AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TDP Manifesto: ಇಲ್ಲಿಯವರೆಗೆ ನನ್ನ ಮೃದುಭಾವ ಮಾತ್ರ ನೋಡಿದ್ದೀರಿ: ವೈಎಸ್​​ಆರ್​​ಸಿಪಿಗೆ ಚಂದ್ರಬಾಬು ನಾಯ್ಡು ಎಚ್ಚರಿಕೆ

ಪ್ರತಿ ಮನೆಗೂ ನಿರ್ದಿಷ್ಟ ಕಾಲಮಿತಿಯಲ್ಲಿ ಮನೆ ಬಾಗಿಲಿಗೆ ಕುಡಿಯುವ ನೀರು ದೊರೆಯಲಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಕುರಿತು ಮಾತನಾಡಿದ ಚಂದ್ರಬಾಬು ನಾಯ್ಡು, ಹಿಂದುಳಿದ ವರ್ಗದವರ ಮೇಲೆ ನಡೆಯುವ ದಾಳಿಯಿಂದ ರಕ್ಷಿಸಲು ವಿಶೇಷ ಕಾಯ್ದೆ ತರಲಾಗುವುದು ಎಂದರು.

TDP Manifesto: ಇಲ್ಲಿಯವರೆಗೆ ನನ್ನ ಮೃದುಭಾವ ಮಾತ್ರ ನೋಡಿದ್ದೀರಿ: ವೈಎಸ್​​ಆರ್​​ಸಿಪಿಗೆ ಚಂದ್ರಬಾಬು ನಾಯ್ಡು ಎಚ್ಚರಿಕೆ
ಟಿಡಿಪಿ ಪ್ರಣಾಳಿಕೆ ಬಿಡುಗಡೆ
ರಶ್ಮಿ ಕಲ್ಲಕಟ್ಟ
|

Updated on: May 29, 2023 | 12:38 PM

Share

ಮಹಾನಾಡು ಕಾರ್ಯಕ್ರಮದ ಅಂತಿಮ ದಿನವಾದ ಭಾನುವಾರ (ಮೇ28) ತೆಲುಗು ದೇಶಂ ಪಕ್ಷ (TDP) ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಈ ಪ್ರಣಾಳಿಕೆಯಲ್ಲಿ ಮಹಿಳೆಯರು, ರೈತರು ಮತ್ತು ನಿರುದ್ಯೋಗಿ ಯುವಕರಿಗೆ ಹಲವಾರು ಭರವಸೆಗಳನ್ನು ನೀಡಲಾಗಿದೆ.ಆಂಧ್ರಪ್ರದೇಶದ (Andhra  Pradesh) ರಾಜಮಹೇಂದ್ರವರಂನ ಹೊರವಲಯದಲ್ಲಿ 2 ದಿನಗಳ ಕಾಲ ನಡೆದ ಸಮಾವೇಶದಲ್ಲಿ ಟಿಡಿಪಿ ಈ ಘೋಷಣೆ ಮಾಡಿದೆ. ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು (Chandrababu Naidu), ಭವಿಷ್ಯತುಕು ಖಾತರಿ (ಭವಿಷ್ಯಕ್ಕಾಗಿ ಭರವಸೆ) , ‘ಮಹಾ ಶಕ್ತಿ’, ‘ತಲ್ಲಿಕಿ ವಂದನೆ’, ‘ಯುವಶಕ್ತಿ’, ‘ಅನ್ನದಾತ’, ಕುಡಿಯುವ ನೀರಿನ ಸೌಲಭ್ಯ, ಹಿಂದುಳಿದ ವರ್ಗಗಳಿಗಾಗಿ ಕಾಯ್ದೆ ಮತ್ತು ವಿಷನ್ 2047 ಸೇರಿದಂತೆ ಏಳು ಭರವಸೆಗಳನ್ನು ನೀಡುತ್ತಿದ್ದೇವೆ ಎಂದು ಹೇಳಿದರು.

ಈ ವೇಳೆ ಮಾತನಾಡಿದ ಟಿಡಿಪಿ ಮುಖ್ಯಸ್ಥರು, ಅಧಿಕಾರಕ್ಕೆ ಬಂದರೆ 18-59 ವಯೋಮಾನದ ಮಹಿಳೆಯರಿಗೆ 1,500 ರೂ., ರೈತರಿಗೆ ವಾರ್ಷಿಕ 20,000 ರೂ. ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದರು.

