AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಕರ ನೇಮಕಾತಿ ಹಗರಣ: ಶಿಕ್ಷಕಿ ಸುಜಾತಾ ಜಾಗದಲ್ಲಿ 20 ವರ್ಷಗಳಿಂದ ಕೆಲಸ ಮಾಡ್ತಿದ್ದಿದ್ದು ಆಕೆಯ ಸಹೋದರಿ ಸಂಗೀತಾ

ಪಶ್ಚಿಮ ಬಂಗಾಳ(West Bengal)ದ ಬಹುಕೋಟಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯಲ್ಲಿ ಸಾಕಷ್ಟು ಹೊಸ ವಿಚಾರಗಳು ಬಹಿರಂಗಗೊಂಡಿವೆ. ಕೆಲವು ತಿಂಗಳಿನಿಂದ ಇಡೀ ಪಶ್ಚಿಮ ಬಂಗಾಳದಲ್ಲಿ ನೇಮಕಾತಿ ಹಗರಣದ್ದೇ ಮಾತು, ಹೈಕೋರ್ಟ್​ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಸರ್ಕಾರವು ಹಲವು ನಾಯಕರ ಕೆಂಗಣ್ಣಿಗೂ ಗುರಿಯಾಗುತ್ತಿದೆ.

ಶಿಕ್ಷಕರ ನೇಮಕಾತಿ ಹಗರಣ: ಶಿಕ್ಷಕಿ ಸುಜಾತಾ ಜಾಗದಲ್ಲಿ 20 ವರ್ಷಗಳಿಂದ ಕೆಲಸ ಮಾಡ್ತಿದ್ದಿದ್ದು ಆಕೆಯ ಸಹೋದರಿ ಸಂಗೀತಾ
ಶಿಕ್ಷಕರ ನೇಮಕಾತಿ ಹಗರಣ
ನಯನಾ ರಾಜೀವ್
|

Updated on: Oct 19, 2023 | 3:29 PM

Share

ಪಶ್ಚಿಮ ಬಂಗಾಳ(West Bengal)ದ ಬಹುಕೋಟಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯಲ್ಲಿ ಸಾಕಷ್ಟು ಹೊಸ ವಿಚಾರಗಳು ಬಹಿರಂಗಗೊಂಡಿವೆ. ಕೆಲವು ತಿಂಗಳಿನಿಂದ ಇಡೀ ಪಶ್ಚಿಮ ಬಂಗಾಳದಲ್ಲಿ ನೇಮಕಾತಿ ಹಗರಣದ್ದೇ ಮಾತು, ಹೈಕೋರ್ಟ್​ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಸರ್ಕಾರವು ಹಲವು ನಾಯಕರ ಕೆಂಗಣ್ಣಿಗೂ ಗುರಿಯಾಗುತ್ತಿದೆ.

2004ರಲ್ಲಿ ವಟಾರ್ ಬ್ಲಾಕ್‌ನ ಸಾಹೇಬ್‌ಗಂಜ್ ನಂ.1 ಗ್ರಾಮ ಪಂಚಾಯತ್‌ನಲ್ಲಿರುವ ನೊಣದಂಗ ಶಿಶು ಶಿಕ್ಷಣ ಕೇಂದ್ರದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ.

ಸುಜಾತಾ ಎಂಬುವವರು ಶಿಕ್ಷಕಿಯಾಗಿ ಕೆಲಸಕ್ಕೆ ನೇಮಕಗೊಂಡಿದ್ದರು, ಆದರೆ ಕಳೆದ 20 ವರ್ಷಗಳಿಂದ ಅವರ ಸಹೋದರಿ ಸಂಗೀತಾ ಎಂಬುವವರು ಶಿಕ್ಷಕಿಯಾಗಿ ಅಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಅಕ್ರಮ ಬೆಳಕಿಗೆ ಬರಬೇಕಾದರೆ 20 ವರ್ಷವೇ ಹಿಡಿಯಿತು ಎಂಬುದು ವಿಪರ್ಯಾಸ.

