AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

91 ಸಾವಿರ ಜನರಿಗೆ ಉದ್ಯೋಗಾವಕಾಶ! ನಾಲ್ಕು ಐಟಿ ಕಂಪನಿಗಳಿಂದ ಕ್ಯಾಂಪಸ್ ಸೆಲೆಕ್ಷನ್​ಗೆ ಸಿದ್ಧತೆ..

ಇನ್ನು ವಿಪ್ರೋ ಕೂಡ ದೊಡ್ಡ ಸಂಖ್ಯೆಯಲ್ಲಿ ಫ್ರೆಶರ್​ ಸೆಲೆಕ್ಷನ್​ ಮಾಡಲು ಮುಂದಾಗಿದೆ. ಬೇಡಿಕೆ ಅನುಗುಣವಾಗಿ ಈಗಾಗಲೇ ಪ್ರತಿಭಾವಂತರ ಆಯ್ಕೆ ಪ್ರಕ್ರಿಯೆ ಶುರು ಮಾಡಿದ್ದೇವೆ ಎಂದು ವಿಪ್ರೋ ಎಚ್​ಆರ್ ಡಿಪಾರ್ಟ್​ಮೆಂಟ್ ಮುಖ್ಯಸ್ಥ ಸೌರಭ್​ ಗೋವಿಲ್ ತಿಳಿಸಿದ್ದಾರೆ.

91 ಸಾವಿರ ಜನರಿಗೆ ಉದ್ಯೋಗಾವಕಾಶ! ನಾಲ್ಕು ಐಟಿ ಕಂಪನಿಗಳಿಂದ ಕ್ಯಾಂಪಸ್ ಸೆಲೆಕ್ಷನ್​ಗೆ ಸಿದ್ಧತೆ..
Lakshmi Hegde
| Edited By: |

Updated on: Jan 19, 2021 | 3:44 PM

Share

ನವದೆಹಲಿ: ದೇಶದ ನಾಲ್ಕು ಐಟಿ ದಿಗ್ಗಜ ಕಂಪನಿಗಳಾದ ಟಿಸಿಎಸ್​, ಇನ್ಫೋಸಿಸ್​, ಎಚ್​ಸಿಎಲ್​ ಟೆಕ್ನಾಲಜೀಸ್ ಮತ್ತು ವಿಪ್ರೋಗಳು ಮುಂದಿನ ಹಣಕಾಸು ವರ್ಷದಲ್ಲಿ (2021-22) ಒಟ್ಟಾರೆ 91 ಸಾವಿರ ಜನರನ್ನು ಕ್ಯಾಂಪಸ್ ಸೆಲೆಕ್ಷನ್​ ಮಾಡಿಕೊಳ್ಳಲು ಯೋಜನೆ ರೂಪಿಸಿವೆ. ಲಾಕ್​ಡೌನ್ ಮುಕ್ತಾಯವಾದ ಬೆನ್ನಲ್ಲೇ ಕ್ಯಾಂಪಸ್ ಸೆಲೆಕ್ಷನ್​ ಮಾಡಲು ಯೋಜನೆ ರೂಪಿಸುತ್ತಿದ್ದು, ಈ ನಾಲ್ಕೂ ಕಂಪನಿಗಳಿಂದ ಒಟ್ಟಾರೆ 91 ಸಾವಿರ ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ.

ಲಾಕ್​ಡೌನ್ ಮುಗಿದ ಬೆನ್ನಲ್ಲೇ ಗ್ರಾಹಕ ಬೇಡಿಕೆಯೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಂಪನಿಗಳು ಉತ್ಪಾದನೆ ಪ್ರಕ್ರಿಯೆಯನ್ನೂ ಚುರುಕುಗೊಳಿಸಿವೆ. ಇದಕ್ಕಾಗಿ 2021-22ರ ಅವಧಿಗೆ ನಾಲ್ಕೂ ಕಂಪನಿಗಳಿಂದ ಒಟ್ಟು 91 ಸಾವಿರ ಜನರನ್ನು ಕ್ಯಾಂಪಸ್​ ಸೆಲೆಕ್ಷನ್ ಮಾಡುತ್ತಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಇದು ತುಸು ಹೆಚ್ಚಾಗಿದೆ.

