AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾಂಟಿನ ಜೇಬಿನಲ್ಲಿ ದೇಶಿ ನಿರ್ಮಿತ ಪಿಸ್ತೂಲ್​ ಇಟ್ಟುಕೊಂಡು ರಸ್ತೆಯಲ್ಲಿ ಓಡಾಡಿದ ಶಿಕ್ಷಕಿ ಅರೆಸ್ಟ್​ !

ಶಿಕ್ಷಕಿ ತಾನು ಧರಿಸಿದ ನೀಲಿ ಬಣ್ಣದ ಜೀನ್ಸ್​ ಪ್ಯಾಂಟ್​ನ ಜೇಬಲ್ಲಿ ಪಿಸ್ತೂಲ್​ ಇಟ್ಟುಕೊಂಡು ಓಡಾಡುತ್ತಿದ್ದ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ಕೂಡ ವೈರಲ್ ಆಗಿವೆ.

ಪ್ಯಾಂಟಿನ ಜೇಬಿನಲ್ಲಿ ದೇಶಿ ನಿರ್ಮಿತ ಪಿಸ್ತೂಲ್​ ಇಟ್ಟುಕೊಂಡು ರಸ್ತೆಯಲ್ಲಿ ಓಡಾಡಿದ ಶಿಕ್ಷಕಿ ಅರೆಸ್ಟ್​ !
ಪಿಸ್ತೂಲ್​ ಇಟ್ಟುಕೊಂಡಿದ್ದ ಶಿಕ್ಷಕಿ ಅರೆಸ್ಟ್​
TV9 Web
| Edited By: |

Updated on: Apr 13, 2022 | 1:39 PM

Share

ಪಿಸ್ತೂಲ್​ ಇಟ್ಟುಕೊಂಡಿದ್ದ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರಪ್ರದೇಶದ ಮೈನ್​ಪುರಿಯಲ್ಲಿ ನಡೆದಿದೆ. ಇವರ ಹೆಸರು ಕರೀಷ್ಮಾ ಸಿಂಗ್ ಯಾದವ್​ ಎಂದಾಗಿದ್ದು ದೇಶಿ ನಿರ್ಮಿತ ಪಿಸ್ತೂಲ್​ ಹೊಂದಿದ್ದರು.  ಫಿರೋಜಾಬಾದ್ ಶಾಲೆಯೊಂದರ ಶಿಕ್ಷಕಿ. ಮಂಗಳವಾರ ಯಾವುದೋ ಕೆಲಸದ ನಿಮಿತ್ತ ಮೈನ್​ಪುರಿಗೆ ಆಗಮಿಸಿದ್ದರು. ಇವರು ಕೊತ್ವಾಲಿ ಏರಿಯಾದಲ್ಲಿ ಪಿಸ್ತೂಲ್​  ಹಿಡಿದುಕೊಂಡು ಓಡಾಡುತ್ತಿದ್ದಾರೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಲಾಯಿತು. ಆ ಮಹಿಳೆಯನ್ನು ಹಿಂಬಾಲಿಸಿ, ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಇನ್ನು ಶಿಕ್ಷಕಿ ತಾನು ಧರಿಸಿದ ನೀಲಿ ಬಣ್ಣದ ಜೀನ್ಸ್​ ಪ್ಯಾಂಟ್​ನ ಜೇಬಲ್ಲಿ ಪಿಸ್ತೂಲ್​ ಇಟ್ಟುಕೊಂಡು ಓಡಾಡುತ್ತಿದ್ದ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ಕೂಡ ವೈರಲ್ ಆಗಿವೆ. ಪೊಲೀಸರು ತಮ್ಮ ಬಳಿ ಬರುತ್ತಿದ್ದಂತೆ ಸುಮ್ಮನೆ ನಿಂತಿದ್ದಾರೆ. ಬಳಿಕ ಮಹಿಳಾ ಕಾನ್​​ಸ್ಟೆಬಲ್​ ಶಿಕ್ಷಕಿಯ ಜೇಬಿಗೆ ಕೈ ಹಾಕಿ, ಅದನ್ನು ತೆಗೆದಿದ್ದಾರೆ.  ಕೂಡಲೇ ಕರಿಷ್ಮಾರನ್ನು ಪೊಲೀಸರು ಬಂಧಿಸಿದ್ದಾರೆ.  ಮಹಿಳೆ ವಿರುದ್ಧ ಪ್ರಕರಣ ದಾಖಲಾಗಿದೆ. ನಾವು ಅವರನ್ನು ವಿಚಾರಣೆ ನಡೆಸುತ್ತಿದ್ದೇವೆ.  ಈ ಪಿಸ್ತೂಲ್​ ಯಾಕೆ ಹೊಂದಿದ್ದರು? ಅದನ್ನು ಹಿಡಿದುಕೊಂಡು ಎಲ್ಲಿಗೆ ಹೊರಟಿದ್ದರು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನಿಸಲಾಗುತ್ತಿದೆ ಎಂದು ಮೈನ್​ಪುರಿ ಎಸ್​ಪಿ ಅಜಯ್​ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಸರ್ಕಾರವೇ ಕೊಲೆ ಮಾಡಿದೆ: ಗುತ್ತಿಗೆದಾರರ ಸಂಘ ಆಕ್ರೋಶ, ಮುಷ್ಕರಕ್ಕೆ ನಿರ್ಧಾರ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?