ಮತ್ತಷ್ಟು ಓದಿ: ಶಿಕ್ಷಕರ ನೇಮಕಾತಿ ಹಗರಣದಲ್ಲಿ ಯಾರೆಲ್ಲ ಭಾಗಿ? ಸಿಐಡಿ ವರದಿ ಹೇಳಿದ್ದೇನು?

ಸಂಗೀತಾ ನೇಮಕದಲ್ಲಿ ಕೆಲವು ಅವ್ಯವಹಾರಗಳು ಪತ್ತೆಯಾಗಿದ್ದವು. ಆದರೆ, ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳನ್ನು ಹಿಡಿಯಲು ಎರಡು ದಶಕಗಳಿಗೂ ಹೆಚ್ಚು ಕಾಲ ಬೇಕಾಯಿತು ಎಂಬ ಪ್ರಶ್ನೆ ನಾನಾ ವಲಯಗಳಿಂದ ಏಳಲಾರಂಭಿಸಿದೆ. ಮೂಲಗಳ ಪ್ರಕಾರ, ಸುಜಾತಾ 2004 ರಲ್ಲಿ ಆ ಮಕ್ಕಳ ಶಿಕ್ಷಣ ಕೇಂದ್ರದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡಲು ಪ್ರಾರಂಭಿಸಿದರು. ಆದರೆ ಸುಜಾತಾ ಅವರ ಬದಲಿಗೆ ಅವರ ಸಹೋದರಿ ಸಂಗೀತಾ ಭಟ್ಟಾಚಾರ್ಯ 20 ವರ್ಷಗಳಿಂದ ಆ ಮಕ್ಕಳ ಶಿಕ್ಷಣ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಸಂಭಾವನೆ ಪಡೆಯುತ್ತಿದ್ದಾರೆ.

ಈ ಸುದ್ದಿ ತಿಳಿದ ತಕ್ಷಣ ಬ್ಲಾಕ್‌ನಲ್ಲಿ ಅಲ್ಲೋಲ ಕಲ್ಲೋಲ ಉಂಟಾಯಿತು. ಬಿಡಿಒ ಅರುಣ್ ಕುಮಾರ್ ಬಿಸ್ವಾಸ್ ಅವರು ನೇಮಕಾತಿಯಲ್ಲಿ ತಪ್ಪು ಕಂಡುಬಂದಿರುವುದನ್ನು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಈಗಾಗಲೇ ಉನ್ನತ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಪಂಚಾಯತ್ ಸಮಿತಿಯ ಅಧ್ಯಕ್ಷ ವಾಸುದೇವ್ ಯಶ್ ಹೇಳಿದ್ದಾರೆ.

ಮತ್ತೊಂದೆಡೆ, 2004ರಲ್ಲಿ ಸಿಪಿಎಂ ಆಡಳಿತಾವಧಿಯಲ್ಲಿ ಈ ನಿಯಮ ರೂಪಿಸಲಾಗಿತ್ತು. ಆಡಳಿತಾತ್ಮಕ ಮಟ್ಟದಲ್ಲಿ ತನಿಖೆ ಆರಂಭಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

ಆ ಬಳಿಕ ಸಿಪಿಎಂ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮಹಿಳೆಯ ವೇತನದಲ್ಲಿ ಪಕ್ಷಗಳಿಗೂ ಪಾಲಿತ್ತು, ಹಾಗಾಗಿ ಈ ವಿಚಾರವನ್ನು ಮುಚ್ಚಿಟ್ಟಿದ್ದಾರೆ ಎಂದಿದ್ದಾರೆ. ಆದರೆ ಎಡಪಕ್ಷಗಳು ಆರೋಪಗಳನ್ನು ತಳ್ಳಿ ಹಾಕಿವೆ. ಸಿಪಿಎಂ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಎಂದು ಸಿಪಿಎಂ ಮುಖಂಡ ಸುಭಾಷ್ ಮಂಡಲ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