AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸಿಜನ್​ ಅಭಾವ ಸಮಸ್ಯೆ ನೀಗಿಸಲು ಕೇಂದ್ರದ ನೆರವಿಗೆ ನಿಂತ ಟಾಟಾ ಗ್ರೂಪ್​; 24 ಕ್ರಯೋಜೆನಿಕ್​ ಕಂಟೇನರ್​ ಆಮದು

ಟಾಟಾ ಗ್ರೂಪ್​ನ ಈ ನೆರವನ್ನು ಪ್ರಧಾನಿ ನರೇಂದ್ರ ಮೋದಿಯವರು ಸ್ವಾಗತಿಸಿದ್ದಾರೆ ಮತ್ತು ಶ್ಲಾಘಿಸಿದ್ದಾರೆ. ಇದು ನಿಜಕ್ಕೂ ಸಹಾನುಭೂತಿ ಎಂದು ಹೇಳಿದ್ದಾರೆ.

ಆಕ್ಸಿಜನ್​ ಅಭಾವ ಸಮಸ್ಯೆ ನೀಗಿಸಲು ಕೇಂದ್ರದ ನೆರವಿಗೆ ನಿಂತ ಟಾಟಾ ಗ್ರೂಪ್​; 24 ಕ್ರಯೋಜೆನಿಕ್​ ಕಂಟೇನರ್​ ಆಮದು
ರತನ್ ಟಾಟಾ
Lakshmi Hegde
|

Updated on:Apr 21, 2021 | 6:24 PM

Share

ನವದೆಹಲಿ: ದೇಶದಲ್ಲಿ ಸದ್ಯ ಅತಿದೊಡ್ಡ ಸವಾಲಾಗಿ ಕಾಡುತ್ತಿರುವುದು ವೈದ್ಯಕೀಯ ಆಕ್ಸಿಜನ್ ಕೊರತೆ. ಹಲವು ರಾಜ್ಯಗಳ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕವಿಲ್ಲ ಎಂಬ ಕೂಗು ಕೇಳಿಬರುತ್ತಿದ್ದು, ಅದರ ಪೂರೈಕೆಗೆ ಕೇಂದ್ರ ಸರ್ಕಾರವೂ ಸಹ ಕ್ರಮ ಕೈಗೊಳ್ಳುತ್ತಿದೆ. ಅಗತ್ಯ ಇರುವ ರಾಜ್ಯಗಳಿಗೆ ಆಕ್ಸಿಜನ್​ ಕಳಿಸುವ ವ್ಯವಸ್ಥೆ ಮಾಡುತ್ತಿದೆ. ಕೊರೊನಾ ವಿರುದ್ಧ ಹೋರಾಟದಲ್ಲಿ ಎದುರಾಗಿರುವ ಆಕ್ಸಿಜನ್​ ಸಮಸ್ಯೆಯನ್ನು ನೀಗಿಸಲು ಇದೀಗ ಟಾಟಾ ಗ್ರೂಪ್​ ಕೇಂದ್ರ ಸರ್ಕಾರಕ್ಕೆ ಸಹಾಯ ಮಾಡಲು ನಿರ್ಧರಿಸಿದೆ.

