AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸಿಜನ್​ ಅಭಾವ ಸಮಸ್ಯೆ ನೀಗಿಸಲು ಕೇಂದ್ರದ ನೆರವಿಗೆ ನಿಂತ ಟಾಟಾ ಗ್ರೂಪ್​; 24 ಕ್ರಯೋಜೆನಿಕ್​ ಕಂಟೇನರ್​ ಆಮದು

ಟಾಟಾ ಗ್ರೂಪ್​ನ ಈ ನೆರವನ್ನು ಪ್ರಧಾನಿ ನರೇಂದ್ರ ಮೋದಿಯವರು ಸ್ವಾಗತಿಸಿದ್ದಾರೆ ಮತ್ತು ಶ್ಲಾಘಿಸಿದ್ದಾರೆ. ಇದು ನಿಜಕ್ಕೂ ಸಹಾನುಭೂತಿ ಎಂದು ಹೇಳಿದ್ದಾರೆ.

ಆಕ್ಸಿಜನ್​ ಅಭಾವ ಸಮಸ್ಯೆ ನೀಗಿಸಲು ಕೇಂದ್ರದ ನೆರವಿಗೆ ನಿಂತ ಟಾಟಾ ಗ್ರೂಪ್​; 24 ಕ್ರಯೋಜೆನಿಕ್​ ಕಂಟೇನರ್​ ಆಮದು
ರತನ್ ಟಾಟಾ
Lakshmi Hegde
|

Updated on:Apr 21, 2021 | 6:24 PM

Share

ನವದೆಹಲಿ: ದೇಶದಲ್ಲಿ ಸದ್ಯ ಅತಿದೊಡ್ಡ ಸವಾಲಾಗಿ ಕಾಡುತ್ತಿರುವುದು ವೈದ್ಯಕೀಯ ಆಕ್ಸಿಜನ್ ಕೊರತೆ. ಹಲವು ರಾಜ್ಯಗಳ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕವಿಲ್ಲ ಎಂಬ ಕೂಗು ಕೇಳಿಬರುತ್ತಿದ್ದು, ಅದರ ಪೂರೈಕೆಗೆ ಕೇಂದ್ರ ಸರ್ಕಾರವೂ ಸಹ ಕ್ರಮ ಕೈಗೊಳ್ಳುತ್ತಿದೆ. ಅಗತ್ಯ ಇರುವ ರಾಜ್ಯಗಳಿಗೆ ಆಕ್ಸಿಜನ್​ ಕಳಿಸುವ ವ್ಯವಸ್ಥೆ ಮಾಡುತ್ತಿದೆ. ಕೊರೊನಾ ವಿರುದ್ಧ ಹೋರಾಟದಲ್ಲಿ ಎದುರಾಗಿರುವ ಆಕ್ಸಿಜನ್​ ಸಮಸ್ಯೆಯನ್ನು ನೀಗಿಸಲು ಇದೀಗ ಟಾಟಾ ಗ್ರೂಪ್​ ಕೇಂದ್ರ ಸರ್ಕಾರಕ್ಕೆ ಸಹಾಯ ಮಾಡಲು ನಿರ್ಧರಿಸಿದೆ.