ಟಿಸಿಎಸ್​ ಎಕ್ಸಿಕ್ಯೂಟಿವ್​ ವೈಸ್​ ಪ್ರೆಸಿಡೆಂಟ್​ಮತ್ತು ಗ್ಲೋಬಲ್​ ಎಚ್​ಆರ್​ ಮುಖ್ಯಸ್ಥರಾಗಿರುವ ಮಿಲಿಂದ್​ ಲಕ್ಕದ್​ ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿ, ನಮ್ಮ ಕಂಪನಿ ಕಳೆದ ವರ್ಷ ಕ್ಯಾಂಪಸ್​ನಿಂದ 40,000 ಹೊಸಬರನ್ನು ಆಯ್ಕೆ ಮಾಡಿಕೊಂಡಿತ್ತು. ಈ ಬಾರಿಯೂ ಅಷ್ಟೇ, ಅಂದರೆ 40,000 ಜನರನ್ನು ಆಯ್ಕೆ ಮಾಡಿಕೊಳ್ಳುವ ಯೋಜನೆ ಇದೆ ಎಂದಿದ್ದಾರೆ.

ಹಾಗೇ ಇನ್ಫೋಸಿಸ್​ ಮುಂಬರುವ ಹಣಕಾಸು ವರ್ಷದಲ್ಲಿ 24,000 ಪದವೀಧರರನ್ನು ನೇಮಕ ಮಾಡಿಕೊಳ್ಳುವುದಾಗಿ ತಿಳಿಸಿದೆ. ಈ ಕಂಪನಿ ಪ್ರಸಕ್ತ ಅಂದರೆ 2020-21ರ ಆರ್ಥಿಕ ವರ್ಷದಲ್ಲಿ 15,000 ಫ್ರೆಶರ್ಸ್ ಅ​ನ್ನು ಮಾತ್ರ ನೇಮಕ ಮಾಡಿಕೊಂಡಿತ್ತು.

ಇನ್ನು ಎಚ್​ಸಿಎಲ್ ಕಂಪನಿ 15000 ಹೊಸಬರನ್ನು ಭಾರತದಲ್ಲಿ ಕ್ಯಾಂಪಸ್ ಸೆಲೆಕ್ಷನ್​ ಮಾಡಲಿದೆ. ಉಳಿದ 1500-2000ರಷ್ಟು ಬೇರೆ ದೇಶದವರಿಗೆ ಅವಕಾಶ ನೀಡಲಾಗುವುದು. ಕಳೆದ ವರ್ಷ ಶೇ. 70ರಷ್ಟು ಭಾರತದಲ್ಲಿ, ಶೇ. 30ರಷ್ಟು ಹೊರದೇಶಗಳಲ್ಲಿ ಆಯ್ಕೆಯಾಗಿತ್ತು. ಈ ಬಾರಿ ಅದು ಶೇ. 90-ಶೇ. 10ಆಗಿದೆ ಎಂದು ಕಂಪನಿಯ ಟೆಕ್ನಾಲಜಿ ಮುಖ್ಯಸ್ಥ ಅಪ್ಪಾರಾವ್ ವಿವಿ ತಿಳಿಸಿದ್ದಾರೆ.

ಇನ್ನು ವಿಪ್ರೋ ಕೂಡ ದೊಡ್ಡ ಸಂಖ್ಯೆಯಲ್ಲಿ ಫ್ರೆಶರ್​ ಸೆಲೆಕ್ಷನ್​ ಮಾಡಲು ಮುಂದಾಗಿದೆ. ಬೇಡಿಕೆಗೆ ಅನುಗುಣವಾಗಿ ಈಗಾಗಲೇ ಪ್ರತಿಭಾವಂತರ ಆಯ್ಕೆ ಪ್ರಕ್ರಿಯೆ ಶುರು ಮಾಡಿದ್ದೇವೆ ಎಂದು ವಿಪ್ರೋ ಎಚ್​ಆರ್ ಡಿಪಾರ್ಟ್​ಮೆಂಟ್ ಮುಖ್ಯಸ್ಥ ಸೌರಭ್​ ಗೋವಿಲ್ ತಿಳಿಸಿದ್ದಾರೆ.

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು