AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣ: ಚಂದ್ರಬಾಬು ನಾಯ್ಡುಗೆ 14 ದಿನಗಳ ನ್ಯಾಯಾಂಗ ಬಂಧನ

ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣ ಆಂಧ್ರಪ್ರದೇಶ ರಾಜಕೀಯದಲ್ಲಿ ಸಂಚಲನ ಮೂಡಿಸಿರುವುದು ಗೊತ್ತೇ ಇದೆ. ಈ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಅವರನ್ನು ಸಿಐಡಿ ಅಧಿಕಾರಿಗಳು ಶನಿವಾರ ನಂದ್ಯಾಲದಲ್ಲಿ ಬಂಧಿಸಿ ವಿಜಯವಾಡ ಸಿಐಡಿ ಕಚೇರಿಗೆ ಕರೆದೊಯ್ದಿದ್ದಾರೆ. ಸದ್ಯ ನಾಯ್ಡು ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣ: ಚಂದ್ರಬಾಬು ನಾಯ್ಡುಗೆ 14 ದಿನಗಳ ನ್ಯಾಯಾಂಗ ಬಂಧನ
ಚಂದ್ರಬಾಬು ನಾಯ್ಡುಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ಎಸಿಬಿ ನ್ಯಾಯಾಲಯ
Rakesh Nayak Manchi
Rakesh Nayak Manchi|

Updated on:Sep 10, 2023 | 7:49 PM

Share

ಅಮರಾವತಿ, ಸೆ.10: ಆಂಧ್ರಪ್ರದೇಶ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಕೌಶಲ್ಯಾಭಿವೃದ್ಧಿ ಹಗರಣ (Skill development scam) ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಮುಖ್ಯಮಂತ್ರಿ ಹಾಗೂ ಟಿಡಿಪಿ ನಾಯಕ ಎನ್ ಚಂದ್ರಬಾಬು ನಾಯ್ಡು (N Chandrababu Naidu) ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಎಸ್‌ಐಟಿ ವಾದವನ್ನು ಒಪ್ಪಿಕೊಂಡಿರುವ ಎಸಿಬಿ ನ್ಯಾಯಾಲಯವು ಕೌಶಲ್ಯಾಭಿವೃದ್ಧಿ ಪ್ರಕರಣದಲ್ಲಿ ಚಂದ್ರಬಾಬುಗೆ ಸೆ.22 ರ ವರೆಗೆ, ಅಂದರೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಇಂದು ರಾತ್ರಿ ಚಂದ್ರಬಾಬು ಅವರನ್ನು ಎಸ್‌ಐಟಿ ಕಚೇರಿಗೆ ಕರೆದೊಯ್ದು ಸೋಮವಾರ ಬೆಳಗ್ಗೆ ರಾಜಮಂಡ್ರಿ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಗುತ್ತದೆ.

ಇದನ್ನೂ ಓದಿ: 37ನೇ ಆರೋಪಿಯಾಗಿ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅರೆಸ್ಟ್​​​​: ಕೌಶಲ್ಯಾಭಿವೃದ್ಧಿ ಹಗರಣ ಬೆಳಕಿಗೆ ಬಂದಿದ್ದು ಹೇಗೆ.. ಸಿಎಂ ಬಾಬು ಪಾತ್ರವೇನು?

ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣ ಆಂಧ್ರಪ್ರದೇಶ ರಾಜಕೀಯದಲ್ಲಿ ಸಂಚಲನ ಮೂಡಿಸಿರುವುದು ಗೊತ್ತೇ ಇದೆ. ಈ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಅವರನ್ನು ಸಿಐಡಿ ಅಧಿಕಾರಿಗಳು ಶನಿವಾರ ನಂದ್ಯಾಲದಲ್ಲಿ ಬಂಧಿಸಿ ವಿಜಯವಾಡ ಸಿಐಡಿ ಕಚೇರಿಗೆ ಕರೆದೊಯ್ದಿದ್ದರು.

ಒಟ್ಟು 34 ಆರೋಪಗಳನ್ನು ದಾಖಲಿಸಿಕೊಂಡಿರುವ ಸಿಐಡಿ, ಚಂದ್ರಬಾಬು ಅವರನ್ನು ವಿಚಾರಣೆ ನಡೆಸಿದ ಬಳಿಕ ಭಾನುವಾರ ಬೆಳಗ್ಗೆ ಸಿಬಿಐ ಅಧಿಕಾರಿಗಳು ಎಸಿಬಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ಕೌಶಲ್ಯಾಭಿವೃದ್ಧಿ ಪ್ರಕರಣದ ಸಂಚಿನ ಸೂತ್ರಧಾರಿ ಚಂದ್ರಬಾಬು ಎಂದು ಸಿಐಡಿ ಎಸಿಬಿ ನ್ಯಾಯಾಲಯಕ್ಕೆ ರಿಮಾಂಡ್ ವರದಿ ಸಲ್ಲಿಸಿದೆ.

ಕೌಶಲಾಭಿವೃದ್ಧಿ ಹಗರಣ ನಡೆದ ರೀತಿಯನ್ನು ವಿವರಿಸಿದ ಸಿಐಡಿ, ಚಂದ್ರಬಾಬು ಆದೇಶದ ಮೇರೆಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಆರೋಪಿಯನ್ನಾಗಿ ಸೇರಿಸಲು ಸಿಐಡಿ ಮೆಮೊ ಸಲ್ಲಿಸಿತ್ತು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:47 pm, Sun, 10 September 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