AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೂ ಕಾನೂನಿಗಿಂತ ಮೇಲಲ್ಲ: ಬಿಬಿಸಿ ಕಚೇರಿಯಲ್ಲಿ ಐಟಿ ಪರಿಶೀಲನೆ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್

BBC Officeತೆರಿಗೆ ಅಧಿಕಾರಿಗಳು ಈಗಾಗಲೇ ನೌಕರರ ವೈಯಕ್ತಿಕ ಲ್ಯಾಪ್‌ಟಾಪ್ ಮತ್ತು ಸೆಲ್‌ಫೋನ್‌ಗಳನ್ನು ಪರಿಶೀಲಿಸಿದ್ದಾರೆ. ಡೆಸ್ಕ್‌ಟಾಪ್‌ಗಳನ್ನು ಸಹ ಪರಿಶೀಲಿಸಿದ್ದಾರೆ. " tax " ಎಂಬ ಕೀವರ್ಡ್‌ನೊಂದಿಗೆ ಉದ್ಯೋಗಿಗಳ ವೈಯಕ್ತಿಕ ಲಾಗಿನ್‌ಗಳನ್ನು ಹುಡುಕುತ್ತಿದ್ದಾರೆ.

ಯಾರೂ ಕಾನೂನಿಗಿಂತ ಮೇಲಲ್ಲ: ಬಿಬಿಸಿ ಕಚೇರಿಯಲ್ಲಿ ಐಟಿ ಪರಿಶೀಲನೆ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್
ಅನುರಾಗ್ ಠಾಕೂರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 14, 2023 | 9:41 PM

Share

ನವದೆಹಲಿ: ದೆಹಲಿ ಮತ್ತು ಮುಂಬೈ ಬಿಬಿಸಿ (British Broadcasting Corporation) ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಪರಿಶೀಲನೆ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಅನುರಾಗ್ ಠಾಕೂರ್(Anurag Thakur), “ಯಾರೂ ಕಾನೂನಿಗಿಂತ ಮೇಲಲ್ಲ” ಎಂದು ಹೇಳಿದ್ದಾರೆ. ಆದಾಯ ತೆರಿಗೆ ಇಲಾಖೆಯ ಕ್ರಮದ ಬಗ್ಗೆ ವಿರೋಧ ಮತ್ತು ಸಂಪಾದಕರ ಗಿಲ್ಡ್ ಟೀಕೆಗಳ ನಡುವೆಬಿಜೆಪಿ, ಬಿಬಿಸಿ ಭಾರತದ ಬಗ್ಗೆ “ವಿಷಕಾರಿ ಮತ್ತು ಆಧಾರ ರಹಿತ” ವರದಿ ಮಾಡುತ್ತಿದೆ ಎಂದು ಆರೋಪಿಸಿದೆ. ಆಪಾದಿತ ತೆರಿಗೆ ವಂಚನೆಗೆ ಸಂಬಂಧಿಸಿದ ಪರಿಶೀಲನೆ ಇಂದು ಬೆಳಗ್ಗೆ ಆರಂಭಗೊಂಡಿದ್ದು, ರಾತ್ರಿಯೂ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ.

ಆದಾಯ ತೆರಿಗೆ ಅಧಿಕಾರಿಗಳು, 2012 ರ ಹಿಂದಿನ ಖಾತೆಯ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.

ತೆರಿಗೆ ಅಧಿಕಾರಿಗಳು ಈಗಾಗಲೇ ನೌಕರರ ವೈಯಕ್ತಿಕ ಲ್ಯಾಪ್‌ಟಾಪ್ ಮತ್ತು ಸೆಲ್‌ಫೋನ್‌ಗಳನ್ನು ಪರಿಶೀಲಿಸಿದ್ದಾರೆ. ಡೆಸ್ಕ್‌ಟಾಪ್‌ಗಳನ್ನು ಸಹ ಪರಿಶೀಲಿಸಿದ್ದಾರೆ. ” tax ” ಎಂಬ ಕೀವರ್ಡ್‌ನೊಂದಿಗೆ ಉದ್ಯೋಗಿಗಳ ವೈಯಕ್ತಿಕ ಲಾಗಿನ್‌ಗಳನ್ನು ಹುಡುಕುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆಯು ಪರಿಶೀಲನೆಯ ವಿವರಗಳನ್ನು ಹಂಚಿಕೊಳ್ಳುತ್ತದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ:BBC Tax Survey: ದೆಹಲಿ ಮತ್ತು ಮುಂಬೈ ಕಚೇರಿಗಳಲ್ಲಿ ಐಟಿ ಪರಿಶೀಲನೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ: ಬಿಬಿಸಿ

ಬಿಬಿಸಿಯಲ್ಲಿನ ಐಟಿ ಪರಿಶೀಲನೆಯನ್ನು ಅಂತರಾಷ್ಟ್ರೀಯ ಸಮುದಾಯವು ತೀವ್ರವಾಗಿ ವೀಕ್ಷಿಸುತ್ತಿದೆ. ಯುಕೆ ತನ್ನ ರಾಜ್ಯ ಪ್ರಸಾರದಲ್ಲಿ ಪರಿಸ್ಥಿತಿಯನ್ನು “ನಿಕಟವಾಗಿ ಗಮನಿಸುತ್ತಿದೆ” ಎಂದು ಬ್ರಿಟಿಷ್ ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್