ಯಾರೂ ಕಾನೂನಿಗಿಂತ ಮೇಲಲ್ಲ: ಬಿಬಿಸಿ ಕಚೇರಿಯಲ್ಲಿ ಐಟಿ ಪರಿಶೀಲನೆ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್

BBC Officeತೆರಿಗೆ ಅಧಿಕಾರಿಗಳು ಈಗಾಗಲೇ ನೌಕರರ ವೈಯಕ್ತಿಕ ಲ್ಯಾಪ್‌ಟಾಪ್ ಮತ್ತು ಸೆಲ್‌ಫೋನ್‌ಗಳನ್ನು ಪರಿಶೀಲಿಸಿದ್ದಾರೆ. ಡೆಸ್ಕ್‌ಟಾಪ್‌ಗಳನ್ನು ಸಹ ಪರಿಶೀಲಿಸಿದ್ದಾರೆ. " tax " ಎಂಬ ಕೀವರ್ಡ್‌ನೊಂದಿಗೆ ಉದ್ಯೋಗಿಗಳ ವೈಯಕ್ತಿಕ ಲಾಗಿನ್‌ಗಳನ್ನು ಹುಡುಕುತ್ತಿದ್ದಾರೆ.

ಯಾರೂ ಕಾನೂನಿಗಿಂತ ಮೇಲಲ್ಲ: ಬಿಬಿಸಿ ಕಚೇರಿಯಲ್ಲಿ ಐಟಿ ಪರಿಶೀಲನೆ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್
ಅನುರಾಗ್ ಠಾಕೂರ್
Follow us
|

Updated on: Feb 14, 2023 | 9:41 PM

ನವದೆಹಲಿ: ದೆಹಲಿ ಮತ್ತು ಮುಂಬೈ ಬಿಬಿಸಿ (British Broadcasting Corporation) ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಪರಿಶೀಲನೆ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಅನುರಾಗ್ ಠಾಕೂರ್(Anurag Thakur), “ಯಾರೂ ಕಾನೂನಿಗಿಂತ ಮೇಲಲ್ಲ” ಎಂದು ಹೇಳಿದ್ದಾರೆ. ಆದಾಯ ತೆರಿಗೆ ಇಲಾಖೆಯ ಕ್ರಮದ ಬಗ್ಗೆ ವಿರೋಧ ಮತ್ತು ಸಂಪಾದಕರ ಗಿಲ್ಡ್ ಟೀಕೆಗಳ ನಡುವೆಬಿಜೆಪಿ, ಬಿಬಿಸಿ ಭಾರತದ ಬಗ್ಗೆ “ವಿಷಕಾರಿ ಮತ್ತು ಆಧಾರ ರಹಿತ” ವರದಿ ಮಾಡುತ್ತಿದೆ ಎಂದು ಆರೋಪಿಸಿದೆ. ಆಪಾದಿತ ತೆರಿಗೆ ವಂಚನೆಗೆ ಸಂಬಂಧಿಸಿದ ಪರಿಶೀಲನೆ ಇಂದು ಬೆಳಗ್ಗೆ ಆರಂಭಗೊಂಡಿದ್ದು, ರಾತ್ರಿಯೂ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ.

ಆದಾಯ ತೆರಿಗೆ ಅಧಿಕಾರಿಗಳು, 2012 ರ ಹಿಂದಿನ ಖಾತೆಯ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.

ತೆರಿಗೆ ಅಧಿಕಾರಿಗಳು ಈಗಾಗಲೇ ನೌಕರರ ವೈಯಕ್ತಿಕ ಲ್ಯಾಪ್‌ಟಾಪ್ ಮತ್ತು ಸೆಲ್‌ಫೋನ್‌ಗಳನ್ನು ಪರಿಶೀಲಿಸಿದ್ದಾರೆ. ಡೆಸ್ಕ್‌ಟಾಪ್‌ಗಳನ್ನು ಸಹ ಪರಿಶೀಲಿಸಿದ್ದಾರೆ. ” tax ” ಎಂಬ ಕೀವರ್ಡ್‌ನೊಂದಿಗೆ ಉದ್ಯೋಗಿಗಳ ವೈಯಕ್ತಿಕ ಲಾಗಿನ್‌ಗಳನ್ನು ಹುಡುಕುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆಯು ಪರಿಶೀಲನೆಯ ವಿವರಗಳನ್ನು ಹಂಚಿಕೊಳ್ಳುತ್ತದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ:BBC Tax Survey: ದೆಹಲಿ ಮತ್ತು ಮುಂಬೈ ಕಚೇರಿಗಳಲ್ಲಿ ಐಟಿ ಪರಿಶೀಲನೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ: ಬಿಬಿಸಿ

ಬಿಬಿಸಿಯಲ್ಲಿನ ಐಟಿ ಪರಿಶೀಲನೆಯನ್ನು ಅಂತರಾಷ್ಟ್ರೀಯ ಸಮುದಾಯವು ತೀವ್ರವಾಗಿ ವೀಕ್ಷಿಸುತ್ತಿದೆ. ಯುಕೆ ತನ್ನ ರಾಜ್ಯ ಪ್ರಸಾರದಲ್ಲಿ ಪರಿಸ್ಥಿತಿಯನ್ನು “ನಿಕಟವಾಗಿ ಗಮನಿಸುತ್ತಿದೆ” ಎಂದು ಬ್ರಿಟಿಷ್ ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​