AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​​ನಲ್ಲಿ ಪ್ರಧಾನಿ ಭದ್ರತೆ ಲೋಪ; ಆಕ್ಷೇಪ, ಆತಂಕ ವ್ಯಕ್ತಪಡಿಸಿ ಟ್ವೀಟ್ ಮಾಡಿದ ಚಂದ್ರಬಾಬು ನಾಯ್ಡು

ಪ್ರಧಾನಿ ಮೋದಿಯವರು ಪ್ರಯಾಣಿಸುತ್ತಿದ್ದ ರಸ್ತೆ ಮಾರ್ಗದಲ್ಲಿ ಪ್ರತಿಭಟನೆ ನಡೆಸಿ, ರಸ್ತೆ ಬ್ಲಾಕ್​ ಮಾಡಿದ್ದರ ಜವಾಬ್ದಾರಿಯನ್ನು ಭಾರತೀಯ ಕಿಸಾನ್​ ಯೂನಿಯನ್ (ಕ್ರಾಂತಿಕಾರಿ) ರೈತ ಸಂಘಟನೆ ಹೊತ್ತಿದೆ. 

ಪಂಜಾಬ್​​ನಲ್ಲಿ ಪ್ರಧಾನಿ ಭದ್ರತೆ ಲೋಪ; ಆಕ್ಷೇಪ, ಆತಂಕ ವ್ಯಕ್ತಪಡಿಸಿ ಟ್ವೀಟ್ ಮಾಡಿದ ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು
TV9 Web
| Edited By: |

Updated on:Jan 08, 2022 | 3:19 PM

Share

ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಪಂಜಾಬ್​ಗೆ ಭೇಟಿ ನೀಡಿದ್ದಾಗ ಅಲ್ಲಿ ಉಂಟಾಗಿರುವ ಭದ್ರತಾ ಲೋಪ (PM Security Breach in Punjab) ನಿಜಕ್ಕೂ ಕಳವಳಕಾರಿ ಎಂದು ಆಂಧ್ರಪ್ರದೇಶದ ತೆಲುಗು ದೇಸಂ ಪಾರ್ಟಿ (ಟಿಡಿಪಿ) ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಎನ್​.ಚಂದ್ರಬಾಬು ನಾಯ್ಡು(Chandrababu Naidu) ಹೇಳಿದ್ದಾರೆ.  ಪ್ರಧಾನಿಯವರ ಭದ್ರತೆ ಎಂಬುದು ರಾಷ್ಟ್ರದ ಕಾಳಜಿ. ಹೀಗಾಗಿ ಪಂಜಾಬ್​ನಲ್ಲಿ ನಡೆದ ಘಟನೆ ಒಪ್ಪತಕ್ಕಂಥದ್ದಲ್ಲ ಎಂದು ಟ್ವೀಟ್​ ಮಾಡಿದ್ದಾರೆ. ಬುಧವಾರ (ಜ.5) ಪ್ರಧಾನಿ ನರೇಂದ್ರ ಮೋದಿ ಪಂಜಾಬ್​ನ ಫಿರೋಜ್​ಪುರಕ್ಕೆ ಭೇಟಿ ಕೊಡುವವರು ಇದ್ದರು. ಆದರೆ ಭಟಿಂಡಾ ಏರ್​ಪೋರ್ಟ್​ನಿಂದ ಫಿರೋಜ್​​ಪುರಕ್ಕೆ ಹೋಗುವ ಮಾರ್ಗದಲ್ಲಿ ರೈತರು ಪ್ರತಿಭಟನೆ ನಡೆಸಿದ ಪರಿಣಾಮ ಅವರು ಹುಸ್ಸೇನಿವಾಲಾ ಸಮೀಪ ಫ್ಲೈಓವರ್ ಮೇಲೆ 15-20 ನಿಮಿಷ ಕಾದು ನಂತರ ವಾಪಸ್​ ಬರುವಂತಾಯ್ತು. ಇದು ಭಾರತದ ಇತಿಹಾಸದಲ್ಲೇ ದೊಡ್ಡ ಮಟ್ಟದ ಭದ್ರತಾ ಲೋಪ ಎನ್ನಲಾಗಿದ್ದು, ಪ್ರತಿಪಕ್ಷಗಳ ನಾಯಕರೂ ಕೂಡ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿ ನಾಯಕರಂತೂ, ಕಾಂಗ್ರೆಸ್​ ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಿದೆ ಎಂದೇ ಆರೋಪಿಸಿದೆ.  

