AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸಿಜನ್​ ಅಭಾವ ಸಮಸ್ಯೆ ನೀಗಿಸಲು ಕೇಂದ್ರದ ನೆರವಿಗೆ ನಿಂತ ಟಾಟಾ ಗ್ರೂಪ್​; 24 ಕ್ರಯೋಜೆನಿಕ್​ ಕಂಟೇನರ್​ ಆಮದು

ಟಾಟಾ ಗ್ರೂಪ್​ನ ಈ ನೆರವನ್ನು ಪ್ರಧಾನಿ ನರೇಂದ್ರ ಮೋದಿಯವರು ಸ್ವಾಗತಿಸಿದ್ದಾರೆ ಮತ್ತು ಶ್ಲಾಘಿಸಿದ್ದಾರೆ. ಇದು ನಿಜಕ್ಕೂ ಸಹಾನುಭೂತಿ ಎಂದು ಹೇಳಿದ್ದಾರೆ.

ಆಕ್ಸಿಜನ್​ ಅಭಾವ ಸಮಸ್ಯೆ ನೀಗಿಸಲು ಕೇಂದ್ರದ ನೆರವಿಗೆ ನಿಂತ ಟಾಟಾ ಗ್ರೂಪ್​; 24 ಕ್ರಯೋಜೆನಿಕ್​ ಕಂಟೇನರ್​ ಆಮದು
ರತನ್ ಟಾಟಾ
Lakshmi Hegde
|

Updated on:Apr 21, 2021 | 6:24 PM

Share

ನವದೆಹಲಿ: ದೇಶದಲ್ಲಿ ಸದ್ಯ ಅತಿದೊಡ್ಡ ಸವಾಲಾಗಿ ಕಾಡುತ್ತಿರುವುದು ವೈದ್ಯಕೀಯ ಆಕ್ಸಿಜನ್ ಕೊರತೆ. ಹಲವು ರಾಜ್ಯಗಳ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕವಿಲ್ಲ ಎಂಬ ಕೂಗು ಕೇಳಿಬರುತ್ತಿದ್ದು, ಅದರ ಪೂರೈಕೆಗೆ ಕೇಂದ್ರ ಸರ್ಕಾರವೂ ಸಹ ಕ್ರಮ ಕೈಗೊಳ್ಳುತ್ತಿದೆ. ಅಗತ್ಯ ಇರುವ ರಾಜ್ಯಗಳಿಗೆ ಆಕ್ಸಿಜನ್​ ಕಳಿಸುವ ವ್ಯವಸ್ಥೆ ಮಾಡುತ್ತಿದೆ. ಕೊರೊನಾ ವಿರುದ್ಧ ಹೋರಾಟದಲ್ಲಿ ಎದುರಾಗಿರುವ ಆಕ್ಸಿಜನ್​ ಸಮಸ್ಯೆಯನ್ನು ನೀಗಿಸಲು ಇದೀಗ ಟಾಟಾ ಗ್ರೂಪ್​ ಕೇಂದ್ರ ಸರ್ಕಾರಕ್ಕೆ ಸಹಾಯ ಮಾಡಲು ನಿರ್ಧರಿಸಿದೆ.

