AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾಂಟಿನ ಜೇಬಿನಲ್ಲಿ ದೇಶಿ ನಿರ್ಮಿತ ಪಿಸ್ತೂಲ್​ ಇಟ್ಟುಕೊಂಡು ರಸ್ತೆಯಲ್ಲಿ ಓಡಾಡಿದ ಶಿಕ್ಷಕಿ ಅರೆಸ್ಟ್​ !

ಶಿಕ್ಷಕಿ ತಾನು ಧರಿಸಿದ ನೀಲಿ ಬಣ್ಣದ ಜೀನ್ಸ್​ ಪ್ಯಾಂಟ್​ನ ಜೇಬಲ್ಲಿ ಪಿಸ್ತೂಲ್​ ಇಟ್ಟುಕೊಂಡು ಓಡಾಡುತ್ತಿದ್ದ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ಕೂಡ ವೈರಲ್ ಆಗಿವೆ.

ಪ್ಯಾಂಟಿನ ಜೇಬಿನಲ್ಲಿ ದೇಶಿ ನಿರ್ಮಿತ ಪಿಸ್ತೂಲ್​ ಇಟ್ಟುಕೊಂಡು ರಸ್ತೆಯಲ್ಲಿ ಓಡಾಡಿದ ಶಿಕ್ಷಕಿ ಅರೆಸ್ಟ್​ !
ಪಿಸ್ತೂಲ್​ ಇಟ್ಟುಕೊಂಡಿದ್ದ ಶಿಕ್ಷಕಿ ಅರೆಸ್ಟ್​
TV9 Web
| Edited By: |

Updated on: Apr 13, 2022 | 1:39 PM

Share

ಪಿಸ್ತೂಲ್​ ಇಟ್ಟುಕೊಂಡಿದ್ದ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರಪ್ರದೇಶದ ಮೈನ್​ಪುರಿಯಲ್ಲಿ ನಡೆದಿದೆ. ಇವರ ಹೆಸರು ಕರೀಷ್ಮಾ ಸಿಂಗ್ ಯಾದವ್​ ಎಂದಾಗಿದ್ದು ದೇಶಿ ನಿರ್ಮಿತ ಪಿಸ್ತೂಲ್​ ಹೊಂದಿದ್ದರು.  ಫಿರೋಜಾಬಾದ್ ಶಾಲೆಯೊಂದರ ಶಿಕ್ಷಕಿ. ಮಂಗಳವಾರ ಯಾವುದೋ ಕೆಲಸದ ನಿಮಿತ್ತ ಮೈನ್​ಪುರಿಗೆ ಆಗಮಿಸಿದ್ದರು. ಇವರು ಕೊತ್ವಾಲಿ ಏರಿಯಾದಲ್ಲಿ ಪಿಸ್ತೂಲ್​  ಹಿಡಿದುಕೊಂಡು ಓಡಾಡುತ್ತಿದ್ದಾರೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಲಾಯಿತು. ಆ ಮಹಿಳೆಯನ್ನು ಹಿಂಬಾಲಿಸಿ, ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಇನ್ನು ಶಿಕ್ಷಕಿ ತಾನು ಧರಿಸಿದ ನೀಲಿ ಬಣ್ಣದ ಜೀನ್ಸ್​ ಪ್ಯಾಂಟ್​ನ ಜೇಬಲ್ಲಿ ಪಿಸ್ತೂಲ್​ ಇಟ್ಟುಕೊಂಡು ಓಡಾಡುತ್ತಿದ್ದ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ಕೂಡ ವೈರಲ್ ಆಗಿವೆ. ಪೊಲೀಸರು ತಮ್ಮ ಬಳಿ ಬರುತ್ತಿದ್ದಂತೆ ಸುಮ್ಮನೆ ನಿಂತಿದ್ದಾರೆ. ಬಳಿಕ ಮಹಿಳಾ ಕಾನ್​​ಸ್ಟೆಬಲ್​ ಶಿಕ್ಷಕಿಯ ಜೇಬಿಗೆ ಕೈ ಹಾಕಿ, ಅದನ್ನು ತೆಗೆದಿದ್ದಾರೆ.  ಕೂಡಲೇ ಕರಿಷ್ಮಾರನ್ನು ಪೊಲೀಸರು ಬಂಧಿಸಿದ್ದಾರೆ.  ಮಹಿಳೆ ವಿರುದ್ಧ ಪ್ರಕರಣ ದಾಖಲಾಗಿದೆ. ನಾವು ಅವರನ್ನು ವಿಚಾರಣೆ ನಡೆಸುತ್ತಿದ್ದೇವೆ.  ಈ ಪಿಸ್ತೂಲ್​ ಯಾಕೆ ಹೊಂದಿದ್ದರು? ಅದನ್ನು ಹಿಡಿದುಕೊಂಡು ಎಲ್ಲಿಗೆ ಹೊರಟಿದ್ದರು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನಿಸಲಾಗುತ್ತಿದೆ ಎಂದು ಮೈನ್​ಪುರಿ ಎಸ್​ಪಿ ಅಜಯ್​ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಸರ್ಕಾರವೇ ಕೊಲೆ ಮಾಡಿದೆ: ಗುತ್ತಿಗೆದಾರರ ಸಂಘ ಆಕ್ರೋಶ, ಮುಷ್ಕರಕ್ಕೆ ನಿರ್ಧಾರ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!