AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಪ್ಪಬಾರದೆಂದು ನಿತ್ಯ 8 ಕಿಮೀ ನಡೆಯುವ ಶಿಕ್ಷಕರು

ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಪ್ಪಬಾರದು ಎನ್ನುವುದು ಅವರ ಕಾಳಜಿ. ಗುಡ್ಡದ ಮೇಲಿರುವ ಶಾಲೆಗೆ ಸಂಪರ್ಕ ರಸ್ತೆ ನಿರ್ಮಿಸುವಂತೆ ಶಿಕ್ಷಕರು ಹಲವು ಬಾರಿ ಸರ್ಕಾರವನ್ನು ಒತ್ತಾಯಿಸಿದ್ದಾರೆ

ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಪ್ಪಬಾರದೆಂದು ನಿತ್ಯ 8 ಕಿಮೀ ನಡೆಯುವ ಶಿಕ್ಷಕರು
ಬಿಸಿಯೂಟದ ದಿನಸಿ ಹೊತ್ತು ನಡೆಯುತ್ತಿರುವ ಶಿಕ್ಷಕರು
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Oct 25, 2021 | 8:01 AM

Share

ಬಲರಾಮ್​ಪುರ: ಛತ್ತೀಸಗಡದ ಬಲರಾಮ್​ಪುರ ಜಿಲ್ಲೆಯ ಶಿಕ್ಷಕರು ಬೆಟ್ಟಗುಡ್ಡಗಳ ಹಾದಿಯಲ್ಲಿ ಪ್ರತಿದಿನ 8 ಕಿಮೀ ನಡೆದು ಮಕ್ಕಳಿಗಾಗಿ ಬಿಸಿಯೂಟದ ದಿನಸಿ ಹೊತ್ತು ತರುತ್ತಾರೆ. ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಪ್ಪಬಾರದು ಎನ್ನುವುದು ಅವರ ಕಾಳಜಿ. ಗುಡ್ಡದ ಮೇಲಿರುವ ಶಾಲೆಗೆ ಸಂಪರ್ಕ ರಸ್ತೆ ನಿರ್ಮಿಸುವಂತೆ ಶಿಕ್ಷಕರು ಹಲವು ಬಾರಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿರುವ ಶಿಕ್ಷಕ ಸುಶೀಲ್ ಯಾದವ್, ‘ಈ ರಸ್ತೆಯಲ್ಲಿ ಸಾಗಿಬರುವುದು ತುಂಬಾ ಕಷ್ಟ. ಮಳೆ ಬಿದ್ದರಂತೂ ಈ ರಸ್ತೆಯಲ್ಲಿ ನಡೆಯಲೂ ಆಗುವುದಿಲ್ಲ. ಮೇಲಾಗಿ ಕಾಡುಪ್ರಾಣಿಗಳ ಹಾವಳಿಯೂ ಇದೆ. ಆದರೂ ಮಕ್ಕಳು ಪ್ರತಿದಿನ ಮಧ್ಯಾಹ್ನದ ಊಟ ತಪ್ಪಿಸಿಕೊಳ್ಳಬಾರದು ಎಂದು ನಾವಿಷ್ಟು ಕಷ್ಟ ಪಡುತ್ತಿದ್ದೇವೆ’ ಎಂದು ಹೇಳಿದರು.

‘ಖಂಡಿಯಾ ದಾಮರ್ ಗ್ರಾಮ ಪಂಚಾಯಿತಿ ಶಾಲೆಯಲ್ಲಿ ಇಬ್ಬರು ಶಿಕ್ಷಕರು ಕೆಲಸ ಮಾಡುತ್ತಿದ್ದಾರೆ. ಪ್ರತಿದಿನ ನಡೆದೇ ಬರುವ ಶಿಕ್ಷಕರ ಬದ್ಧತೆಗೆ ಕೈಮುಗಿಯಬೇಕು ಎನ್ನಿಸುತ್ತದೆ’ ಎಂದು ಸ್ಥಳೀಯರಾದ ಲಖನ್ ಹೇಳಿದರು. ‘ಈ ವಿಷಯದ ಬಗ್ಗೆ ನನಗೆ ತಿಳಿದಿದೆ. ನಮ್ಮ ಶಿಕ್ಷಕರಾದ ಸುಶೀಲ್ ಯಾದವ್ ಮತ್ತು ಪಂಕಜ್ ಸಾರ್ವಜನಿಕ ಪಡಿತರ ಅಂಗಡಿಯಿಂದ ದಿನಸಿ ಹೊತ್ತು ಪ್ರತಿದಿನ 8 ಕಿಮೀ ಬೆಟ್ಟಗುಡ್ಡದ ಹಾದಿಯಲ್ಲಿ ನಡೆದು ಹೋಗುತ್ತಿದ್ದಾರೆ. ಅವರ ಬದ್ಧತೆ ಮತ್ತು ಕರ್ತವ್ಯನಿಷ್ಠೆಯ ಬಗ್ಗೆ ನಮಗೆ ಗೌರವವಿದೆ’ ಎಂದು ಬಲರಾಮ್​ಪುರ ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿ ಬಿ.ಎಕ್ಕಾ ಹೇಳಿದ್ದಾರೆ.

ಇದನ್ನೂ ಓದಿ: 1ರಿಂದ 5ನೇ ತರಗತಿ ಆರಂಭ: ಮಕ್ಕಳಿರುವ ಮನೆಗಳಲ್ಲಿ ಧಾವಂತ, ಶಾಲೆಗೆ ಹೊರಡಲು ಸಿದ್ಧತೆ ಇದನ್ನೂ ಓದಿ: ಶಾಲೆ ಆರಂಭಕ್ಕೂ ಮುನ್ನ ಹಾಗೂ ನಂತರ ಮಕ್ಕಳನ್ನು ಹೇಗೆ ಸಜ್ಜುಗೊಳಿಸಬೇಕು? ತಜ್ಞರ ಸಲಹೆ ಇಲ್ಲಿದೆ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!