ಭಾರತದಾದ್ಯಂತ ಹಲವು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಮಸ್ಯೆ ಎದುರಾಗಿದೆ. ಸಾಗಣೆ ಇನ್ನಷ್ಟು ತ್ವರಿತವಾಗಿ ಆಗುವ ಅಗತ್ಯತೆ ಇದೆ. ಈ ಸವಾಲಿನ ವಿರುದ್ಧ ಕೇಂದ್ರ ಸರ್ಕಾರ ಹೋರಾಡುತ್ತಿದ್ದು, ಅದಕ್ಕೆ ನೆರವು ನೀಡುವ ಸಲುವಾಗಿ 24 ಕ್ರಯೋಜೆನಿಕ್​ ಕಂಟೇನರ್​ಗಳನ್ನು ಆಮದು ಮಾಡಿಕೊಳ್ಳುತ್ತಿರುವುದಾಗಿ ಟಾಟಾ ಗ್ರೂಪ್​ ತಿಳಿಸಿದೆ. ಅಷ್ಟೇ ಅಲ್ಲ ಕೊವಿಡ್​ 19 ವಿರುದ್ಧ ಹೋರಾಟಕ್ಕೆ, ಆಮ್ಲಜನಕ ಕೊರತೆ ನೀಗಿಸಲು ನಮ್ಮ ಕೈಯಲಿ ಎಷ್ಟು ಸಾಧ್ಯವೋ ಅಷ್ಟೋ ಸಹಾಯ ಮಾಡುತ್ತೇವೆ ಎಂದೂ ಟಾಟಾ ಗ್ರೂಪ್ ಹೇಳಿದೆ. ಈ ಕ್ರಯೋಜೆನಿಕ್​ ಕಂಟೇನರ್​​ಗಳು ದ್ರವರೂಪದ ಆಮ್ಲಜನಕ ಸಾಗಣೆಗೆ ಸಹಾಯ ಮಾಡಲಿವೆ.

ಟಾಟಾ ಗ್ರೂಪ್​ನ ಈ ನೆರವನ್ನು ಪ್ರಧಾನಿ ನರೇಂದ್ರ ಮೋದಿಯವರು ಸ್ವಾಗತಿಸಿದ್ದಾರೆ ಮತ್ತು ಶ್ಲಾಘಿಸಿದ್ದಾರೆ. ಇದು ನಿಜಕ್ಕೂ ಸಹಾನುಭೂತಿ. ಭಾರತದ ಜನರು ಒಗ್ಗಟ್ಟಾಗಿ ಕೊರೊನಾ ವಿರುದ್ಧ ಹೋರಾಡುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಕಳೆದ ವರ್ಷವೂ ರತನ್​ ಟಾಟಾ ಅವರ ಟಾಟಾ ಟ್ರಸ್ಟ್​​ನಿಂದ ಕೊರೊನಾ ವಿರುದ್ಧ ಹೋರಾಟಕ್ಕೆ 500 ಕೋಟಿ ರೂ.ನೀಡಲಾಗಿತ್ತು. ಹಾಗೇ ಟಾಟಾ ಸನ್ಸ್​ ವತಿಯಿಂದ 1000 ಕೋಟಿ ರೂ. ನೀಡಲಾಗಿತ್ತು. ಈ ಬಾರಿಯೂ ಟಾಟಾ ಗ್ರೂಪ್​ ತನ್ನ ಬದ್ಧತೆ ತೋರಿಸಿದೆ. ದೇಶಕ್ಕೆ ಆಪತ್ತು ಬಂದಾಗ ಅದರ ವಿರುದ್ಧ ಹೋರಾಟದಲ್ಲಿ ನಾವಿದ್ದೇವೆ ಎಂಬುದನ್ನು ಮತ್ತೊಮ್ಮೆ ತೋರಿಸಿದೆ.

ಇದನ್ನೂ ಓದಿ: IPL 2021: ವೇಗವಾಗಿ 5000 ರನ್ ಪೂರೈಸಿದ ಮೊದಲ ಭಾರತೀಯ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರನಾದ ಕನ್ನಡಿಗ ಕೆ. ಎಲ್ ರಾಹುಲ್

ಪತ್ನಿ ತಂಗಿ ಮೇಲೆ ಕಣ್ಣು ಹಾಕಿದ ಧಾರವಾಡದ ಸರ್ಕಾರಿ ನೌಕರ; ಅಪಹರಣ ಮಾಡಿಸಲು ಹೋಗಿ ಜೈಲು ಪಾಲು

Published On - 6:22 pm, Wed, 21 April 21

2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!