ಯೋಗಿಯೊಂದಿಗೆ ಗೌಪ್ಯ ಮಾಹಿತಿ ಹಂಚಿಕೊಂಡ ಆರೋಪ: ಎನ್ಎಸ್ಇ ಮಾಜಿ ಎಂಡಿ ಮನೆಗೆ ಐಟಿ ದಾಳಿ

ಭಾರತದ ಅತಿದೊಡ್ಡ ಸ್ಟಾಕ್ ಎಕ್ಸ್‌ಚೇಂಜ್‌ ಎನ್‌ಎಸ್‌ಇಯ ಮಾಜಿ ಮುಖ್ಯಸ್ಥರಾಗಿರುವ ಚಿತ್ರಾ ರಾಮಕೃಷ್ಣ ಹಿಮಾಲಯದ ಓರ್ವ ಯೋಗಿಯೊಂದಿಗೆ ಗೌಪ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮಾತ್ರವಲ್ಲದೆ ಆ ಯೋಗಿಯ ಸಲಹೆಯನ್ನು ಪಡೆದು ನಿರ್ಧಾರಗಳನ್ನು ಕೈಗೊಂಡಿದ್ದಾರೆ

ಯೋಗಿಯೊಂದಿಗೆ ಗೌಪ್ಯ ಮಾಹಿತಿ ಹಂಚಿಕೊಂಡ ಆರೋಪ: ಎನ್ಎಸ್ಇ ಮಾಜಿ ಎಂಡಿ ಮನೆಗೆ ಐಟಿ ದಾಳಿ
ಚಿತ್ರಾ ರಾಮಕೃಷ್ಣ
Follow us
| Updated By: ರಶ್ಮಿ ಕಲ್ಲಕಟ್ಟ

Updated on:Feb 17, 2022 | 1:28 PM

ದೆಹಲಿ: ಭಾರತದ ಅತಿ ದೊಡ್ಡ ಷೇರು ವಿನಿಮಯ ಕೇಂದ್ರ ಎನ್‌ಎಸ್‌ಇ (NSE)ಮಾಜಿ ಎಂಡಿ ಮತ್ತು ಸಿಇಒ ಚಿತ್ರಾ ರಾಮಕೃಷ್ಣ ಅವರು ಮತ್ತು ಇತರರ ವಿರುದ್ಧ ತೆರಿಗೆ ವಂಚನೆ ತನಿಖೆಯ ಭಾಗವಾಗಿ ಮುಂಬೈನಲ್ಲಿ ಆದಾಯ ತೆರಿಗೆ ಇಲಾಖೆ (Income Tax Department) ಗುರುವಾರ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇತ್ತೀಚಿನ ಸೆಬಿ ಆದೇಶದ ನಂತರ ಚಿತ್ರಾ ರಾಮಕೃಷ್ಣ (Chitra Ramkrishna) ಅವರು ಸುದ್ದಿಯಲ್ಲಿದ್ದಾರೆ. ಭಾರತದ ಅತಿದೊಡ್ಡ ಸ್ಟಾಕ್ ಎಕ್ಸ್‌ಚೇಂಜ್‌ ಎನ್‌ಎಸ್‌ಇಯ ಮಾಜಿ ಮುಖ್ಯಸ್ಥರಾಗಿರುವ ಚಿತ್ರಾ ರಾಮಕೃಷ್ಣ ಹಿಮಾಲಯದ ಓರ್ವ ಯೋಗಿಯೊಂದಿಗೆ ಗೌಪ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮಾತ್ರವಲ್ಲದೆ ಆ ಯೋಗಿಯ ಸಲಹೆಯನ್ನು ಪಡೆದು ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂದು ಮಾರುಕಟ್ಟೆ ನಿಯಂತ್ರಕ ಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಹೇಳಿರುವುದಾಗಿ ರಾಯಿಟರ್ಸ್ ವರದಿ ಮಾಡಿತ್ತು. ಆಕೆಯ ಮತ್ತು ಇತರರ ವಿರುದ್ಧ ತೆರಿಗೆ ವಂಚನೆ ಮತ್ತು ಹಣಕಾಸಿನ ಅಕ್ರಮಗಳ ಆರೋಪಗಳನ್ನು ಪರಿಶೀಲಿಸುವ ನಿಟ್ಟಿನಲ್ಲಿ ಈ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಇದಲ್ಲದೆ, ಎನ್‌ಎಸ್‌ಇಯ ಹಣಕಾಸು ಮತ್ತು ವ್ಯವಹಾರ ಯೋಜನೆಗಳು, ಡಿವಿಡೆಂಡ್ ಸಿನಾರಿಯೊ ಮತ್ತು ಹಣಕಾಸು ಫಲಿತಾಂಶಗಳು ಸೇರಿದಂತೆ ಕೆಲವು ಆಂತರಿಕ ಗೌಪ್ಯ ಮಾಹಿತಿಯನ್ನು ರಾಮಕೃಷ್ಣ ಅವರು ಯೋಗಿಯೊಂದಿಗೆ ಹಂಚಿಕೊಂಡಿದ್ದಾರೆ. ಎಕ್ಸ್‌ಚೇಂಜ್‌ನ ಉದ್ಯೋಗಿಗಳ ಕಾರ್ಯಕ್ಷಮತೆಯ ಮೌಲ್ಯಮಾಪನಗಳ ಬಗ್ಗೆ ಅವರನ್ನು ಸಮಾಲೋಚಿಸಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಮಕೃಷ್ಣ ಅವರು ಏಪ್ರಿಲ್, 2013 ರಿಂದ ಡಿಸೆಂಬರ್, 2016 ರವರೆಗೆ ಎನ್ಎಸ್ಇಯ ಎಂಡಿ ಮತ್ತು ಸಿಇಒ ಆಗಿದ್ದರು.