ಭಾರತದಾದ್ಯಂತ ಹಲವು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಮಸ್ಯೆ ಎದುರಾಗಿದೆ. ಸಾಗಣೆ ಇನ್ನಷ್ಟು ತ್ವರಿತವಾಗಿ ಆಗುವ ಅಗತ್ಯತೆ ಇದೆ. ಈ ಸವಾಲಿನ ವಿರುದ್ಧ ಕೇಂದ್ರ ಸರ್ಕಾರ ಹೋರಾಡುತ್ತಿದ್ದು, ಅದಕ್ಕೆ ನೆರವು ನೀಡುವ ಸಲುವಾಗಿ 24 ಕ್ರಯೋಜೆನಿಕ್​ ಕಂಟೇನರ್​ಗಳನ್ನು ಆಮದು ಮಾಡಿಕೊಳ್ಳುತ್ತಿರುವುದಾಗಿ ಟಾಟಾ ಗ್ರೂಪ್​ ತಿಳಿಸಿದೆ. ಅಷ್ಟೇ ಅಲ್ಲ ಕೊವಿಡ್​ 19 ವಿರುದ್ಧ ಹೋರಾಟಕ್ಕೆ, ಆಮ್ಲಜನಕ ಕೊರತೆ ನೀಗಿಸಲು ನಮ್ಮ ಕೈಯಲಿ ಎಷ್ಟು ಸಾಧ್ಯವೋ ಅಷ್ಟೋ ಸಹಾಯ ಮಾಡುತ್ತೇವೆ ಎಂದೂ ಟಾಟಾ ಗ್ರೂಪ್ ಹೇಳಿದೆ. ಈ ಕ್ರಯೋಜೆನಿಕ್​ ಕಂಟೇನರ್​​ಗಳು ದ್ರವರೂಪದ ಆಮ್ಲಜನಕ ಸಾಗಣೆಗೆ ಸಹಾಯ ಮಾಡಲಿವೆ.

ಟಾಟಾ ಗ್ರೂಪ್​ನ ಈ ನೆರವನ್ನು ಪ್ರಧಾನಿ ನರೇಂದ್ರ ಮೋದಿಯವರು ಸ್ವಾಗತಿಸಿದ್ದಾರೆ ಮತ್ತು ಶ್ಲಾಘಿಸಿದ್ದಾರೆ. ಇದು ನಿಜಕ್ಕೂ ಸಹಾನುಭೂತಿ. ಭಾರತದ ಜನರು ಒಗ್ಗಟ್ಟಾಗಿ ಕೊರೊನಾ ವಿರುದ್ಧ ಹೋರಾಡುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಕಳೆದ ವರ್ಷವೂ ರತನ್​ ಟಾಟಾ ಅವರ ಟಾಟಾ ಟ್ರಸ್ಟ್​​ನಿಂದ ಕೊರೊನಾ ವಿರುದ್ಧ ಹೋರಾಟಕ್ಕೆ 500 ಕೋಟಿ ರೂ.ನೀಡಲಾಗಿತ್ತು. ಹಾಗೇ ಟಾಟಾ ಸನ್ಸ್​ ವತಿಯಿಂದ 1000 ಕೋಟಿ ರೂ. ನೀಡಲಾಗಿತ್ತು. ಈ ಬಾರಿಯೂ ಟಾಟಾ ಗ್ರೂಪ್​ ತನ್ನ ಬದ್ಧತೆ ತೋರಿಸಿದೆ. ದೇಶಕ್ಕೆ ಆಪತ್ತು ಬಂದಾಗ ಅದರ ವಿರುದ್ಧ ಹೋರಾಟದಲ್ಲಿ ನಾವಿದ್ದೇವೆ ಎಂಬುದನ್ನು ಮತ್ತೊಮ್ಮೆ ತೋರಿಸಿದೆ.

ಇದನ್ನೂ ಓದಿ: IPL 2021: ವೇಗವಾಗಿ 5000 ರನ್ ಪೂರೈಸಿದ ಮೊದಲ ಭಾರತೀಯ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರನಾದ ಕನ್ನಡಿಗ ಕೆ. ಎಲ್ ರಾಹುಲ್

ಪತ್ನಿ ತಂಗಿ ಮೇಲೆ ಕಣ್ಣು ಹಾಕಿದ ಧಾರವಾಡದ ಸರ್ಕಾರಿ ನೌಕರ; ಅಪಹರಣ ಮಾಡಿಸಲು ಹೋಗಿ ಜೈಲು ಪಾಲು

Published On - 6:22 pm, Wed, 21 April 21

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?