AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ನೀನು ತುಂಬಾ ಸಣ್ಣಗಿದ್ದೀಯ, ಜಿಮ್‌ಗೆ ಹೋದ್ರೆ ಸೆಕ್ಸಿಯಾಗಿ ಕಾಣ್ತೀಯ”: ಟಿಸಿಎಸ್ ಸಹೋದ್ಯೋಗಿ ಬಗ್ಗೆ ಯುವತಿ ಸ್ಫೋಟಕ ಹೇಳಿಕೆ

ಟಿಸಿಎಸ್ ನಾಸಿಕ್ ಘಟಕದಲ್ಲಿ ಮಹಿಳಾ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ ಹಾಗೂ ಬಲವಂತದ ಧಾರ್ಮಿಕ ಮತಾಂತರಕ್ಕೆ ಸಂಚು ರೂಪಿಸಿದ ಗಂಭೀರ ಆರೋಪ ಕೇಳಿಬಂದಿದೆ. ಇದನ್ನು ಮಹಾರಾಷ್ಟ್ರ ಸಿಎಂ 'ಕಾರ್ಪೊರೇಟ್ ಜಿಹಾದ್' ಎಂದು ಬಣ್ಣಿಸಿದ್ದಾರೆ. ತನಿಖೆ ತೀವ್ರಗೊಂಡಿದ್ದು, ಸಂತ್ರಸ್ತೆಯರು ತಮ್ಮ ಕಹಿ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಆರೋಪಿಗಳನ್ನು ಬಂಧಿಸಲಾಗಿದ್ದು, ಟಿಸಿಎಸ್ ಸಂಸ್ಥೆಯು ಆರೋಪಿಗಳನ್ನು ಅಮಾನತುಗೊಳಿಸಿದೆ.

ನೀನು ತುಂಬಾ ಸಣ್ಣಗಿದ್ದೀಯ, ಜಿಮ್‌ಗೆ ಹೋದ್ರೆ ಸೆಕ್ಸಿಯಾಗಿ ಕಾಣ್ತೀಯ: ಟಿಸಿಎಸ್ ಸಹೋದ್ಯೋಗಿ ಬಗ್ಗೆ ಯುವತಿ ಸ್ಫೋಟಕ ಹೇಳಿಕೆ
ಸಾಂದರ್ಭಿಕ ಚಿತ್ರ Image Credit source: AI image
ಅಕ್ಷಯ್​ ಪಲ್ಲಮಜಲು​​
|

Updated on: Apr 24, 2026 | 3:04 PM

Share

ನಾಸಿಕ್, ಏ.24: ದೇಶದ ಪ್ರತಿಷ್ಠಿತ ಐಟಿ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ನ ನಾಸಿಕ್ ಘಟಕದಲ್ಲಿ ಮನುಕುಲವೇ ಬೆಚ್ಚಿಬೀಳುವಂತಹ ಘಟನೆ ಬೆಳಕಿಗೆ ಬಂದಿತ್ತು. ಕೆಲಸದ ಸ್ಥಳದಲ್ಲಿ ಮಹಿಳಾ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡುವುದರ ಜೊತೆಗೆ, ಬಲವಂತದ ಧಾರ್ಮಿಕ ಮತಾಂತರಕ್ಕೆ ಸಂಚು ರೂಪಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆಯನ್ನು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ‘ಕಾರ್ಪೊರೇಟ್ ಜಿಹಾದ್’ ಎಂದು ಬಣ್ಣಿಸಿದ್ದರು. ಇದೀಗ ಈ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಈ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ ಯುವತಿಯರು ಸ್ಫೋಟಕ ಹೇಳಿಕೆಗಳನ್ನು ನೀಡಿದ್ದಾರೆ. ಅಲ್ಲಿ ತಮ್ಮನ್ನು ನಡೆಸುಕೊಳ್ಳುತ್ತಿದ್ದ ಬಗ್ಗೆ ಹಾಗೂ ಅಸಭ್ಯ ಮಾತುಗಳ ಬಗ್ಗೆ ಹೇಳಿಕೆ ನೀಡಿದ್ದಾರೆ.

