AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಸಹೋದ್ಯೋಗಿಗಳಿಂದ ಕಿರುಕುಳ, ಶಿಕ್ಷಕಿ ಆತ್ಮಹತ್ಯೆ

ಸಹೋದ್ಯೋಗಿಗಳ ಕಿರುಕುಳ ತಾಳಲಾರದೆ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಆಕೆಯ ಬಳಿ ಅಸಭ್ಯವಾಗಿ ವರ್ತಿಸುತ್ತಿದ್ದರು ಇದರಿಂದಾಗಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಕೆಲಸಕ್ಕೆಂದು ಅಸ್ಸಾಂಗೆ ಹೋಗಿದ್ದ ಮಹಿಳೆಯ ಪತಿಗೆ ಪೊಲೀಸರು ಪತ್ನಿಯ ಸಾವಿನ ಬಗ್ಗೆ ಮಾಹಿತಿ ನೀಡಿದ್ದಾರೆ.ಸೆಪ್ಟೆಂಬರ್ 20 ರಂದು ಸಲ್ಲಿಸಿದ ದೂರಿನಲ್ಲಿ, ಎಂಟು ವರ್ಷಗಳ ಹಿಂದೆ ಪ್ರೇಮ ವಿವಾಹವಾಗಿದ್ದ ತನ್ನ ಮತ್ತು ತನ್ನ ಪತ್ನಿ ಅಸ್ಸಾಂನಿಂದ ಹೈದರಾಬಾದ್‌ಗೆ ಸ್ಥಳಾಂತರಗೊಂಡಿರುವುದಾಗಿ ಆಕೆಯ ಪತಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ತೆಲಂಗಾಣ: ಸಹೋದ್ಯೋಗಿಗಳಿಂದ ಕಿರುಕುಳ, ಶಿಕ್ಷಕಿ ಆತ್ಮಹತ್ಯೆ
ಕ್ರೈಂ
ನಯನಾ ರಾಜೀವ್
|

Updated on: Sep 22, 2025 | 10:24 AM

Share

ಹೈದರಾಬಾದ್, ಸೆಪ್ಟೆಂಬರ್ 22: ಖಾಸಗಿ ಶಾಲೆಯ 29 ವರ್ಷದ ಶಿಕ್ಷಕಿ(Teacher) ಇಬ್ಬರು ಪುರುಷ ಸಹೋದ್ಯೋಗಿಗಳಿಂದ ಕಿರುಕುಳಕ್ಕೊಳಗಾಗಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಮೃತ ವಿಜ್ಞಾನ ಶಿಕ್ಷಕಿ ಅಸ್ಸಾಂ ಮೂಲದವರು. ಈ ಘಟನೆ ಸೆಪ್ಟೆಂಬರ್ 19 ರಂದು ನಡೆದಿದ್ದು, ಮಹಿಳೆಯ ಪತಿ ಆದಿಬಟ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆಕೆಯ ಶಾಲೆಯ ಇಬ್ಬರು ಶಿಕ್ಷಕರು ತನ್ನ ಪತ್ನಿಗೆ ಕಿರುಕುಳ ನೀಡುತ್ತಿದ್ದರು.

ಆಕೆಯ ಬಳಿ ಅಸಭ್ಯವಾಗಿ ವರ್ತಿಸುತ್ತಿದ್ದರು ಇದರಿಂದಾಗಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಕೆಲಸಕ್ಕೆಂದು ಅಸ್ಸಾಂಗೆ ಹೋಗಿದ್ದ ಮಹಿಳೆಯ ಪತಿಗೆ ಪೊಲೀಸರು ಪತ್ನಿಯ ಸಾವಿನ ಬಗ್ಗೆ ಮಾಹಿತಿ ನೀಡಿದ್ದಾರೆ.ಸೆಪ್ಟೆಂಬರ್ 20 ರಂದು ಸಲ್ಲಿಸಿದ ದೂರಿನಲ್ಲಿ, ಎಂಟು ವರ್ಷಗಳ ಹಿಂದೆ ಪ್ರೇಮ ವಿವಾಹವಾಗಿದ್ದ ತನ್ನ ಮತ್ತು ತನ್ನ ಪತ್ನಿ ಅಸ್ಸಾಂನಿಂದ ಹೈದರಾಬಾದ್‌ಗೆ ಸ್ಥಳಾಂತರಗೊಂಡಿರುವುದಾಗಿ ಆಕೆಯ ಪತಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕಳೆದ ಆರು ತಿಂಗಳಿನಿಂದ ಇಬ್ಬರೂ ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಪತ್ನಿ ಹೇಳುತ್ತಲೇ ಇದ್ದಳು, ಆದರೆ ತಾನು ಅಷ್ಟಾಗಿ ಗಮನಕೊಟ್ಟಿರಲಿಲ್ಲ. ಆದರೆ, ಸೆಪ್ಟೆಂಬರ್ 15 ರಂದು ಅಸ್ಸಾಂಗೆ ತೆರಳಿದ ನಂತರ ಕಿರುಕುಳ ತೀವ್ರಗೊಂಡಿತ್ತು, ಅಂತಿಮವಾಗಿ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕಂಠ ಪೂರ್ತಿ ಕುಡಿದು ಬಂದು ಶಾಲೆಯಲ್ಲಿ ಮಲಗಿದ ಮುಖ್ಯ ಶಿಕ್ಷಕ: ವಿಡಿಯೋ ನೋಡಿ

ದೂರಿನ ಮೇರೆಗೆ ಪೊಲೀಸರು ಇಬ್ಬರು ಶಿಕ್ಷಕರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದು, ಅವರನ್ನು ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದಕ್ಕೂ ಮೊದಲು, 17 ವರ್ಷದ ವಿದ್ಯಾರ್ಥಿನಿಯೊಬ್ಬಳಿಗೆ ಉದ್ಯೋಗ ಮತ್ತು ವಿದೇಶ ಪ್ರವಾಸದ ಭರವಸೆ ನೀಡಿ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬೆಂಗಳೂರು ಮೂಲದ 55 ವರ್ಷದ ಯೋಗ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?