AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೂ ಕಾನೂನಿಗಿಂತ ಮೇಲಲ್ಲ: ಬಿಬಿಸಿ ಕಚೇರಿಯಲ್ಲಿ ಐಟಿ ಪರಿಶೀಲನೆ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್

BBC Officeತೆರಿಗೆ ಅಧಿಕಾರಿಗಳು ಈಗಾಗಲೇ ನೌಕರರ ವೈಯಕ್ತಿಕ ಲ್ಯಾಪ್‌ಟಾಪ್ ಮತ್ತು ಸೆಲ್‌ಫೋನ್‌ಗಳನ್ನು ಪರಿಶೀಲಿಸಿದ್ದಾರೆ. ಡೆಸ್ಕ್‌ಟಾಪ್‌ಗಳನ್ನು ಸಹ ಪರಿಶೀಲಿಸಿದ್ದಾರೆ. " tax " ಎಂಬ ಕೀವರ್ಡ್‌ನೊಂದಿಗೆ ಉದ್ಯೋಗಿಗಳ ವೈಯಕ್ತಿಕ ಲಾಗಿನ್‌ಗಳನ್ನು ಹುಡುಕುತ್ತಿದ್ದಾರೆ.

ಯಾರೂ ಕಾನೂನಿಗಿಂತ ಮೇಲಲ್ಲ: ಬಿಬಿಸಿ ಕಚೇರಿಯಲ್ಲಿ ಐಟಿ ಪರಿಶೀಲನೆ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್
ಅನುರಾಗ್ ಠಾಕೂರ್
ರಶ್ಮಿ ಕಲ್ಲಕಟ್ಟ
|

Updated on: Feb 14, 2023 | 9:41 PM

Share

ನವದೆಹಲಿ: ದೆಹಲಿ ಮತ್ತು ಮುಂಬೈ ಬಿಬಿಸಿ (British Broadcasting Corporation) ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಪರಿಶೀಲನೆ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಅನುರಾಗ್ ಠಾಕೂರ್(Anurag Thakur), “ಯಾರೂ ಕಾನೂನಿಗಿಂತ ಮೇಲಲ್ಲ” ಎಂದು ಹೇಳಿದ್ದಾರೆ. ಆದಾಯ ತೆರಿಗೆ ಇಲಾಖೆಯ ಕ್ರಮದ ಬಗ್ಗೆ ವಿರೋಧ ಮತ್ತು ಸಂಪಾದಕರ ಗಿಲ್ಡ್ ಟೀಕೆಗಳ ನಡುವೆಬಿಜೆಪಿ, ಬಿಬಿಸಿ ಭಾರತದ ಬಗ್ಗೆ “ವಿಷಕಾರಿ ಮತ್ತು ಆಧಾರ ರಹಿತ” ವರದಿ ಮಾಡುತ್ತಿದೆ ಎಂದು ಆರೋಪಿಸಿದೆ. ಆಪಾದಿತ ತೆರಿಗೆ ವಂಚನೆಗೆ ಸಂಬಂಧಿಸಿದ ಪರಿಶೀಲನೆ ಇಂದು ಬೆಳಗ್ಗೆ ಆರಂಭಗೊಂಡಿದ್ದು, ರಾತ್ರಿಯೂ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ.

ಆದಾಯ ತೆರಿಗೆ ಅಧಿಕಾರಿಗಳು, 2012 ರ ಹಿಂದಿನ ಖಾತೆಯ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.

ತೆರಿಗೆ ಅಧಿಕಾರಿಗಳು ಈಗಾಗಲೇ ನೌಕರರ ವೈಯಕ್ತಿಕ ಲ್ಯಾಪ್‌ಟಾಪ್ ಮತ್ತು ಸೆಲ್‌ಫೋನ್‌ಗಳನ್ನು ಪರಿಶೀಲಿಸಿದ್ದಾರೆ. ಡೆಸ್ಕ್‌ಟಾಪ್‌ಗಳನ್ನು ಸಹ ಪರಿಶೀಲಿಸಿದ್ದಾರೆ. ” tax ” ಎಂಬ ಕೀವರ್ಡ್‌ನೊಂದಿಗೆ ಉದ್ಯೋಗಿಗಳ ವೈಯಕ್ತಿಕ ಲಾಗಿನ್‌ಗಳನ್ನು ಹುಡುಕುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆಯು ಪರಿಶೀಲನೆಯ ವಿವರಗಳನ್ನು ಹಂಚಿಕೊಳ್ಳುತ್ತದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ:BBC Tax Survey: ದೆಹಲಿ ಮತ್ತು ಮುಂಬೈ ಕಚೇರಿಗಳಲ್ಲಿ ಐಟಿ ಪರಿಶೀಲನೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ: ಬಿಬಿಸಿ

ಬಿಬಿಸಿಯಲ್ಲಿನ ಐಟಿ ಪರಿಶೀಲನೆಯನ್ನು ಅಂತರಾಷ್ಟ್ರೀಯ ಸಮುದಾಯವು ತೀವ್ರವಾಗಿ ವೀಕ್ಷಿಸುತ್ತಿದೆ. ಯುಕೆ ತನ್ನ ರಾಜ್ಯ ಪ್ರಸಾರದಲ್ಲಿ ಪರಿಸ್ಥಿತಿಯನ್ನು “ನಿಕಟವಾಗಿ ಗಮನಿಸುತ್ತಿದೆ” ಎಂದು ಬ್ರಿಟಿಷ್ ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!