AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕಿ ಸಂಬಳ ಸಿಕ್ಕಿಲ್ಲ ಎಂದು ಸ್ಮೃತಿ ಇರಾನಿಗೆ ದೂರು ನೀಡಿದ ಶಿಕ್ಷಕರು; ಅಧಿಕಾರಿಗೆ ಫೋನ್ ಮಾಡಿ ತರಾಟೆಗೆ ತೆಗೆದುಕೊಂಡ ಸಚಿವೆ

ಶಿಕ್ಷಣಾಧಿಕಾರಿಯೊಂದಿಗೆ ಬಿಜೆಪಿ ಸಂಸದ, ಕೇಂದ್ರ ಸಚಿವೆ ಸ್ಮೃತಿ ಇರಾನಿ ನಡೆಸಿದ ಸಂಭಾಷಣೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಮೇಥಿಯಲ್ಲಿ ನೆಲೆಸಿರುವ ಪ್ರತಿಯೊಬ್ಬ ವ್ಯಕ್ತಿಯೂ ತಮ್ಮ ಸಮಸ್ಯೆಗಳನ್ನು ಹೇಳಲು ನೇರವಾಗಿ ತನ್ನ ಬಳಿಗೆ ಬರುತ್ತಾರೆ ಎಂದು ಅವರು ಅಧಿಕಾರಿಗೆ ಹೇಳುವುದನ್ನು ಕೇಳಬಹುದು.

ಬಾಕಿ ಸಂಬಳ ಸಿಕ್ಕಿಲ್ಲ ಎಂದು ಸ್ಮೃತಿ ಇರಾನಿಗೆ ದೂರು ನೀಡಿದ ಶಿಕ್ಷಕರು; ಅಧಿಕಾರಿಗೆ ಫೋನ್ ಮಾಡಿ ತರಾಟೆಗೆ ತೆಗೆದುಕೊಂಡ ಸಚಿವೆ
ಸ್ಮೃತಿ ಇರಾನಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Dec 30, 2023 | 2:58 PM

Share

ದೆಹಲಿ ಡಿಸೆಂಬರ್ 30: ಇನ್ನೂ ಬಾಕಿ ಸಂಬಳ ಬಂದಿಲ್ಲ ಎಂದು ನಿವೃತ್ತ ಶಾಲಾ ಶಿಕ್ಷಕರು(retired school teachers) ಕೇಂದ್ರ ಸಚಿವೆ ಮತ್ತು ಅಮೇಠಿ (Amethi) ಸಂಸದೆ ಸ್ಮೃತಿ ಇರಾನಿ (Smriti Irani) ಅವರಿಗೆ ದೂರು ನೀಡಿದ್ದು, ತಕ್ಷಣವೇ ಸಚಿವೆ ಶಿಕ್ಷಣ ಅಧಿಕಾರಿಗೆ ಫೋನ್ ಮಾಡಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಮೃತಿ ಇರಾನಿ ತಮ್ಮ ಲೋಕಸಭಾ ಕ್ಷೇತ್ರ ಅಮೇಠಿಗೆ 3 ದಿನಗಳ ಭೇಟಿಯಲ್ಲಿದ್ದಾರೆ. ಶುಕ್ರವಾರದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದಾಗ, ಅಸಮಾಧಾನಗೊಂಡ ನಿವೃತ್ತ ಶಾಲಾ ಶಿಕ್ಷಕರ ಗುಂಪು ಆಕೆಯನ್ನು ಸಂಪರ್ಕಿಸಿದ್ದು, ಅವರು ಬಾಕಿ ಸಂಬಳ ಸಿಕ್ಕಿಲ್ಲ ಎಂಬುದರ  ಬಗ್ಗೆ ದೂರು ನೀಡಿದ್ದಾರೆ.

ಕೂಡಲೇ ಜಿಲ್ಲಾ ಶಾಲೆಗಳ ಇನ್ಸ್‌ಪೆಕ್ಟರ್‌ಗೆ ಕರೆ ಮಾಡಿದ ಸ್ಮೃತಿ, ಎಲ್ಲಾ ಬಾಕಿಗಳನ್ನು ಕೂಡಲೇ ತೆರವುಗೊಳಿಸುವಂತೆ ಕೇಳಿಕೊಂಡರು. ನಿಮ್ಮ ಮೇಜಿನ ಮೇಲೆ ನೀವು ಯಾವುದೇ ಬಾಕಿಯನ್ನು ಹೊಂದಿದ್ದರೂ, ಇಂದೇ ಅದನ್ನು ಕ್ಲಿಯರ್ ಮಾಡಿ ಎಂದು ಕೇಂದ್ರ ಸಚಿವೆ ಆದೇಶಿಸಿದ್ದಾರೆ.

ಶಿಕ್ಷಣಾಧಿಕಾರಿಯೊಂದಿಗೆ ಬಿಜೆಪಿ ಸಂಸದರು ನಡೆಸಿದ ಸಂಭಾಷಣೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಮೇಥಿಯಲ್ಲಿ ನೆಲೆಸಿರುವ ಪ್ರತಿಯೊಬ್ಬ ವ್ಯಕ್ತಿಯೂ ತಮ್ಮ ಸಮಸ್ಯೆಗಳನ್ನು ಹೇಳಲು ನೇರವಾಗಿ ತನ್ನ ಬಳಿಗೆ ಬರುತ್ತಾರೆ ಎಂದು ಅವರು ಅಧಿಕಾರಿಗೆ ಹೇಳುವುದನ್ನು ಕೇಳಬಹುದು.

ಇದನ್ನೂ ಓದಿ: ಅಯೋಧ್ಯೆ: ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಸ್ವಲ್ಪ ಮಾನವೀಯತೆಯನ್ನು ತೋರಿಸಿ. ಇದು ಅಮೇಠಿ , ಇಲ್ಲಿನ ಪ್ರತಿಯೊಬ್ಬ ನಾಗರಿಕರೂ ನನ್ನ ಬಳಿ ಬರಬಹುದು ಎಂದು ಸ್ಮೃತಿ ಇರಾನಿ ಹೇಳುತ್ತಿರುವುದು ವಿಡಿಯೊದಲ್ಲಿ ಕೇಳಿಸುತ್ತಿದೆ. ಯೋಗಿ ಆದಿತ್ಯನಾಥ್ ಸರ್ಕಾರವು ಶಿಕ್ಷಕರಿಗೆ ಅವರ ಬಾಕಿಯನ್ನು ಸಂಬಳ ನೀಡಬೇಕು ಎಂದು ಬಯಸುತ್ತದೆ, ಆದ್ದರಿಂದ ನೀವು ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಮೃತಿ ಅಧಿಕಾರಿಗೆ ಸೂಚನೆ ನೀಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:57 pm, Sat, 30 December 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!