ವಿಧಾನಸಭೆ ಚುನಾವಣೆಯ ಎರಡು ಭಾಗಗಳ ಪ್ರಣಾಳಿಕೆಯಲ್ಲಿ ಈ ಪ್ರಣಾಳಿಕೆ ಭಾಗ 1 ಆಗಿದ್ದು, ಇನ್ನರ್ಧವನ್ನು ದಸರಾ ವೇಳೆಗೆ ಅಂತಿಮಗೊಳಿಸಲಾಗುವುದು ಎಂದರು.

ತಲ್ಲಿಕಿ ವಂದನೆ ಅಡಿಯಲ್ಲಿ ರಾಜ್ಯದ ಪ್ರತಿಯೊಬ್ಬ ತಾಯಿಗೆ ವಾರ್ಷಿಕ 15 ಸಾವಿರ ರೂ.ಗಳನ್ನು ಯಾವುದೇ ಷರತ್ತುಗಳಿಲ್ಲದೆ ನೀಡಲಾಗುವುದು. ಮೂರು ಗ್ಯಾಸ್ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲಾಗುವುದು. APSRTC ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಜಾಗತಿಕ ಆರ್ಥಿಕತೆಗೆ ಸಂಪರ್ಕ ಕಲ್ಪಿಸುವ ಮೂಲಕ 20 ಲಕ್ಷ ಉದ್ಯೋಗಗಳನ್ನು ನೀಡುವುದಾಗಿ ಭರವಸೆ ನೀಡಿದ್ದು, ನಿರುದ್ಯೋಗಿ ಯುವಕರಿಗೆ 3,000 ರೂ. ನೀಡಲಾಗುವುದು.

ಪ್ರತಿ ಮನೆಗೂ ನಿರ್ದಿಷ್ಟ ಕಾಲಮಿತಿಯಲ್ಲಿ ಮನೆ ಬಾಗಿಲಿಗೆ ಕುಡಿಯುವ ನೀರು ದೊರೆಯಲಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಕುರಿತು ಮಾತನಾಡಿದ ಅವರು, ಹಿಂದುಳಿದ ವರ್ಗದವರ ಮೇಲೆ ನಡೆಯುವ ದಾಳಿಯಿಂದ ರಕ್ಷಿಸಲು ವಿಶೇಷ ಕಾಯ್ದೆ ತರಲಾಗುವುದು ಎಂದರು.

ಇದನ್ನೂ ಓದಿ: Narendra Modi: ಟರ್ಕಿ ಅಧ್ಯಕ್ಷರಾಗಿ ಮರು ಆಯ್ಕೆಯಾದ ಎರ್ಡೋಗನ್, ಅಭಿನಂದನೆ ತಿಳಿಸಿದ ಪ್ರಧಾನಿ ಮೋದಿ

ಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಅವರನ್ನು ಉದ್ದೇಶಿಸಿ ಮಾತನಾಡಿದ ಅವರು, ಇಲ್ಲಿಯವರೆಗೆ ನೀವು ನನ್ನ ಮೃದು ಭಾವವನ್ನು ನೋಡಿದ್ದೀರಿ. ನಮ್ಮ ಕಾರ್ಯಕರ್ತರಿಗೆ ಕಿರುಕುಳ ನೀಡುವವರನ್ನು ಸುಮ್ಮನೆ ಬಿಡುವುದಿಲ್ಲ. ರಾಜಕೀಯ ರೌಡಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳುತ್ತೇವೆ. ರಾಜ್ಯದಲ್ಲಿ ಅಭಿವೃದ್ಧಿಯನ್ನು ಸ್ಥಗಿತಗೊಳಿಸಲು ಟಿಡಿಪಿ ಆರಂಭಿಸಿದ ಎಲ್ಲಾ ಯೋಜನೆಗಳನ್ನು ವೈಎಸ್‌ಆರ್‌ಸಿಪಿ ಸರ್ಕಾರ ಹಿಂತೆಗೆದುಕೊಂಡಿದೆ ಎಂದು ಅವರು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