AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಸಮಸ್ಯೆ ಬಗೆಹರಿಸುತ್ತೇನೆ ಎಂದು ಹೇಳಿ ತಲೆಗೆ 18 ಸೂಜಿಗಳನ್ನು ಚುಚ್ಚಿದ ಮಂತ್ರವಾದಿ

ಮಹಿಳೆಗಾಗಿರುವ ಆರೋಗ್ಯ ಸಮಸ್ಯೆಯನ್ನು ದೂರ ಮಾಡುತ್ತೇನೆಂದು ಹೇಳಿ ಮಂತ್ರವಾದಿಯೊಬ್ಬ ಆಕೆಯ ತಲೆಗೆ 18 ಸೂಜಿಗಳನ್ನು ಚುಚ್ಚಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಇದೀಗ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಮಹಿಳೆಯ ಸಮಸ್ಯೆ ಬಗೆಹರಿಸುತ್ತೇನೆ ಎಂದು ಹೇಳಿ ತಲೆಗೆ 18 ಸೂಜಿಗಳನ್ನು ಚುಚ್ಚಿದ ಮಂತ್ರವಾದಿ
ಬ್ಲ್ಯಾಕ್​ ಮ್ಯಾಜಿಕ್
ನಯನಾ ರಾಜೀವ್
|

Updated on: Jul 19, 2024 | 2:08 PM

Share

ಮಂತ್ರವಾದಿಯೊಬ್ಬ ಮಹಿಳೆಯ ಸಮಸ್ಯೆಯನ್ನು ಬಗೆಹರಿಸುವುದಾಗಿ ನಂಬಿಸಿ ಆಕೆಯ ತಲೆಗೆ 18 ಸೂಜಿಗಳನ್ನು ಚುಚ್ಚಿದ ಘಟನೆ ಒಡಿಶಾದ ಬಲಂಗಿರ್ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಬೆಳಕಿಗೆ ಬಂದ ನಂತರ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆಯು ತನಗಿರುವ ಆರೋಗ್ಯ ಸಮಸ್ಯೆಯನ್ನು ಗುಣಪಡಿಸಿಕೊಳ್ಳಲು ತನ್ನ ಪೋಷಕರ ಜತೆಗೆ ಮಂತ್ರವಾದಿಯನ್ನು ಭೇಟಿಯಾಗಿದ್ದಳು.

ಮಹಿಳೆ ಕಳೆದ ನಾಲ್ಕು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದರೂ, ಆಕೆಯ ಸ್ಥಿತಿ ಸುಧಾರಿಸಲು ಸಾಧ್ಯವಾಗಲಿಲ್ಲ, ಆಕೆಯ ಕುಟುಂಬವು ಮಂತ್ರವಾದಿ ಸಹಾಯವನ್ನು ಪಡೆಯಲು ಮುಂದಾಗಿತ್ತು.

ಆರೋಪಿಯನ್ನು ಸಂತೋಷ್​ ರಾಣಾ ಎಂದು ಗುರುತಿಸಲಾಗಿದ್ದು ಮಹಿಳೆಯನ್ನು ಕೋಣೆಯೊಳಗೆ ಕರೆದೊಯ್ದಿದ್ದ, ಒಂದು ಗಂಟೆಯ ನಂತರ ಅವಳನ್ನು ಹೊರಗೆ ಕರೆತಂದಿದ್ದ.

ಮತ್ತಷ್ಟು ಓದಿ: ಅತ್ತೆ-ಅಳಿಯನ‌ ಮಧ್ಯೆ ಅನೈತಿಕ ಸಂಬಂಧದ ಕಟ್ಟು ಕಥೆ ಕಟ್ಟಿದ ಮಂತ್ರವಾದಿ: ಬೆದರಿಕೆಗೆ ಹೆದರಿ ಯುವಕ ಆತ್ಮಹತ್ಯೆ

ನಂತರ, ಮಹಿಳೆಯ ನಿರಂತರ ಅಸ್ವಸ್ಥತೆಯನ್ನು ಗಮನಿಸಿದ ನಂತರ ಆಕೆಯ ಪೋಷಕರು ಆಕೆಯ ತಲೆಯೊಳಗೆ ಸೂಜಿಗಳಿರುವುದನ್ನು ಕಂಡರು. ತನ್ನ ಮಗಳ ತಲೆಯೊಳಗೆ ಎಂಟು ಸೂಜಿಗಳನ್ನು ತೆಗೆದಿರುವುದಾಗಿ ಮಹಿಳೆಯ ತಂದೆ ಹೇಳಿದ್ದಾರೆ.

ನಂತರ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಸಿಟಿ ಸ್ಕ್ಯಾನ್ ನಡೆಸಲಾಯಿತು, ಮಹಿಳೆಯ ತಲೆಗೆ ಇನ್ನೂ 10 ಸೂಜಿಗಳು ಚುಚ್ಚಿರುವುದು ಕಂಡುಬಂದಿದೆ.

ಪೂಜೆ ವೇಳೆ ಆಕೆ ಪ್ರಜ್ಞಾಹೀನಳಾಗಿ ಬಿದ್ದಿದ್ದಳು ಮತ್ತು ಆದ್ದರಿಂದ ಚುಚ್ಚುವಿಕೆಯ ಬಗ್ಗೆ ತಿಳಿದಿಲ್ಲ ಎಂದು ಹೇಳಿದರು. ಈ ಸಂಬಂಧ ಪೊಲೀಸರು ದೂರು ಸ್ವೀಕರಿಸಿದ್ದು, ನಂತರ ಮಂತ್ರವಾದಿಯನ್ನು ಬಂಧಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆಗಳು ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?