AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೂ ಕಾನೂನಿಗಿಂತ ಮೇಲಲ್ಲ: ಬಿಬಿಸಿ ಕಚೇರಿಯಲ್ಲಿ ಐಟಿ ಪರಿಶೀಲನೆ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್

BBC Officeತೆರಿಗೆ ಅಧಿಕಾರಿಗಳು ಈಗಾಗಲೇ ನೌಕರರ ವೈಯಕ್ತಿಕ ಲ್ಯಾಪ್‌ಟಾಪ್ ಮತ್ತು ಸೆಲ್‌ಫೋನ್‌ಗಳನ್ನು ಪರಿಶೀಲಿಸಿದ್ದಾರೆ. ಡೆಸ್ಕ್‌ಟಾಪ್‌ಗಳನ್ನು ಸಹ ಪರಿಶೀಲಿಸಿದ್ದಾರೆ. " tax " ಎಂಬ ಕೀವರ್ಡ್‌ನೊಂದಿಗೆ ಉದ್ಯೋಗಿಗಳ ವೈಯಕ್ತಿಕ ಲಾಗಿನ್‌ಗಳನ್ನು ಹುಡುಕುತ್ತಿದ್ದಾರೆ.

ಯಾರೂ ಕಾನೂನಿಗಿಂತ ಮೇಲಲ್ಲ: ಬಿಬಿಸಿ ಕಚೇರಿಯಲ್ಲಿ ಐಟಿ ಪರಿಶೀಲನೆ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್
ಅನುರಾಗ್ ಠಾಕೂರ್
ರಶ್ಮಿ ಕಲ್ಲಕಟ್ಟ
|

Updated on: Feb 14, 2023 | 9:41 PM

Share

ನವದೆಹಲಿ: ದೆಹಲಿ ಮತ್ತು ಮುಂಬೈ ಬಿಬಿಸಿ (British Broadcasting Corporation) ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಪರಿಶೀಲನೆ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಅನುರಾಗ್ ಠಾಕೂರ್(Anurag Thakur), “ಯಾರೂ ಕಾನೂನಿಗಿಂತ ಮೇಲಲ್ಲ” ಎಂದು ಹೇಳಿದ್ದಾರೆ. ಆದಾಯ ತೆರಿಗೆ ಇಲಾಖೆಯ ಕ್ರಮದ ಬಗ್ಗೆ ವಿರೋಧ ಮತ್ತು ಸಂಪಾದಕರ ಗಿಲ್ಡ್ ಟೀಕೆಗಳ ನಡುವೆಬಿಜೆಪಿ, ಬಿಬಿಸಿ ಭಾರತದ ಬಗ್ಗೆ “ವಿಷಕಾರಿ ಮತ್ತು ಆಧಾರ ರಹಿತ” ವರದಿ ಮಾಡುತ್ತಿದೆ ಎಂದು ಆರೋಪಿಸಿದೆ. ಆಪಾದಿತ ತೆರಿಗೆ ವಂಚನೆಗೆ ಸಂಬಂಧಿಸಿದ ಪರಿಶೀಲನೆ ಇಂದು ಬೆಳಗ್ಗೆ ಆರಂಭಗೊಂಡಿದ್ದು, ರಾತ್ರಿಯೂ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ.

ಆದಾಯ ತೆರಿಗೆ ಅಧಿಕಾರಿಗಳು, 2012 ರ ಹಿಂದಿನ ಖಾತೆಯ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.

ತೆರಿಗೆ ಅಧಿಕಾರಿಗಳು ಈಗಾಗಲೇ ನೌಕರರ ವೈಯಕ್ತಿಕ ಲ್ಯಾಪ್‌ಟಾಪ್ ಮತ್ತು ಸೆಲ್‌ಫೋನ್‌ಗಳನ್ನು ಪರಿಶೀಲಿಸಿದ್ದಾರೆ. ಡೆಸ್ಕ್‌ಟಾಪ್‌ಗಳನ್ನು ಸಹ ಪರಿಶೀಲಿಸಿದ್ದಾರೆ. ” tax ” ಎಂಬ ಕೀವರ್ಡ್‌ನೊಂದಿಗೆ ಉದ್ಯೋಗಿಗಳ ವೈಯಕ್ತಿಕ ಲಾಗಿನ್‌ಗಳನ್ನು ಹುಡುಕುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆಯು ಪರಿಶೀಲನೆಯ ವಿವರಗಳನ್ನು ಹಂಚಿಕೊಳ್ಳುತ್ತದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ:BBC Tax Survey: ದೆಹಲಿ ಮತ್ತು ಮುಂಬೈ ಕಚೇರಿಗಳಲ್ಲಿ ಐಟಿ ಪರಿಶೀಲನೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ: ಬಿಬಿಸಿ

ಬಿಬಿಸಿಯಲ್ಲಿನ ಐಟಿ ಪರಿಶೀಲನೆಯನ್ನು ಅಂತರಾಷ್ಟ್ರೀಯ ಸಮುದಾಯವು ತೀವ್ರವಾಗಿ ವೀಕ್ಷಿಸುತ್ತಿದೆ. ಯುಕೆ ತನ್ನ ರಾಜ್ಯ ಪ್ರಸಾರದಲ್ಲಿ ಪರಿಸ್ಥಿತಿಯನ್ನು “ನಿಕಟವಾಗಿ ಗಮನಿಸುತ್ತಿದೆ” ಎಂದು ಬ್ರಿಟಿಷ್ ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು