AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TDP Manifesto: ಇಲ್ಲಿಯವರೆಗೆ ನನ್ನ ಮೃದುಭಾವ ಮಾತ್ರ ನೋಡಿದ್ದೀರಿ: ವೈಎಸ್​​ಆರ್​​ಸಿಪಿಗೆ ಚಂದ್ರಬಾಬು ನಾಯ್ಡು ಎಚ್ಚರಿಕೆ

ಪ್ರತಿ ಮನೆಗೂ ನಿರ್ದಿಷ್ಟ ಕಾಲಮಿತಿಯಲ್ಲಿ ಮನೆ ಬಾಗಿಲಿಗೆ ಕುಡಿಯುವ ನೀರು ದೊರೆಯಲಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಕುರಿತು ಮಾತನಾಡಿದ ಚಂದ್ರಬಾಬು ನಾಯ್ಡು, ಹಿಂದುಳಿದ ವರ್ಗದವರ ಮೇಲೆ ನಡೆಯುವ ದಾಳಿಯಿಂದ ರಕ್ಷಿಸಲು ವಿಶೇಷ ಕಾಯ್ದೆ ತರಲಾಗುವುದು ಎಂದರು.

TDP Manifesto: ಇಲ್ಲಿಯವರೆಗೆ ನನ್ನ ಮೃದುಭಾವ ಮಾತ್ರ ನೋಡಿದ್ದೀರಿ: ವೈಎಸ್​​ಆರ್​​ಸಿಪಿಗೆ ಚಂದ್ರಬಾಬು ನಾಯ್ಡು ಎಚ್ಚರಿಕೆ
ಟಿಡಿಪಿ ಪ್ರಣಾಳಿಕೆ ಬಿಡುಗಡೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 29, 2023 | 12:38 PM

Share

ಮುಖ್ಯಾಂಶಗಳು

  • ಟಿಡಿಪಿ ಅಧಿಕಾರಕ್ಕೆ ಬಂದರೆ 18-59 ವಯೋಮಾನದ ಮಹಿಳೆಯರಿಗೆ 1,500 ರೂ., ರೈತರಿಗೆ ವಾರ್ಷಿಕ 20,000 ರೂ. ಆರ್ಥಿಕ ನೆರವು
  • ಭವಿಷ್ಯತುಕು ಖಾತರಿ (ಭವಿಷ್ಯಕ್ಕಾಗಿ ಭರವಸೆ) , 'ಮಹಾ ಶಕ್ತಿ', 'ತಲ್ಲಿಕಿ ವಂದನೆ', 'ಯುವಶಕ್ತಿ', 'ಅನ್ನದಾತ', ಕುಡಿಯುವ ನೀರಿನ ಸೌಲಭ್ಯ, ಹಿಂದುಳಿದ ವರ್ಗಗಳಿಗಾಗಿ ಕಾಯ್ದೆ ಮತ್ತು ವಿಷನ್ 2047 ಸೇರಿದಂತೆ ಏಳು ಭರವಸೆ
  • ತಲ್ಲಿಕಿ ವಂದನೆ ಅಡಿಯಲ್ಲಿ ರಾಜ್ಯದ ಪ್ರತಿಯೊಬ್ಬ ತಾಯಿಗೆ ವಾರ್ಷಿಕ 15 ಸಾವಿರ ರೂ.ಗಳನ್ನು ಯಾವುದೇ ಷರತ್ತುಗಳಿಲ್ಲದೆ ನೀಡಲಾಗುವುದು.

ಮಹಾನಾಡು ಕಾರ್ಯಕ್ರಮದ ಅಂತಿಮ ದಿನವಾದ ಭಾನುವಾರ (ಮೇ28) ತೆಲುಗು ದೇಶಂ ಪಕ್ಷ (TDP) ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಈ ಪ್ರಣಾಳಿಕೆಯಲ್ಲಿ ಮಹಿಳೆಯರು, ರೈತರು ಮತ್ತು ನಿರುದ್ಯೋಗಿ ಯುವಕರಿಗೆ ಹಲವಾರು ಭರವಸೆಗಳನ್ನು ನೀಡಲಾಗಿದೆ.ಆಂಧ್ರಪ್ರದೇಶದ (Andhra  Pradesh) ರಾಜಮಹೇಂದ್ರವರಂನ ಹೊರವಲಯದಲ್ಲಿ 2 ದಿನಗಳ ಕಾಲ ನಡೆದ ಸಮಾವೇಶದಲ್ಲಿ ಟಿಡಿಪಿ ಈ ಘೋಷಣೆ ಮಾಡಿದೆ. ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು (Chandrababu Naidu), ಭವಿಷ್ಯತುಕು ಖಾತರಿ (ಭವಿಷ್ಯಕ್ಕಾಗಿ ಭರವಸೆ) , ‘ಮಹಾ ಶಕ್ತಿ’, ‘ತಲ್ಲಿಕಿ ವಂದನೆ’, ‘ಯುವಶಕ್ತಿ’, ‘ಅನ್ನದಾತ’, ಕುಡಿಯುವ ನೀರಿನ ಸೌಲಭ್ಯ, ಹಿಂದುಳಿದ ವರ್ಗಗಳಿಗಾಗಿ ಕಾಯ್ದೆ ಮತ್ತು ವಿಷನ್ 2047 ಸೇರಿದಂತೆ ಏಳು ಭರವಸೆಗಳನ್ನು ನೀಡುತ್ತಿದ್ದೇವೆ ಎಂದು ಹೇಳಿದರು.

