AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh: ವಿಜಯವಾಡದಲ್ಲಿ ಕಿಡಿಗೇಡಿಗಳಿಂದ ಟಿಡಿಪಿ ಕಚೇರಿ ಧ್ವಂಸ, ಕಾರಿಗೆ ಬೆಂಕಿ

ವಿಜಯವಾಡದಲ್ಲಿ ಕಿಡಿಗೇಡಿಗಳು ತೆಲುಗು ದೇಶಂ ಪಕ್ಷದ ಕಚೇರಿಯನ್ನು ಧ್ವಂಸಗೊಳಿಸಿದ್ದು, ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ತೆಲುಗು ದೇಶಂ ಪಕ್ಷದ (ಟಿಡಿಪಿ) ಕಚೇರಿ ಮೇಲೆ ದಾಳಿ ಮಾಡಿದ ಅಪರಿಚಿತ ದುಷ್ಕರ್ಮಿಗಳು ಟಿಡಿಪಿ ಪ್ರಧಾನ ಕಾರ್ಯದರ್ಶಿ ಕೊನೇರು ಸಂದೀಪ್ ಅವರ ಕಾರಿಗೆ ಬೆಂಕಿ ಹಚ್ಚಿದ್ದಾರೆ.

Andhra Pradesh: ವಿಜಯವಾಡದಲ್ಲಿ ಕಿಡಿಗೇಡಿಗಳಿಂದ ಟಿಡಿಪಿ ಕಚೇರಿ ಧ್ವಂಸ, ಕಾರಿಗೆ ಬೆಂಕಿ
ತೆಲುಗು ದೇಶಂ ಪಕ್ಷದ ಕಚೇರಿ Image Credit source: The Hindu
ನಯನಾ ರಾಜೀವ್
|

Updated on:Feb 21, 2023 | 11:10 AM

Share

ವಿಜಯವಾಡದಲ್ಲಿ ಕಿಡಿಗೇಡಿಗಳು ತೆಲುಗು ದೇಶಂ ಪಕ್ಷದ ಕಚೇರಿಯನ್ನು ಧ್ವಂಸಗೊಳಿಸಿದ್ದು, ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ತೆಲುಗು ದೇಶಂ ಪಕ್ಷದ (ಟಿಡಿಪಿ) ಕಚೇರಿ ಮೇಲೆ ದಾಳಿ ಮಾಡಿದ ಅಪರಿಚಿತ ದುಷ್ಕರ್ಮಿಗಳು ಟಿಡಿಪಿ ಪ್ರಧಾನ ಕಾರ್ಯದರ್ಶಿ ಕೊನೇರು ಸಂದೀಪ್ ಅವರ ಕಾರಿಗೆ ಬೆಂಕಿ ಹಚ್ಚಿದ್ದಾರೆ.  ಈ ಕುರಿತು ಟಿಡಿಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ (ವೈಎಸ್‌ಆರ್‌ಸಿಪಿ) ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದ ಬಳಿಕ ದುಷ್ಕರ್ಮಿಗಳು ಗನ್ನವರಂನಲ್ಲಿ ಟಿಡಿಪಿ ಕಚೇರಿ ಮತ್ತು ಟಿಡಿಪಿ ಮುಖಂಡರ ಕಾರುಗಳನ್ನು ಧ್ವಂಸಗೊಳಿಸಿದ್ದಾರೆ.

ದಾಳಿಯ ನಂತರ ಟಿಡಿಪಿ ಸದಸ್ಯರು ವಿಧ್ವಂಸಕ ಕೃತ್ಯಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ತೆಲಂಗಾಣದ ವಿಕಾರಾಬಾದ್ ಜಿಲ್ಲೆಯಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕರೊಬ್ಬರ ಸಹಾಯಕರು ಹಿಂದೂ ಕಾರ್ಯಕರ್ತನ ಮನೆಯ ಮೇಲೆ ದಾಳಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಮತ್ತಷ್ಟು ಓದಿ: ಜೆಎನ್​ಯುನಲ್ಲಿ ಪೆರಿಯಾರ್, ಕಾರ್ಲ್​ ಮಾರ್ಕ್ಸ್​ ಭಾವಚಿತ್ರಗಳ ಧ್ವಂಸ: ವಿದ್ಯಾರ್ಥಿಗಳ ಈ ನಡೆಗೆ ಸ್ಟಾಲಿನ್ ಪ್ರತಿಕ್ರಿಯೆ

ದುಷ್ಕರ್ಮಿಗಳು ಹಿಂದೂ ಕಾರ್ಯಕರ್ತನ ಕಾರನ್ನು ಗುರಿಯಾಗಿಸಿ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವೈಎಸ್‌ಆರ್‌ಸಿಪಿ ಸದಸ್ಯರು ಮತ್ತು ಸ್ಥಳೀಯ ಶಾಸಕ ವಲ್ಲಭನೇನಿ ವಂಶಿ ಅವರ ಅನುಯಾಯಿಗಳಿಂದ ಹಾನಿಯಾಗಿದೆ ಎಂದು ಟಿಡಿಪಿ ಸದಸ್ಯರು ಆರೋಪಿಸಿದ್ದಾರೆ.

ಈ ಹಿಂದೆ, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಮತ್ತು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ವಿರುದ್ಧ ವಂಶಿ ಮಾಡಿದ ಕಾಮೆಂಟ್‌ಗಳ ಕುರಿತು ಟಿಡಿಪಿ ಮತ್ತು ವೈಎಸ್‌ಆರ್‌ಸಿಪಿ ಕಾರ್ಯಕರ್ತರು ವಾಗ್ವಾದಕ್ಕಿಳಿದ ನಂತರ ಮಾತಿನ ಚಕಮಕಿ ನಡೆಯಿತು.

ಕೆಲವು ಟಿಡಿಪಿ ನಾಯಕರು ತಮ್ಮ ನಾಯಕನ ಟೀಕೆಗೆ ವಂಶಿ ಬೆಂಬಲಿಗರು ಆಕ್ರೋಶಗೊಂಡರು. ಟಿಡಿಪಿ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ಅವರ ಪುತ್ರ ನಾರಾ ಲೋಕೇಶ್ ಅವರ ಮೇಲೆ ವೈಯಕ್ತಿಕ ವಾಗ್ದಾಳಿ ನಡೆಸಿದ ನಂತರ ವಿರೋಧ ಪಕ್ಷಗಳ ಮುಖಂಡರು ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಎಂದು ಐಎಎನ್‌ಎಸ್ ವರದಿ ತಿಳಿಸಿದೆ.

ಏತನ್ಮಧ್ಯೆ, ಆಡಳಿತಾರೂಢ ವೈಎಸ್‌ಆರ್‌ಸಿಪಿ ನಾಯಕರು ನಡೆಸುತ್ತಿರುವ ದೌರ್ಜನ್ಯದ ಬಗ್ಗೆ ರಾಜ್ಯಪಾಲರು ಮಧ್ಯಪ್ರವೇಶಿಸಬೇಕೆಂದು ಚಂದ್ರಬಾಬು ನಾಯ್ಡು ಒತ್ತಾಯಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:08 am, Tue, 21 February 23

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?