AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

91 ಸಾವಿರ ಜನರಿಗೆ ಉದ್ಯೋಗಾವಕಾಶ! ನಾಲ್ಕು ಐಟಿ ಕಂಪನಿಗಳಿಂದ ಕ್ಯಾಂಪಸ್ ಸೆಲೆಕ್ಷನ್​ಗೆ ಸಿದ್ಧತೆ..

ಇನ್ನು ವಿಪ್ರೋ ಕೂಡ ದೊಡ್ಡ ಸಂಖ್ಯೆಯಲ್ಲಿ ಫ್ರೆಶರ್​ ಸೆಲೆಕ್ಷನ್​ ಮಾಡಲು ಮುಂದಾಗಿದೆ. ಬೇಡಿಕೆ ಅನುಗುಣವಾಗಿ ಈಗಾಗಲೇ ಪ್ರತಿಭಾವಂತರ ಆಯ್ಕೆ ಪ್ರಕ್ರಿಯೆ ಶುರು ಮಾಡಿದ್ದೇವೆ ಎಂದು ವಿಪ್ರೋ ಎಚ್​ಆರ್ ಡಿಪಾರ್ಟ್​ಮೆಂಟ್ ಮುಖ್ಯಸ್ಥ ಸೌರಭ್​ ಗೋವಿಲ್ ತಿಳಿಸಿದ್ದಾರೆ.

91 ಸಾವಿರ ಜನರಿಗೆ ಉದ್ಯೋಗಾವಕಾಶ! ನಾಲ್ಕು ಐಟಿ ಕಂಪನಿಗಳಿಂದ ಕ್ಯಾಂಪಸ್ ಸೆಲೆಕ್ಷನ್​ಗೆ ಸಿದ್ಧತೆ..
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 19, 2021 | 3:44 PM

Share

ನವದೆಹಲಿ: ದೇಶದ ನಾಲ್ಕು ಐಟಿ ದಿಗ್ಗಜ ಕಂಪನಿಗಳಾದ ಟಿಸಿಎಸ್​, ಇನ್ಫೋಸಿಸ್​, ಎಚ್​ಸಿಎಲ್​ ಟೆಕ್ನಾಲಜೀಸ್ ಮತ್ತು ವಿಪ್ರೋಗಳು ಮುಂದಿನ ಹಣಕಾಸು ವರ್ಷದಲ್ಲಿ (2021-22) ಒಟ್ಟಾರೆ 91 ಸಾವಿರ ಜನರನ್ನು ಕ್ಯಾಂಪಸ್ ಸೆಲೆಕ್ಷನ್​ ಮಾಡಿಕೊಳ್ಳಲು ಯೋಜನೆ ರೂಪಿಸಿವೆ. ಲಾಕ್​ಡೌನ್ ಮುಕ್ತಾಯವಾದ ಬೆನ್ನಲ್ಲೇ ಕ್ಯಾಂಪಸ್ ಸೆಲೆಕ್ಷನ್​ ಮಾಡಲು ಯೋಜನೆ ರೂಪಿಸುತ್ತಿದ್ದು, ಈ ನಾಲ್ಕೂ ಕಂಪನಿಗಳಿಂದ ಒಟ್ಟಾರೆ 91 ಸಾವಿರ ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ.

ಲಾಕ್​ಡೌನ್ ಮುಗಿದ ಬೆನ್ನಲ್ಲೇ ಗ್ರಾಹಕ ಬೇಡಿಕೆಯೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಂಪನಿಗಳು ಉತ್ಪಾದನೆ ಪ್ರಕ್ರಿಯೆಯನ್ನೂ ಚುರುಕುಗೊಳಿಸಿವೆ. ಇದಕ್ಕಾಗಿ 2021-22ರ ಅವಧಿಗೆ ನಾಲ್ಕೂ ಕಂಪನಿಗಳಿಂದ ಒಟ್ಟು 91 ಸಾವಿರ ಜನರನ್ನು ಕ್ಯಾಂಪಸ್​ ಸೆಲೆಕ್ಷನ್ ಮಾಡುತ್ತಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಇದು ತುಸು ಹೆಚ್ಚಾಗಿದೆ.

