ಜೂ. 12ರಂದು 3ನೇ ಬಾರಿಗೆ ಆಂಧ್ರಪ್ರದೇಶ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ

|

Updated on: Jun 07, 2024 | 10:03 PM

ಚಂದ್ರಬಾಬು ನಾಯ್ಡು ಅವರು ಸುಮಾರು 30 ವರ್ಷಗಳ ಹಿಂದೆ 1995ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿದ್ದರು. ಅದಾದ ಬಳಿಕ ತೆಲಂಗಾಣ ಮತ್ತು ಆಂಧ್ರಪ್ರದೇಶ ವಿಭಜನೆಯಾದ ನಂತರ ಚಂದ್ರಬಾಬು ನಾಯ್ಡು ಅವರು 2014ರಲ್ಲಿ ವಿಭಜಿತ ಆಂಧ್ರಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.

ಜೂ. 12ರಂದು 3ನೇ ಬಾರಿಗೆ ಆಂಧ್ರಪ್ರದೇಶ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ
ಚಂದ್ರಬಾಬು ನಾಯ್ಡು
Follow us on

ಅಮರಾವತಿ: ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು (Chandrababu Naidu) ಅವರು ಜೂನ್ 12ರಂದು ಸಂಜೆ 4.55ಕ್ಕೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. “ಜೂನ್ 12 ರಂದು ಸಂಜೆ 4.55ಕ್ಕೆ ಆಂಧ್ರಪ್ರದೇಶ ಸಿಎಂ ಆಗಿ ನಾರಾ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರ ಅಭಿಮಾನಿಗಳಿಗೆ ಇದು ಅತ್ಯಂತ ಸಂತಸದ ಕ್ಷಣವಾಗಿದೆ.” ಎಂದು ಟಿಡಿಪಿ ಹೇಳಿದೆ.

ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಟಿಡಿಪಿ ಯಾವುದಾದರೂ ನಿರ್ದಿಷ್ಟ ಸಚಿವಾಲಯದ ಬೇಡಿಕೆಗಳನ್ನು ಇರಿಸಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಟಿಡಿಪಿ ನಾಯಕ ರಘುರಾಮ ಕೃಷ್ಣರಾಜು, ” ನಾನು ಹಾಗೆ ಯೋಚಿಸುವುದಿಲ್ಲ. ಏಕೆಂದರೆ ಅದು ನನ್ನ ಪ್ರತಿಕ್ರಿಯೆಯ ವಿಷಯವಲ್ಲ. ಆದರೆ, ನಮ್ಮ ಪಕ್ಷದ ನಾಯಕರು ಬೇಡಿಕೆಯಿಡುವ ರೀತಿಯ ವ್ಯಕ್ತಿಯಲ್ಲ. ಅವರ ಉತ್ತಮ ಸಂಬಂಧದ ಆಧಾರದ ಮೇಲೆ ನಮ್ಮ ಪಕ್ಷಕ್ಕೆ ಏನು ಸಿಗಬೇಕೋ ಅದು ಸಿಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಏರ್​ಪೋರ್ಟ್​ನಲ್ಲಿ ಚಂದ್ರಬಾಬು ನಾಯ್ಡು, ಎಂಕೆ ಸ್ಟಾಲಿನ್ ಭೇಟಿ

ಟಿಡಿಪಿ ಮುಖ್ಯಸ್ಥ ನಾರಾ ಚಂದ್ರಬಾಬು ನಾಯ್ಡು ಅವರು ಇಂದು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್‌ಡಿಎ) ಟಿಡಿಪಿ ಬೆಂಬಲವನ್ನು ದೃಢಪಡಿಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ನರೇಂದ್ರ ಮೋದಿ ಭಾರತಕ್ಕೆ ಸರಿಯಾದ ಸಮಯದಲ್ಲಿ ಸರಿಯಾದ ನಾಯಕರಾಗಿದ್ದಾರೆ ಎಂದು ಹೇಳಿದ್ದಾರೆ.

ನಾಯ್ಡು ಅವರು ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ವಿಕ್ಷಿತ್ ಭಾರತ್ ಅವರ ದೃಷ್ಟಿಯನ್ನು ಎತ್ತಿ ತೋರಿಸುತ್ತಾ ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿಯವರ ಹೆಸರನ್ನು ಪ್ರಸ್ತಾಪಿಸಿದರು ಮತ್ತು ‘ಭಾರತಕ್ಕೆ ಉತ್ತಮ ಅವಕಾಶವನ್ನು’ ಎಂದಿಗೂ ಕಳೆದುಕೊಳ್ಳಬೇಡಿ ಎಂದು ಮನವಿ ಮಾಡಿದರು.

“ಈ ಮಹಾನ್ ರಾಷ್ಟ್ರದ ಪ್ರಧಾನ ಮಂತ್ರಿ ಹುದ್ದೆಗೆ ತೆಲುಗು ದೇಶಂ ಪಕ್ಷದ ಪರವಾಗಿ ನರೇಂದ್ರ ಮೋದಿ ಅವರ ಹೆಸರನ್ನು ಹೆಮ್ಮೆಯಿಂದ ಪ್ರಸ್ತಾಪಿಸುತ್ತೇನೆ. ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಕಳೆದ 10 ವರ್ಷಗಳಲ್ಲಿ ಹಲವು ಯೋಜನೆಗಳನ್ನು ಕೈಗೊಂಡಿದೆ. ನರೇಂದ್ರ ಮೋದಿ ಅವರಿಗೆ ದೂರದೃಷ್ಟಿ ಮತ್ತು ಉತ್ಸಾಹವಿದೆ. ಅವರು ತಮ್ಮ ಎಲ್ಲಾ ನೀತಿಗಳನ್ನು ನಿಜವಾದ ಮನೋಭಾವದಿಂದ ಕಾರ್ಯಗತಗೊಳಿಸುತ್ತಿದ್ದಾರೆ. ಸರಿಯಾದ ಸಮಯದಲ್ಲಿ ಸರಿಯಾದ ನಾಯಕ ಸಿಕ್ಕಿದ್ದಾರೆ. ಇದು ಭಾರತಕ್ಕೆ ಉತ್ತಮ ಅವಕಾಶವಾಗಿದೆ” ಎಂದು ಚಂದ್ರಬಾಬು ನಾಯ್ಡು ಸಂಸತ್ ಭವನದ ಸಂವಿದಾನ ಸದನದಲ್ಲಿ ಎನ್​ಡಿಎ ಸಂಸದರ ಸಭೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: Chandrababu Naidu: ಆಂಧ್ರಪ್ರದೇಶದಲ್ಲಿ ಕೌಶಲ್ಯ ಗಣತಿಯ ಭರವಸೆ ನೀಡಿದ್ದ ಚಂದ್ರಬಾಬು ನಾಯ್ಡು; ಏನಿದರ ಅರ್ಥ?

ಎನ್‌ಡಿಎಯಲ್ಲಿನ ಪಕ್ಷಗಳ ನಾಯಕರು ಸಭೆ ನಡೆಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಲು ನಿರ್ಣಯವನ್ನು ಅಂಗೀಕರಿಸಿದ್ದಾರೆ. ಜೂನ್ 9ರಂದು ಸಂಜೆ 7.15ಕ್ಕೆ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