ಭಾರತದಾದ್ಯಂತ ಹಲವು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಮಸ್ಯೆ ಎದುರಾಗಿದೆ. ಸಾಗಣೆ ಇನ್ನಷ್ಟು ತ್ವರಿತವಾಗಿ ಆಗುವ ಅಗತ್ಯತೆ ಇದೆ. ಈ ಸವಾಲಿನ ವಿರುದ್ಧ ಕೇಂದ್ರ ಸರ್ಕಾರ ಹೋರಾಡುತ್ತಿದ್ದು, ಅದಕ್ಕೆ ನೆರವು ನೀಡುವ ಸಲುವಾಗಿ 24 ಕ್ರಯೋಜೆನಿಕ್​ ಕಂಟೇನರ್​ಗಳನ್ನು ಆಮದು ಮಾಡಿಕೊಳ್ಳುತ್ತಿರುವುದಾಗಿ ಟಾಟಾ ಗ್ರೂಪ್​ ತಿಳಿಸಿದೆ. ಅಷ್ಟೇ ಅಲ್ಲ ಕೊವಿಡ್​ 19 ವಿರುದ್ಧ ಹೋರಾಟಕ್ಕೆ, ಆಮ್ಲಜನಕ ಕೊರತೆ ನೀಗಿಸಲು ನಮ್ಮ ಕೈಯಲಿ ಎಷ್ಟು ಸಾಧ್ಯವೋ ಅಷ್ಟೋ ಸಹಾಯ ಮಾಡುತ್ತೇವೆ ಎಂದೂ ಟಾಟಾ ಗ್ರೂಪ್ ಹೇಳಿದೆ. ಈ ಕ್ರಯೋಜೆನಿಕ್​ ಕಂಟೇನರ್​​ಗಳು ದ್ರವರೂಪದ ಆಮ್ಲಜನಕ ಸಾಗಣೆಗೆ ಸಹಾಯ ಮಾಡಲಿವೆ.

ಟಾಟಾ ಗ್ರೂಪ್​ನ ಈ ನೆರವನ್ನು ಪ್ರಧಾನಿ ನರೇಂದ್ರ ಮೋದಿಯವರು ಸ್ವಾಗತಿಸಿದ್ದಾರೆ ಮತ್ತು ಶ್ಲಾಘಿಸಿದ್ದಾರೆ. ಇದು ನಿಜಕ್ಕೂ ಸಹಾನುಭೂತಿ. ಭಾರತದ ಜನರು ಒಗ್ಗಟ್ಟಾಗಿ ಕೊರೊನಾ ವಿರುದ್ಧ ಹೋರಾಡುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಕಳೆದ ವರ್ಷವೂ ರತನ್​ ಟಾಟಾ ಅವರ ಟಾಟಾ ಟ್ರಸ್ಟ್​​ನಿಂದ ಕೊರೊನಾ ವಿರುದ್ಧ ಹೋರಾಟಕ್ಕೆ 500 ಕೋಟಿ ರೂ.ನೀಡಲಾಗಿತ್ತು. ಹಾಗೇ ಟಾಟಾ ಸನ್ಸ್​ ವತಿಯಿಂದ 1000 ಕೋಟಿ ರೂ. ನೀಡಲಾಗಿತ್ತು. ಈ ಬಾರಿಯೂ ಟಾಟಾ ಗ್ರೂಪ್​ ತನ್ನ ಬದ್ಧತೆ ತೋರಿಸಿದೆ. ದೇಶಕ್ಕೆ ಆಪತ್ತು ಬಂದಾಗ ಅದರ ವಿರುದ್ಧ ಹೋರಾಟದಲ್ಲಿ ನಾವಿದ್ದೇವೆ ಎಂಬುದನ್ನು ಮತ್ತೊಮ್ಮೆ ತೋರಿಸಿದೆ.

ಇದನ್ನೂ ಓದಿ: IPL 2021: ವೇಗವಾಗಿ 5000 ರನ್ ಪೂರೈಸಿದ ಮೊದಲ ಭಾರತೀಯ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರನಾದ ಕನ್ನಡಿಗ ಕೆ. ಎಲ್ ರಾಹುಲ್

ಪತ್ನಿ ತಂಗಿ ಮೇಲೆ ಕಣ್ಣು ಹಾಕಿದ ಧಾರವಾಡದ ಸರ್ಕಾರಿ ನೌಕರ; ಅಪಹರಣ ಮಾಡಿಸಲು ಹೋಗಿ ಜೈಲು ಪಾಲು

Published On - 6:22 pm, Wed, 21 April 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!