ಪ್ರಧಾನಿ ಮೋದಿಯವರು ಪ್ರಯಾಣಿಸುತ್ತಿದ್ದ ರಸ್ತೆ ಮಾರ್ಗದಲ್ಲಿ ಪ್ರತಿಭಟನೆ ನಡೆಸಿ, ರಸ್ತೆ ಬ್ಲಾಕ್​ ಮಾಡಿದ್ದರ ಜವಾಬ್ದಾರಿಯನ್ನು ಭಾರತೀಯ ಕಿಸಾನ್​ ಯೂನಿಯನ್ (ಕ್ರಾಂತಿಕಾರಿ) ರೈತ ಸಂಘಟನೆ ಹೊತ್ತಿದೆ.  ಪ್ರಧಾನಿ ಮೋದಿ ರಸ್ತೆ ಮೂಲಕ ಬರುತ್ತಾರೆ ಎಂದು ನಮಗೆ ಗೊತ್ತಿರಲಿಲ್ಲ. ನಂತರ ಪೊಲೀಸರು ಹೇಳಿದರೂ ನಾವು ಅವರು ಸುಳ್ಳು ಹೇಳುತ್ತಾರೆ ಎಂದೇ ಭಾವಿಸಿದೆವು. ನಮಗೆ ಮೋದಿಯವರ ಕಾರನ್ನು ತಡೆಯುವ ಉದ್ದೇಶವಾಗಲಿ, ಯೋಜನೆಯಾಗಲೀ ಇರಲಿಲ್ಲ. ಫಿರೋಜ್​​ಪುರದಲ್ಲಿ ಅವರು ರ್ಯಾಲಿ ನಡೆಸುವ ಜಾಗದಿಂದ ಸ್ವಲ್ಪ ದೂರದಲ್ಲಿ ಪ್ರತಿಭಟನೆ ನಡೆಸುವುದಷ್ಟೇ ನಮ್ಮ ಉದ್ದೇಶವಾಗಿತ್ತು. ಅದರಲ್ಲೂ ಫಿರೋಜ್​ಪುರದಲ್ಲಿ ಹೆಲಿಪ್ಯಾಡ್​ ನೋಡಿ, ಪ್ರಧಾನಿ ಮೋದಿ ಹೆಲಿಕಾಪ್ಟರ್​ ಮೂಲಕವೇ ಬರಲಿದ್ದಾರೆ ಎಂದುಕೊಂಡಿದ್ದೆವು ಎಂದು ಬಿಕೆಯು ಮುಖ್ಯಸ್ಥ ಸುರ್ಜಿತ್​ ಸಿಂಗ್ ಪೂಲ್​ ತಿಳಿಸಿದ್ದಾರೆ.

ಇನ್ನು ಪ್ರಧಾನಿ ಭದ್ರತೆ ಲೋಪ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​, ಪ್ರಧಾನಿ ನರೇಂದ್ರ ಮೋದಿಯವರು ಪಂಜಾಬ್​ಗೆ ಭೇಟಿ ನೀಡಿದಾಗಿನ ಪ್ರಯಾಣ ದಾಖಲೆಯನ್ನು ಸಂರಕ್ಷಿಸಿಡುವಂತೆ ಸುಪ್ರೀಂಕೋರ್ಟ್​, ಪಂಜಾಬ್​-ಹರ್ಯಾಣ ಹೈಕೋರ್ಟ್​ನ ರಿಜಿಸ್ಟ್ರಾರ್​ ಜನರಲ್​​ಗೆ ಸೂಚಿಸಿದೆ. ಜನವರಿ 10ಕ್ಕೆ ಮುಂದಿನ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್​, ಅಲ್ಲಿಯವರೆಗೂ ಕೇಂದ್ರ ಗೃಹ ಇಲಾಖೆ ಹಾಗೂ ಪಂಜಾಬ್​ ಸರ್ಕಾರ ಪ್ರಕರಣದ ತನಿಖೆ ನಡೆಸುವದಕ್ಕೆ ಸ್ಟೇ ನೀಡಿದೆ. ಸದ್ಯ ಭದ್ರತಾ ಲೋಪ ತನಿಖೆಗಾಗಿ ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ದಳ (NIA)ದ ಏಳು ಸದಸ್ಯರನ್ನೊಳಗೊಂಡ ತಂಡವನ್ನು ರಚಿಸಿದ್ದು, ಪಂಜಾಬ್​ ಸರ್ಕಾರ ಮೂವರು ಸದಸ್ಯರನ್ನೊಳಗೊಂಡ ಸಮಿತಿ ರಚಿಸಿದೆ.

ಇದನ್ನೂ ಓದಿ: ಪ್ರಧಾನಿ ಭದ್ರತೆ ಲೋಪ; ಫಿರೋಜ್​ಪುರ ಎಸ್​ಎಸ್​ಪಿಯನ್ನು ದೂಷಿಸಿ, ಕೇಂದ್ರಕ್ಕೆ ವರದಿ ಸಲ್ಲಿಸಿದ ಭಟಿಂಡಾ ಎಸ್​ಎಸ್​ಪಿ

Published On - 3:18 pm, Sat, 8 January 22

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?