Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗು ಎಂದು ಒತ್ತಾಯ, ಕೋಪದಲ್ಲಿ ಮಹಿಳೆಯ ಕೊಲೆ ಮಾಡಿದ ಟ್ಯಾಕ್ಸಿ ಡ್ರೈವರ್

ಮದುವೆಯಾಗು ಎಂದು ಪದೇ ಪದೇ ಒತ್ತಡ ಹಾಕುತ್ತಿದ್ದ ಮಹಿಳೆಯನ್ನು ಟ್ಯಾಕ್ಸಿ ಡ್ರೈವರ್​ ಕೊಲೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಏಪ್ರಿಲ್ 25 ರ ಬೆಳಗ್ಗೆ ನವಿ ಮುಂಬೈನ ಉರಾನ್ ಪ್ರದೇಶದ ಚಿರ್ನರ್-ಖಾರ್ಪಾಡಾದ ಉದ್ದಕ್ಕೂ ತಲೇಖರ್‌ನಲ್ಲಿ ಒಣ ಚರಂಡಿಯಲ್ಲಿ ಮಹಿಳೆಯ ವಿರೂಪಗೊಂಡ ದೇಹವು ಹೊದಿಕೆಯಲ್ಲಿ ಸುತ್ತಿಕೊಂಡಿತ್ತು ಸ್ಥಿತಿಯಲ್ಲಿ ಪತ್ತೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮದುವೆಯಾಗು ಎಂದು ಒತ್ತಾಯ, ಕೋಪದಲ್ಲಿ ಮಹಿಳೆಯ ಕೊಲೆ ಮಾಡಿದ ಟ್ಯಾಕ್ಸಿ ಡ್ರೈವರ್
Follow us
ನಯನಾ ರಾಜೀವ್
|

Updated on: Apr 28, 2024 | 1:23 PM

ಮದುವೆಯಾಗು ಎಂದು ಒತ್ತಾಯ ಮಾಡಿದ್ದಕ್ಕೆ ಟ್ಯಾಕ್ಸಿ ಡ್ರೈವರ್ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ನವಿ ಮುಂಬೈನಲ್ಲಿ ನಡೆದಿದೆ. ಏಪ್ರಿಲ್ 25 ರ ಬೆಳಗ್ಗೆ ನವಿ ಮುಂಬೈನ ಉರಾನ್ ಪ್ರದೇಶದ ಚಿರ್ನರ್-ಖಾರ್ಪಾಡಾದ ಉದ್ದಕ್ಕೂ ತಲೇಖರ್‌ನಲ್ಲಿ ಒಣ ಚರಂಡಿಯಲ್ಲಿ ಮಹಿಳೆಯ ವಿರೂಪಗೊಂಡ ದೇಹವು ಹೊದಿಕೆಯಲ್ಲಿ ಸುತ್ತಿಕೊಂಡಿತ್ತು ಸ್ಥಿತಿಯಲ್ಲಿ ಪತ್ತೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು 302 (ಕೊಲೆ) ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಉರಾನ್ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಸತೀಶ್ ನಿಕಮ್ ತಿಳಿಸಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವಾಗ, ಏಪ್ರಿಲ್ 18 ರಂದು ನೆರೆಯ ಮುಂಬೈನ ಮಾನ್ಕುರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು. ಪರಿಶೀಲನೆಯ ನಂತರ, ಉರಾನ್‌ನಲ್ಲಿ ಪತ್ತೆಯಾದ ಶವ ನಾಪತ್ತೆಯಾದ ಮಹಿಳೆಯದ್ದು ಎಂದು ತಿಳಿದು ಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಶಿವಮೊಗ್ಗ: ಮೆಂಟಲ್ ಸೂರಿ ಹತ್ಯೆ ಪ್ರಕರಣ; ಮೃತನ ಮಗನೂ ಸೇರಿ ಮೂವರ ಬಂಧನ

ಹೆಚ್ಚಿನ ತನಿಖೆಯಿಂದ ಮಹಿಳೆ ಮುಂಬೈನ ನಾಗ್ಪಾಡಾ ನಿವಾಸಿ ಟ್ಯಾಕ್ಸಿ ಚಾಲಕನನ್ನು ಪ್ರೀತಿಸುತ್ತಿದ್ದಳು. ಮಹಿಳೆ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಳು ಆದರೆ ಅವನು ನಿರಾಕರಿಸಿದ್ದರಿಂದ ಅವರ ನಡುವೆ ವಿವಾದಕ್ಕೆ ಕಾರಣವಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ಏಪ್ರಿಲ್ 18 ರಂದು ಸಂಜೆ, ವ್ಯಕ್ತಿ ಮನ್ಖುರ್ದ್‌ನಿಂದ ಮಹಿಳೆಯನ್ನು ತನ್ನ ಕಾರಿನಲ್ಲಿ ಥಾಣೆ ಜಿಲ್ಲೆಯ ಕಲ್ಯಾಣ್ ಪ್ರದೇಶದ ಖಡವ್ಲಿಗೆ ಕರೆದುಕೊಂಡು ಹೋಗಿದ್ದ. ಏಪ್ರಿಲ್ 19 ರಂದು ಬೆಳಗಿನ ಜಾವ 1 ಗಂಟೆ ಸುಮಾರಿಗೆ ಆಕೆಯನ್ನು ಕೊಂದು ಶವವನ್ನು ನದಿಗೆ ಎಸೆದಿದ್ದಾನೆ ಎಂದು ಅವರು ಹೇಳಿದ್ದಾರೆ.

ಆರೋಪಿಯನ್ನು ಶನಿವಾರ ಬಂಧಿಸಿ ಸ್ಥಳೀಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಏಪ್ರಿಲ್ 29 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