ಈ ವೇಳೆ ಮಾತನಾಡಿದ ಟಿಡಿಪಿ ಮುಖ್ಯಸ್ಥರು, ಅಧಿಕಾರಕ್ಕೆ ಬಂದರೆ 18-59 ವಯೋಮಾನದ ಮಹಿಳೆಯರಿಗೆ 1,500 ರೂ., ರೈತರಿಗೆ ವಾರ್ಷಿಕ 20,000 ರೂ. ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದರು.

ವಿಧಾನಸಭೆ ಚುನಾವಣೆಯ ಎರಡು ಭಾಗಗಳ ಪ್ರಣಾಳಿಕೆಯಲ್ಲಿ ಈ ಪ್ರಣಾಳಿಕೆ ಭಾಗ 1 ಆಗಿದ್ದು, ಇನ್ನರ್ಧವನ್ನು ದಸರಾ ವೇಳೆಗೆ ಅಂತಿಮಗೊಳಿಸಲಾಗುವುದು ಎಂದರು.

ತಲ್ಲಿಕಿ ವಂದನೆ ಅಡಿಯಲ್ಲಿ ರಾಜ್ಯದ ಪ್ರತಿಯೊಬ್ಬ ತಾಯಿಗೆ ವಾರ್ಷಿಕ 15 ಸಾವಿರ ರೂ.ಗಳನ್ನು ಯಾವುದೇ ಷರತ್ತುಗಳಿಲ್ಲದೆ ನೀಡಲಾಗುವುದು. ಮೂರು ಗ್ಯಾಸ್ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲಾಗುವುದು. APSRTC ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಜಾಗತಿಕ ಆರ್ಥಿಕತೆಗೆ ಸಂಪರ್ಕ ಕಲ್ಪಿಸುವ ಮೂಲಕ 20 ಲಕ್ಷ ಉದ್ಯೋಗಗಳನ್ನು ನೀಡುವುದಾಗಿ ಭರವಸೆ ನೀಡಿದ್ದು, ನಿರುದ್ಯೋಗಿ ಯುವಕರಿಗೆ 3,000 ರೂ. ನೀಡಲಾಗುವುದು.

ಪ್ರತಿ ಮನೆಗೂ ನಿರ್ದಿಷ್ಟ ಕಾಲಮಿತಿಯಲ್ಲಿ ಮನೆ ಬಾಗಿಲಿಗೆ ಕುಡಿಯುವ ನೀರು ದೊರೆಯಲಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಕುರಿತು ಮಾತನಾಡಿದ ಅವರು, ಹಿಂದುಳಿದ ವರ್ಗದವರ ಮೇಲೆ ನಡೆಯುವ ದಾಳಿಯಿಂದ ರಕ್ಷಿಸಲು ವಿಶೇಷ ಕಾಯ್ದೆ ತರಲಾಗುವುದು ಎಂದರು.

ಇದನ್ನೂ ಓದಿ: Narendra Modi: ಟರ್ಕಿ ಅಧ್ಯಕ್ಷರಾಗಿ ಮರು ಆಯ್ಕೆಯಾದ ಎರ್ಡೋಗನ್, ಅಭಿನಂದನೆ ತಿಳಿಸಿದ ಪ್ರಧಾನಿ ಮೋದಿ

ಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಅವರನ್ನು ಉದ್ದೇಶಿಸಿ ಮಾತನಾಡಿದ ಅವರು, ಇಲ್ಲಿಯವರೆಗೆ ನೀವು ನನ್ನ ಮೃದು ಭಾವವನ್ನು ನೋಡಿದ್ದೀರಿ. ನಮ್ಮ ಕಾರ್ಯಕರ್ತರಿಗೆ ಕಿರುಕುಳ ನೀಡುವವರನ್ನು ಸುಮ್ಮನೆ ಬಿಡುವುದಿಲ್ಲ. ರಾಜಕೀಯ ರೌಡಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳುತ್ತೇವೆ. ರಾಜ್ಯದಲ್ಲಿ ಅಭಿವೃದ್ಧಿಯನ್ನು ಸ್ಥಗಿತಗೊಳಿಸಲು ಟಿಡಿಪಿ ಆರಂಭಿಸಿದ ಎಲ್ಲಾ ಯೋಜನೆಗಳನ್ನು ವೈಎಸ್‌ಆರ್‌ಸಿಪಿ ಸರ್ಕಾರ ಹಿಂತೆಗೆದುಕೊಂಡಿದೆ ಎಂದು ಅವರು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