ಪ್ರಕರಣದ ತನಿಖೆ ಚುರುಕುಗೊಂಡಂತೆ ಒಬ್ಬೊಬ್ಬರೇ ಸಂತ್ರಸ್ತೆಯರು ತಮಗಾದ ಕಹಿ ಅನುಭವವನ್ನು ಹಂಚಿಕೊಳ್ಳುತ್ತಿದ್ದಾರೆ. ಟಿಸಿಎಸ್‌ನ ಮಹಿಳಾ ಉದ್ಯೋಗಿಯೊಬ್ಬರು ನೀಡಿರುವ ದೂರಿನ ಬಗ್ಗೆ ಇಲ್ಲಿ ನೋಡಿ ಮಾಹಿತಿ. ಆರೋಪಿಗಳಾದ ಶಾರುಖ್ ಖುರೇಷಿ ಮತ್ತು ರಜಾ ಮೆಮನ್ ಕೆಲಸದ ನೆಪದಲ್ಲಿ ಮಹಿಳೆಯನ್ನು ಪೀಡಿಸುತ್ತಿದ್ದರು. “ನಿನಗೆ ಬಾಯ್ ಫ್ರೆಂಡ್ ಇದ್ದಾನಾ?”, “ಯಾರನ್ನಾದರೂ ಇಷ್ಟಪಡುತ್ತೀಯಾ?” ಎಂದು ಕೇಳುತ್ತಾ ಮುಜುಗರ ಉಂಟುಮಾಡುತ್ತಿದ್ದರು.

“ನೀನು ತುಂಬಾ ಸಣ್ಣಗಿದ್ದೀಯಾ, ಜಿಮ್‌ಗೆ ಹೋದರೆ ಆಕರ್ಷಕವಾಗಿ ಕಾಣುತ್ತೀಯಾ” ಎಂದು ರಜಾ ಮೆಮನ್ ಅಶ್ಲೀಲವಾಗಿ ಕಾಮೆಂಟ್ ಮಾಡುತ್ತಿದ್ದ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.ಯುಗಾದಿ (ಗುಡಿ ಪಾಡ್ವ) ದಿನದಂದು ಹೊಸ ಬಟ್ಟೆ ಧರಿಸಿ ಬಂದಿದ್ದ ಸಂತ್ರಸ್ತೆಯನ್ನು ಪದೇ ಪದೇ ಹತ್ತಿರ ಕರೆದು, ಅಸಭ್ಯವಾಗಿ ದಿಟ್ಟಿಸುತ್ತಾ ಮಾನಸಿಕ ಕಿರುಕುಳ ನೀಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿ, ಕತ್ತು ಸೀಳಿ ಫ್ಲಶ್ ಮಾಡಲು ಯತ್ನಿಸಿದ 19 ವರ್ಷದ ಯುವತಿಯ ಬಂಧನ

ಆರೋಪಿಗಳು ಕೇವಲ ಕಿರುಕುಳಕ್ಕೆ ಸೀಮಿತವಾಗದೆ, ಉದ್ಯೋಗಿಗಳನ್ನು ಮತಾಂತರಗೊಳಿಸಲು ಪ್ರಯತ್ನಿಸುತ್ತಿದ್ದರು ಎಂಬ ಅಂಶ ತನಿಖೆಯಲ್ಲಿ ಬಹಿರಂಗವಾಗಿದೆ. ಕಂಪನಿಯಲ್ಲಿ ಈ ಆರೋಪಿಗಳ ಪ್ರಭಾವ ಹೆಚ್ಚಿದ್ದರಿಂದ ದೂರು ನೀಡಲು ಸಂತ್ರಸ್ತೆಯರು ಭಯಬಿದ್ದಿದ್ದರು. ಸದ್ಯ ಪೊಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದು, ಅವರ ಮೊಬೈಲ್​​​ ಸಾಧನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಗಂಭೀರ ಪ್ರಕರಣವನ್ನು ಪರಿಗಣಿಸಿರುವ TCS ಸಂಸ್ಥೆಯು, ಆರೋಪಿಗಳನ್ನು ಕೆಲಸದಿಂದ ಅಮಾನತುಗೊಳಿಸಿದೆ. “ನಮ್ಮ ಸಂಸ್ಥೆಯಲ್ಲಿ ಕಿರುಕುಳಕ್ಕೆ ಯಾವುದೇ ಸ್ಥಾನವಿಲ್ಲ” ಎಂದು ಕಂಪನಿ ಸ್ಪಷ್ಟಪಡಿಸಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