AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾಂಟಿನ ಜೇಬಿನಲ್ಲಿ ದೇಶಿ ನಿರ್ಮಿತ ಪಿಸ್ತೂಲ್​ ಇಟ್ಟುಕೊಂಡು ರಸ್ತೆಯಲ್ಲಿ ಓಡಾಡಿದ ಶಿಕ್ಷಕಿ ಅರೆಸ್ಟ್​ !

ಶಿಕ್ಷಕಿ ತಾನು ಧರಿಸಿದ ನೀಲಿ ಬಣ್ಣದ ಜೀನ್ಸ್​ ಪ್ಯಾಂಟ್​ನ ಜೇಬಲ್ಲಿ ಪಿಸ್ತೂಲ್​ ಇಟ್ಟುಕೊಂಡು ಓಡಾಡುತ್ತಿದ್ದ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ಕೂಡ ವೈರಲ್ ಆಗಿವೆ.

ಪ್ಯಾಂಟಿನ ಜೇಬಿನಲ್ಲಿ ದೇಶಿ ನಿರ್ಮಿತ ಪಿಸ್ತೂಲ್​ ಇಟ್ಟುಕೊಂಡು ರಸ್ತೆಯಲ್ಲಿ ಓಡಾಡಿದ ಶಿಕ್ಷಕಿ ಅರೆಸ್ಟ್​ !
ಪಿಸ್ತೂಲ್​ ಇಟ್ಟುಕೊಂಡಿದ್ದ ಶಿಕ್ಷಕಿ ಅರೆಸ್ಟ್​
TV9 Web
| Edited By: |

Updated on: Apr 13, 2022 | 1:39 PM

Share

ಪಿಸ್ತೂಲ್​ ಇಟ್ಟುಕೊಂಡಿದ್ದ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರಪ್ರದೇಶದ ಮೈನ್​ಪುರಿಯಲ್ಲಿ ನಡೆದಿದೆ. ಇವರ ಹೆಸರು ಕರೀಷ್ಮಾ ಸಿಂಗ್ ಯಾದವ್​ ಎಂದಾಗಿದ್ದು ದೇಶಿ ನಿರ್ಮಿತ ಪಿಸ್ತೂಲ್​ ಹೊಂದಿದ್ದರು.  ಫಿರೋಜಾಬಾದ್ ಶಾಲೆಯೊಂದರ ಶಿಕ್ಷಕಿ. ಮಂಗಳವಾರ ಯಾವುದೋ ಕೆಲಸದ ನಿಮಿತ್ತ ಮೈನ್​ಪುರಿಗೆ ಆಗಮಿಸಿದ್ದರು. ಇವರು ಕೊತ್ವಾಲಿ ಏರಿಯಾದಲ್ಲಿ ಪಿಸ್ತೂಲ್​  ಹಿಡಿದುಕೊಂಡು ಓಡಾಡುತ್ತಿದ್ದಾರೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಲಾಯಿತು. ಆ ಮಹಿಳೆಯನ್ನು ಹಿಂಬಾಲಿಸಿ, ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಇನ್ನು ಶಿಕ್ಷಕಿ ತಾನು ಧರಿಸಿದ ನೀಲಿ ಬಣ್ಣದ ಜೀನ್ಸ್​ ಪ್ಯಾಂಟ್​ನ ಜೇಬಲ್ಲಿ ಪಿಸ್ತೂಲ್​ ಇಟ್ಟುಕೊಂಡು ಓಡಾಡುತ್ತಿದ್ದ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ಕೂಡ ವೈರಲ್ ಆಗಿವೆ. ಪೊಲೀಸರು ತಮ್ಮ ಬಳಿ ಬರುತ್ತಿದ್ದಂತೆ ಸುಮ್ಮನೆ ನಿಂತಿದ್ದಾರೆ. ಬಳಿಕ ಮಹಿಳಾ ಕಾನ್​​ಸ್ಟೆಬಲ್​ ಶಿಕ್ಷಕಿಯ ಜೇಬಿಗೆ ಕೈ ಹಾಕಿ, ಅದನ್ನು ತೆಗೆದಿದ್ದಾರೆ.  ಕೂಡಲೇ ಕರಿಷ್ಮಾರನ್ನು ಪೊಲೀಸರು ಬಂಧಿಸಿದ್ದಾರೆ.  ಮಹಿಳೆ ವಿರುದ್ಧ ಪ್ರಕರಣ ದಾಖಲಾಗಿದೆ. ನಾವು ಅವರನ್ನು ವಿಚಾರಣೆ ನಡೆಸುತ್ತಿದ್ದೇವೆ.  ಈ ಪಿಸ್ತೂಲ್​ ಯಾಕೆ ಹೊಂದಿದ್ದರು? ಅದನ್ನು ಹಿಡಿದುಕೊಂಡು ಎಲ್ಲಿಗೆ ಹೊರಟಿದ್ದರು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನಿಸಲಾಗುತ್ತಿದೆ ಎಂದು ಮೈನ್​ಪುರಿ ಎಸ್​ಪಿ ಅಜಯ್​ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಸರ್ಕಾರವೇ ಕೊಲೆ ಮಾಡಿದೆ: ಗುತ್ತಿಗೆದಾರರ ಸಂಘ ಆಕ್ರೋಶ, ಮುಷ್ಕರಕ್ಕೆ ನಿರ್ಧಾರ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್