Teacher recruitment scam: ಶಾಲಾ ಸೇವಾ ಆಯೋಗದ ಮಾಜಿ ಸಲಹೆಗಾರ ಮತ್ತು ಅಧ್ಯಕ್ಷನನ್ನು ಬಂಧಿಸಿದ ಸಿಬಿಐ

ಶಾಲಾ ಸೇವಾ ಆಯೋಗದ (ಎಸ್‌ಎಸ್‌ಸಿ) ಮಾಜಿ ಸಲಹೆಗಾರ ಶಾಂತಿ ಪ್ರಸಾದ್ ಸಿನ್ಹಾ ಮತ್ತು ಎಸ್‌ಎಸ್‌ಸಿ ಮಾಜಿ ಅಧ್ಯಕ್ಷ ಅಶೋಕ್ ಸಹಾ ಅವರನ್ನು ಸಿಬಿಐ ಬಂಧಿಸಿದೆ

Teacher recruitment scam: ಶಾಲಾ ಸೇವಾ ಆಯೋಗದ ಮಾಜಿ ಸಲಹೆಗಾರ ಮತ್ತು ಅಧ್ಯಕ್ಷನನ್ನು ಬಂಧಿಸಿದ ಸಿಬಿಐ
CBI
Updated By: ರಶ್ಮಿ ಕಲ್ಲಕಟ್ಟ

Updated on: Aug 10, 2022 | 7:19 PM

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಶಾಲಾ ಸೇವಾ ಆಯೋಗದ (SSC) ಮಾಜಿ ಸಲಹೆಗಾರ ಶಾಂತಿ ಪ್ರಸಾದ್ ಸಿನ್ಹಾ ಮತ್ತು ಎಸ್‌ಎಸ್‌ಸಿ ಮಾಜಿ ಅಧ್ಯಕ್ಷ ಅಶೋಕ್ ಸಹಾ ಅವರನ್ನು ಸಿಬಿಐ ಬಂಧಿಸಿದೆ ಎಂದು ಏಜೆನ್ಸಿ ಅಧಿಕಾರಿ ತಿಳಿಸಿದ್ದಾರೆ. ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಸಹಾಯಕಿ ಅರ್ಪಿತಾ ಮುಖರ್ಜಿ ಅವರನ್ನು ಜುಲೈ 23 ರಂದು ಜಾರಿ ನಿರ್ದೇಶನಾಲಯ (ED) ಬಂಧಿಸಿದ ನಂತರ ಬಂಗಾಳದ ಶಾಲಾ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಬುಧವಾರ ಇಬ್ಬರು ಅಧಿಕಾರಿಗಳನ್ನು ಬಂಧಿಸಿದೆ.

ಪಶ್ಚಿಮ ಬಂಗಾಳದ ಸರ್ಕಾರಿ ಪ್ರಾಯೋಜಿತ ಮತ್ತು ಅನುದಾನಿತ ಶಾಲೆಗಳಿಗೆ ಶಾಲಾ ಸೇವಾ ಆಯೋಗ (ಎಸ್‌ಎಸ್‌ಸಿ) ಮಾಡಿದ ಅಕ್ರಮ ನೇಮಕಾತಿಗಳಲ್ಲಿ ಹಣದ ಜಾಡು ಹಿಡಿದಿರುವ ಇಜಿ, ಚಟರ್ಜಿ ಮತ್ತು ಮುಖರ್ಜಿ ಅವರನ್ನು ಬಂಧಿಸಿತ್ತು.

ನೇಮಕಾತಿಗಾಗಿ ರಚಿಸಲಾದ ವಿಶೇಷ ಸಲಹಾ ಸಮಿತಿಯ ಸಂಚಾಲಕ ಶಾಂತಿ ಪ್ರಸಾದ್ ಸಿನ್ಹಾ ಮತ್ತು ರಾಜ್ಯ ಶಾಲಾ ಸೇವಾ ಆಯೋಗದ ಕಾರ್ಯದರ್ಶಿ ಅಶೋಕ್ ಸಹಾ ಅವರನ್ನು ಸಿಬಿಐ ಇಂದು ಬಂಧಿಸಿದೆ.
ಕಲ್ಕತ್ತಾ ಹೈಕೋರ್ಟ್ ಪ್ರಕರಣದ ಕುರಿತು ಸಿಬಿಐ ತನಿಖೆಗೆ ಆದೇಶಿಸಿದ ನಂತರ ಸಿನ್ಹಾ ಮತ್ತು ಸಹಾ ಅವರನ್ನು ಹಲವು ಬಾರಿ ವಿಚಾರಣೆ ನಡೆಸಲಾಯಿತು. ಬುಧವಾರ ವಿಚಾರಣೆಯ ನಂತರ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಯಿತು.

ಮುಖರ್ಜಿಯವರ ಒಡೆತನದ ಅಪಾರ್ಟ್‌ಮೆಂಟ್‌ಗಳಿಂದ ₹ 49.80 ಕೋಟಿ ನಗದು, ಆಭರಣಗಳು ಮತ್ತು ಚಿನ್ನದ ಗಟ್ಟಿಗಳನ್ನು ಇಡಿ ವಶಪಡಿಸಿಕೊಂಡಿದೆ. ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಆರೋಪ ಎದುರಿಸುತ್ತಿದ್ದಾರೆ. ಚಟರ್ಜಿ ಪ್ರಭಾವಿ ವ್ಯಕ್ತಿಯಾಗಿಲ್ಲ ಎಂದು ಪ್ರತಿಪಾದಿಸಿದ ಅವರ ವಕೀಲರು, ನ್ಯಾಯಾಲಯ ವಿಧಿಸುವ ಯಾವುದೇ ಷರತ್ತುಗಳ ಮೇಲೆ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದ್ದರು.

ಹೆಚ್ಚಿನ  ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:26 pm, Wed, 10 August 22