ಟಿಸಿಎಸ್​ ಎಕ್ಸಿಕ್ಯೂಟಿವ್​ ವೈಸ್​ ಪ್ರೆಸಿಡೆಂಟ್​ಮತ್ತು ಗ್ಲೋಬಲ್​ ಎಚ್​ಆರ್​ ಮುಖ್ಯಸ್ಥರಾಗಿರುವ ಮಿಲಿಂದ್​ ಲಕ್ಕದ್​ ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿ, ನಮ್ಮ ಕಂಪನಿ ಕಳೆದ ವರ್ಷ ಕ್ಯಾಂಪಸ್​ನಿಂದ 40,000 ಹೊಸಬರನ್ನು ಆಯ್ಕೆ ಮಾಡಿಕೊಂಡಿತ್ತು. ಈ ಬಾರಿಯೂ ಅಷ್ಟೇ, ಅಂದರೆ 40,000 ಜನರನ್ನು ಆಯ್ಕೆ ಮಾಡಿಕೊಳ್ಳುವ ಯೋಜನೆ ಇದೆ ಎಂದಿದ್ದಾರೆ.

ಹಾಗೇ ಇನ್ಫೋಸಿಸ್​ ಮುಂಬರುವ ಹಣಕಾಸು ವರ್ಷದಲ್ಲಿ 24,000 ಪದವೀಧರರನ್ನು ನೇಮಕ ಮಾಡಿಕೊಳ್ಳುವುದಾಗಿ ತಿಳಿಸಿದೆ. ಈ ಕಂಪನಿ ಪ್ರಸಕ್ತ ಅಂದರೆ 2020-21ರ ಆರ್ಥಿಕ ವರ್ಷದಲ್ಲಿ 15,000 ಫ್ರೆಶರ್ಸ್ ಅ​ನ್ನು ಮಾತ್ರ ನೇಮಕ ಮಾಡಿಕೊಂಡಿತ್ತು.

ಇನ್ನು ಎಚ್​ಸಿಎಲ್ ಕಂಪನಿ 15000 ಹೊಸಬರನ್ನು ಭಾರತದಲ್ಲಿ ಕ್ಯಾಂಪಸ್ ಸೆಲೆಕ್ಷನ್​ ಮಾಡಲಿದೆ. ಉಳಿದ 1500-2000ರಷ್ಟು ಬೇರೆ ದೇಶದವರಿಗೆ ಅವಕಾಶ ನೀಡಲಾಗುವುದು. ಕಳೆದ ವರ್ಷ ಶೇ. 70ರಷ್ಟು ಭಾರತದಲ್ಲಿ, ಶೇ. 30ರಷ್ಟು ಹೊರದೇಶಗಳಲ್ಲಿ ಆಯ್ಕೆಯಾಗಿತ್ತು. ಈ ಬಾರಿ ಅದು ಶೇ. 90-ಶೇ. 10ಆಗಿದೆ ಎಂದು ಕಂಪನಿಯ ಟೆಕ್ನಾಲಜಿ ಮುಖ್ಯಸ್ಥ ಅಪ್ಪಾರಾವ್ ವಿವಿ ತಿಳಿಸಿದ್ದಾರೆ.

ಇನ್ನು ವಿಪ್ರೋ ಕೂಡ ದೊಡ್ಡ ಸಂಖ್ಯೆಯಲ್ಲಿ ಫ್ರೆಶರ್​ ಸೆಲೆಕ್ಷನ್​ ಮಾಡಲು ಮುಂದಾಗಿದೆ. ಬೇಡಿಕೆಗೆ ಅನುಗುಣವಾಗಿ ಈಗಾಗಲೇ ಪ್ರತಿಭಾವಂತರ ಆಯ್ಕೆ ಪ್ರಕ್ರಿಯೆ ಶುರು ಮಾಡಿದ್ದೇವೆ ಎಂದು ವಿಪ್ರೋ ಎಚ್​ಆರ್ ಡಿಪಾರ್ಟ್​ಮೆಂಟ್ ಮುಖ್ಯಸ್ಥ ಸೌರಭ್​ ಗೋವಿಲ್ ತಿಳಿಸಿದ್ದಾರೆ.

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