ಐಟಿ ಅಧಿಕಾರಿಗಳು ಮುಂಬೈನಲ್ಲಿರುವ ಆಕೆಯ ನಿವಾಸದಲ್ಲಿದ್ದಾರೆ  ಎಂದು ವಿಷಯ ತಿಳಿದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ ಎಂದು ಲೈವ್ ಮಿಂಟ್ ವರದಿ ಮಾಡಿದೆ.

ಅಪರಿಚಿತ ಮೂರನೇ ವ್ಯಕ್ತಿಯ ಆಂತರಿಕ ವಿನಿಮಯದ ಮಾಹಿತಿಯನ್ನು ರವಾನಿಸಿದಾಗ ಅವರು ಅಕ್ರಮ ಲಾಭ ಗಳಿಸಿದ್ದಾರೆ ಎಂಬ ಆರೋಪದ ಮೇಲೆ ತೆರಿಗೆ ಇಲಾಖೆ ಶೋಧ ನಡೆಸುತ್ತಿದೆ ಎಂದು ಈ ವ್ಯಕ್ತಿ ತಿಳಿಸಿದ್ದಾರೆ. ಈ ಶೋಧವು ಫೆಬ್ರವರಿ 11 ರಂದು ಜಾರಿಗೊಳಿಸಲಾದ ಸೆಬಿ ಆದೇಶದ ಹಿನ್ನೆಲೆಯಲ್ಲಿ ಬಂದಿದೆ. ಅಲ್ಲಿ ನಿಯಂತ್ರಕವು ಎನ್ಎಸ್ಇನ ಮಾಜಿ ಮುಖ್ಯ ಕಾರ್ಯನಿರ್ವಾಹಕರಾದ ಚಿತ್ರಾ ರಾಮಕೃಷ್ಣ ಅವರ ಆಡಳಿತ ಮತ್ತು ನೈತಿಕ ನಡವಳಿಕೆಯಲ್ಲಿ ಗಂಭೀರ ಲೋಪಗಳನ್ನು ಕಂಡುಹಿಡಿದಿದೆ.

ಸೆಬಿ ತನ್ನ ಆದೇಶದಲ್ಲಿ ರಾಮಕೃಷ್ಣ ಅವರು ಅಪರಿಚಿತ ಮೂರನೇ ವ್ಯಕ್ತಿಯೊಂದಿಗೆ ವಿನಿಮಯಕ್ಕೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಹಂಚಿಕೊಳ್ಳುತ್ತಿರುವುದನ್ನು ಪತ್ತೆ ಹಚ್ಚಿದ್ದು ಆಕೆಗೆ ₹3 ಕೋಟಿ ದಂಡ ವಿಧಿಸಿದೆ. ಎನ್‌ಎಸ್‌ಇಯ ಹಣಕಾಸು ಮತ್ತು ವ್ಯಾಪಾರ ಯೋಜನೆಗಳ ಹಂಚಿಕೆಯು ಊಹಿಸಲೂ ಸಾಧ್ಯವಾಗದ ಕಾರ್ಯವಾಗಿದೆ. ಅದು ಷೇರು ವಿನಿಮಯದ ಅಡಿಪಾಯವನ್ನು ಅಲುಗಾಡಿಸಬಹುದು ಎಂದು ನಿಯಂತ್ರಕರ ಆದೇಶವು ಹೇಳಿದೆ.

ನಿಯಂತ್ರಕ ನಿಯಮಗಳ ಉಲ್ಲಂಘನೆಯಲ್ಲಿ ನಾಮನಿರ್ದೇಶನ ಮತ್ತು ಸಂಭಾವನೆ ಸಮಿತಿಯಿಂದ (ಎನ್‌ಆರ್‌ಸಿ) ಅದನ್ನು ತೆರವುಗೊಳಿಸದೆ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ಆನಂದ್ ಸುಬ್ರಮಣಿಯನ್ ಅವರನ್ನು ನೇಮಿಸಿರುವುದು ಮತ್ತೊಂದು ಗಂಭೀರ ಲೋಪವಾಗಿದೆ.

ಸೆಬಿ ಆದೇಶದ ಪ್ರಕಾರ, ಇದು ರಾಮಕೃಷ್ಣ ಮತ್ತು ಸುಬ್ರಮಣಿಯನ್ ಮತ್ತು ಅಪರಿಚಿತ ಗುರುಗಳನ್ನು ಒಳಗೊಂಡ “ಹಣ ಮಾಡುವ ಯೋಜನೆಯ ಸ್ಪಷ್ಟವಾದ ಪಿತೂರಿ” ಆಗಿತ್ತು. ರಾಮಕೃಷ್ಣ ವಿರುದ್ಧ ಇದು ಎರಡನೇ ಆದಾಯ ತೆರಿಗೆ ತನಿಖೆಯಾಗಿದೆ. ಕೊ-ಲೊಕೇಷನ್ ಹಗರಣ ಎಂದು ಕರೆಯಲ್ಪಡುವ ಪ್ರಕರಣದಲ್ಲಿ ಈ ಹಿಂದೆ ನವೆಂಬರ್ 2017 ರಲ್ಲಿ ದಾಳಿ ನಡೆದಿತ್ತು.

ಇದನ್ನೂ ಓದಿ: ಬುಲ್ಡೋಜರ್ ಹೇಳಿಕೆ: ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್‌ಗೆ ಚುನಾವಣಾ ಆಯೋಗ ನೋಟಿಸ್

Published On - 1:11 pm, Thu, 17 February 22

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