಕೊಟ್ಟ ಸಲಹೆ ಹೀಗಿತ್ತು
ತನಿಷ್ಕಾ ಸುಜಿತ್Image Credit source: Twitter/@jdjsindore
Follow us
ರಶ್ಮಿ ಕಲ್ಲಕಟ್ಟ
|

Updated on: Apr 11, 2023 | 1:01 PM

ಇಂದೋರ್: ಮಧ್ಯಪ್ರದೇಶದ ಇಂದೋರ್‌ನ ಪ್ರತಿಭಾನ್ವಿತ ವಿದ್ಯಾರ್ಥಿನಿ ತನಿಷ್ಕಾ ಸುಜಿತ್ (Tanishka Sujit) 15 ನೇ ವಯಸ್ಸಿನಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್ (BA) ಅಂತಿಮ ವರ್ಷದ ಪರೀಕ್ಷೆಗೆ ಹಾಜರಾಗಲು ಸಿದ್ಧರಾಗಿದ್ದಾರೆ. ಈ ಬಾಲಕಿ ಮುಂದೆ ಕಾನೂನು ಅಧ್ಯಯನ ಮಾಡಿ ದೇಶದ ಮುಖ್ಯ ನ್ಯಾಯಾಧೀಶರಾಗುವ ಗುರಿ ಹೊಂದಿದ್ದಾರೆ.2020 ರಲ್ಲಿ ಕೋವಿಡ್​​ನಿಂದ ತನ್ನ ತಂದೆ ಮತ್ತು ಅಜ್ಜನನ್ನು ಕಳೆದುಕೊಂಡ ಹದಿಹರೆಯದ ಹುಡುಗಿ, ಕೆಲವು ದಿನಗಳ ಹಿಂದೆ ಭೋಪಾಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡಿದ್ದರು. ಅಲ್ಲಿ ಮೋದಿ ಅವರು ತನ್ನ ಕನಸನ್ನು ಮುಂದುವರಿಸಲು ಅವರು ಹೇಗೆ ಪ್ರೋತ್ಸಾಹಿಸಿದರು ಎಂಬುದನ್ನು  ತನಿಷ್ಕಾ ಪಿಟಿಐ ಜತೆ ಹಂಚಿಕೊಂಡಿದ್ದಾರೆ.

ಇಂದೋರ್‌ನ ದೇವಿ ಅಹಲ್ಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿ ತನಿಷ್ಕಾ ಸುಜಿತ್ ಏಪ್ರಿಲ್ 19 ರಿಂದ 28 ರವರೆಗೆ ನಡೆಯಲಿರುವ ತನ್ನ ಬಿಎ (ಮನೋವಿಜ್ಞಾನ) ಅಂತಿಮ ವರ್ಷದ ಪರೀಕ್ಷೆಗಳಿಗೆ ಹಾಜರಾಗಲಿದ್ದಾರೆ.10 ನೇ ತರಗತಿಯನ್ನು ಮೊದಲ ದರ್ಜೆಯಲ್ಲಿ ಉತ್ತೀರ್ಣರಾದ ನಂತರ ಅವರು 13 ನೇ ವಯಸ್ಸಿನಲ್ಲಿ 12 ನೇ ತರಗತಿ ಪರೀಕ್ಷೆ ಪಾಸಾಗಿದ್ದರು.

ತನಿಷ್ಕಾ ಸುಜಿತ್‌ಗೆ 13ನೇ ವಯಸ್ಸಿನಲ್ಲಿ ಬಿಎ (ಮನೋವಿಜ್ಞಾನ) ಮೊದಲ ವರ್ಷ ಪ್ರವೇಶ ನೀಡಲಾಗಿದ್ದು, ವಿಶ್ವವಿದ್ಯಾನಿಲಯವು ಆಕೆಗೆ ನಡೆಸಿದ ಪ್ರವೇಶ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದರು ಎಂದು ದೇವಿ ಅಹಲ್ಯಾ ವಿಶ್ವವಿದ್ಯಾನಿಲಯದ ಸಮಾಜ ವಿಜ್ಞಾನ ಅಧ್ಯಯನ ವಿಭಾಗದ ಮುಖ್ಯಸ್ಥೆ ರೇಖಾ ಆಚಾರ್ಯ ಹೇಳಿದ್ದಾರೆ.

