AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿಆರ್​ ವೆಬ್​ಸೈಟ್​​ನಲ್ಲಿ ತಾಂತ್ರಿಕ ದೋಷ; ಆದಾಯ ತೆರಿಗೆ ರಿಟರ್ನ್ಸ್​ ಸಲ್ಲಿಕೆ ಗಡುವು ಮತ್ತೆ ವಿಸ್ತರಣೆಯಾಗುವ ಸಾಧ್ಯತೆ?

ಆದರೆ ಕೊನೇ ದಿನ ಇನ್ನೆರಡು ದಿನ ಇರುವಾಗ ಮತ್ತೆ ಗಡುವು ಮುಂದೂಡುವಂತೆ ಆದಾಯ ತೆರಿಗೆ ಪಾವತಿದಾರರು ಆಗ್ರಹ ಮಾಡುತ್ತಿದ್ದಾರೆ. ಹೀಗಾಗಿ ಐಟಿ ರಿಟರ್ನ್ಸ್​ ಸಲ್ಲಿಕೆ ಗಡುವು ಮತ್ತೆ ಮುಂದೂಡುವ ಸಾಧ್ಯತೆ ಹೆಚ್ಚಾಗಿದೆ.

ಐಟಿಆರ್​ ವೆಬ್​ಸೈಟ್​​ನಲ್ಲಿ ತಾಂತ್ರಿಕ ದೋಷ; ಆದಾಯ ತೆರಿಗೆ ರಿಟರ್ನ್ಸ್​ ಸಲ್ಲಿಕೆ ಗಡುವು ಮತ್ತೆ ವಿಸ್ತರಣೆಯಾಗುವ ಸಾಧ್ಯತೆ?
ಸಾಂಕೇತಿಕ ಚಿತ್ರ
TV9 Web
| Edited By: |

Updated on:Dec 29, 2021 | 9:57 AM

Share

2020-21ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ (Income Tax Return)​ ಸಲ್ಲಿಕೆಗೆ ಡಿ.31 ಕೊನೇ ದಿನವಾಗಿದೆ. ಆದರೆ ಸೋಷಿಯಲ್ ಮೀಡಿಯಾ(Social Media)ದಲ್ಲಿ #Extend_Due_Date_Immediately ಎಂಬ ಹ್ಯಾಷ್​ಟ್ಯಾಗ್​ ಸಿಕ್ಕಾಪಟೆ ಟ್ರೆಂಡ್ ಆಗುತ್ತಿದೆ. ಅಂದರೆ ಆದಾಯ ತೆರಿಗೆ ರಿಟರ್ನ್ಸ್​ ಪಾವತಿಗೆ ನೀಡಲಾದ ಗಡುವನ್ನು ಕೂಡಲೇ ಮುಂದೂಡಬೇಕು ಎಂದು ಆದಾಯ ತೆರಿಗೆ ಪಾವತಿದಾರರು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸುತ್ತಿದ್ದಾರೆ. ಆದಾಯ ತೆರಿಗೆ ರಿಟರ್ನ್ಸ್​​ ವೆಬ್​ಸೈಟ್​​ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದರಿಂದ, ತೆರಿಗೆ ಪಾವತಿದಾರರು ಆದಾಯ ತೆರಿಗೆ ರಿಟರ್ನ್ಸ್​ ಸಲ್ಲಿಕೆ ಮಾಡಲು ತೀವ್ರ ಕಷ್ಟಪಡುತ್ತಿದ್ದಾರೆ.   

ವಾಸ್ತವದಲ್ಲಿ 2020-21ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್​​​ ಸಲ್ಲಿಕೆಗೆ 2021ರ ಜುಲೈ 31ನ್ನು ಕೊನೇದಿನವೆಂದು ಕೇಂದ್ರ ಸರ್ಕಾರ ಘೋಷಿಸಿತ್ತು. ಆದರೆ ಕೊರೊನಾ ಎರಡನೇ ಅಲೆ ಮತ್ತು ಆಗಲೂ ಕೂಡ ಐಆರ್​ಟಿ ವೆಬ್​ಸೈಟ್​​ನಲ್ಲಿ ತಾಂತ್ರಿಕ ದೋಷ ಕಾಣಿಸಿದ ಹಿನ್ನೆಲೆಯಲ್ಲಿ ಗಡುವನ್ನು 2021ರ  ಡಿಸೆಂಬರ್​ 31ರವರೆಗೆ ವಿಸ್ತರಿಸಲಾಗಿತ್ತು. ಆದರೆ ಕೊನೇ ದಿನ ಇನ್ನೆರಡು ದಿನ ಇರುವಾಗ ಮತ್ತೆ ಗಡುವು ಮುಂದೂಡುವಂತೆ ಆದಾಯ ತೆರಿಗೆ ಪಾವತಿದಾರರು ಆಗ್ರಹ ಮಾಡುತ್ತಿದ್ದಾರೆ. ಹೀಗಾಗಿ ಐಟಿ ರಿಟರ್ನ್ಸ್​ ಸಲ್ಲಿಕೆ ಗಡುವು ಮತ್ತೆ ಮುಂದೂಡುವ ಸಾಧ್ಯತೆ ಹೆಚ್ಚಾಗಿದೆ.

ಡಿಸೆಂಬರ್​ 31 ಕೊನೇ ದಿನ ಎಂಬ ಕಾರಣಕ್ಕೆ ಇದೀಗ ವೆಬ್​ಸೈಟ್​​ನಲ್ಲಿ ಒಂದೇ ಬಾರಿಗೆ ಲಾಗಿನ್​ ಆಗುವವರ ಸಂಖ್ಯೆ ಅಧಿಕವಾಗಿದೆ. ಹೀಗೆ ಒಂದೇ ಸಲಕ್ಕೆ ಸಾವಿರಾರು, ಲಕ್ಷ ಜನರು ಒಂದು ವೆಬ್​ಸೈಟ್​ಗೆ ಲಾಗಿನ್​ ಆದರೆ ಅಲ್ಲಿ ತಾಂತ್ರಿಕ ದೋಷ ಆಗುವುದು ಸಾಮಾನ್ಯ. ಈಗ ಕಳೆದ ಎರಡು ಮೂರು ದಿನಗಳಿಂದಲೂ ಐಆರ್​ಟಿ ವೆಬ್​ಸೈಟ್​ ಲಾಗಿನ್​ ಸಾಧ್ಯವಾಗುತ್ತಿಲ್ಲ ಎಂದು ಟ್ಯಾಕ್ಸ್​ ಪಾವತಿದಾರರು ದೂರುತ್ತಿದ್ದಾರೆ. ಈ ಡಿಸೆಂಬರ್​ 31 ಎಂಬುದು ತೆರಿಗೆಪಾವತಿದಾರರಿಗೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಕೊನೇ ದಿನವೋ ಅಥವಾ ವೆಬ್​ಸೈಟ್​ ಸಾಫ್ಟ್​ವೇರ್​ ಡೆವಲಪರ್​​ಗಳಿಗೆ ಕೊನೇ ದಿನವೋ? ಲಾಗಿನ್​ ಆಗಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಕೂಡಲೇ ಗಡುವನ್ನು ವಿಸ್ತರಿಸಿ ಎಂದು ಟ್ವಿಟರ್ ಬಳಕೆದಾರರೊಬ್ಬರು ಹೇಳಿದ್ದಾರೆ. ಮತ್ತೊಬ್ಬರು ಸ್ಟಕ್​ ಆಗಿರುವ ಐಟಿಆರ್​ ವೆಬ್​ಸೈಟ್​ ಫೋಟೋ ಶೇರ್​ ಮಾಡಿಕೊಂಡಿದ್ದಾರೆ. ಪ್ರತಿದಿನ ಇಂಥ ದೋಷ, ಎರರ್​ ತೋರಿಸುವಂಥ ವೆಬ್​ಸೈಟ್​ ಡೆವಲಪ್​ ಮಾಡಿದ್ದಕ್ಕೆ ನಿಮಗೆ ಧನ್ಯವಾದಗಳು ಎಂದು ವ್ಯಂಗ್ಯವಾಡಿದವರೂ ಇದ್ದಾರೆ.

ಇದನ್ನೂ ಓದಿ: 85 ಲಕ್ಷ ರೂ. ಕಾರಿನ ಬಗ್ಗೆ ಮಾತಾಡಿ ಕಣ್ಣೀರು ಹಾಕಿದ ಅಲ್ಲು ಅರ್ಜುನ್​; ವೇದಿಕೆಯಲ್ಲಿ ನಡೆದಿದ್ದೇನು?

Published On - 9:47 am, Wed, 29 December 21

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