ಸಂಯೋಜಿತ ಕಮಾಂಡರ್‌ಗಳ ಸಮ್ಮೇಳನಕ್ಕಾಗಿ ಏಪ್ರಿಲ್ 1 ರಂದು ರಾಜ್ಯದ ರಾಜಧಾನಿ ಭೋಪಾಲ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ತನಿಷ್ಕಾ ಸುಜಿತ್ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದರು. ಸುಮಾರು 15 ನಿಮಿಷಗಳ ಕಾಲ ಬಾಲಕಿ ಮೋದಿ ಜತೆ ಮಾತುಕತೆ ನಡೆಸಿದ್ದರು. ತಾನು ಬಿಎ ಪರೀಕ್ಷೆಯಲ್ಲಿ ತೇರ್ಗಡೆಯಾದ ನಂತರ ಅಮೆರಿಕದಲ್ಲಿ ಕಾನೂನು ಕಲಿಯಲು ಬಯಸಿದ್ದೇನೆ. ಮುಂದೊಂದು ದಿನ ನಾನು ಭಾರತದ ಮುಖ್ಯ ನ್ಯಾಯಮೂರ್ತಿಯಾಗುವ ಕನಸು ಕಂಡಿದ್ದೇನೆ ಎಂದು ಪ್ರಧಾನಿಯವರಲ್ಲಿ ಹೇಳಿರುವುದಾಗಿ ತನಿಷ್ಕಾ ಹೇಳಿದ್ದಾರೆ.

ಇದನ್ನೂ ಓದಿ: Ramayana Video Viral: ಡಬ್ ಮಾಡಿ ರಾಮಾಯಣದ ವೀಡಿಯೋ ಬಾರ್‌ನಲ್ಲಿ ಪ್ಲೇ ಮಾಡಿದ ಇಬ್ಬರ ಬಂಧನ

ನನ್ನ ಗುರಿಯ ಬಗ್ಗೆ ಕೇಳಿದ ಪ್ರಧಾನಿ, ಸುಪ್ರೀಂಕೋರ್ಟ್‌ಗೆ ಹೋಗಿ ಅಲ್ಲಿನ ವಕೀಲರ ವಾದಗಳನ್ನು ವೀಕ್ಷಿಸಲು ಸಲಹೆ ನೀಡಿದರು, ಅದು ನನ್ನ ಗುರಿಯನ್ನು ಸಾಧಿಸಲು ನನಗೆ ಪ್ರೇರೇಪಿಸುತ್ತದೆ. ಪ್ರಧಾನಿಯವರನ್ನು ಭೇಟಿಯಾಗುವ ನನ್ನ ಕನಸು ನನಸಾಗಿದೆ ಎಂದು ಆಕೆ ಹೇಳಿದ್ದಾರೆ. ನನ್ನ ಪತಿ ಮತ್ತು ಮಾವ 2020 ರಲ್ಲಿ ಕೊರೊನಾವೈರಸ್ ನಿಂದ ಸಾವನ್ನಪ್ಪಿದ್ದಾರೆ. ಮಗಳಿಗಾಗಿ ನಾನು ನನ್ನ ದುಃಖವನ್ನು ಅದುಮಿ, ಆಕೆಯ ಜತೆ ನಿಂತೆ. ಆಕೆ ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡಿದಳು ಎಂದು ತನಿಷ್ಕಾ ಅವರ ತಾಯಿ ಅನುಭಾ ಹೇಳಿದ್ದಾರೆ.

ಕುಟುಂಬದ ಇಬ್ಬರು ಸದಸ್ಯರನ್ನು ಕಳೆದುಕೊಂಡ ನನಗೆ ದಿಕ್ಕೇ ತೋಚಲಿಲ್ಲ. ಎರಡು ಮೂರು ತಿಂಗಳ ನಂತರ, ನನ್ನ ಮಗಳ ಭವಿಷ್ಯದ ಹಿತದೃಷ್ಟಿಯಿಂದ ಆಕೆಯ ಶಿಕ್ಷಣದತ್ತ ಗಮನ ಹರಿಸಬೇಕು ಇದಕ್ಕಾಗಿ ಹೋರಾಡಬೇಕು ಎಂದು ನಾನು ನಿರ್ಧರಿಸಿದೆ ಎಂದಿದ್ದಾರೆ ಅನುಭಾ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್