AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಪ್ಪಬಾರದೆಂದು ನಿತ್ಯ 8 ಕಿಮೀ ನಡೆಯುವ ಶಿಕ್ಷಕರು

ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಪ್ಪಬಾರದು ಎನ್ನುವುದು ಅವರ ಕಾಳಜಿ. ಗುಡ್ಡದ ಮೇಲಿರುವ ಶಾಲೆಗೆ ಸಂಪರ್ಕ ರಸ್ತೆ ನಿರ್ಮಿಸುವಂತೆ ಶಿಕ್ಷಕರು ಹಲವು ಬಾರಿ ಸರ್ಕಾರವನ್ನು ಒತ್ತಾಯಿಸಿದ್ದಾರೆ

ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಪ್ಪಬಾರದೆಂದು ನಿತ್ಯ 8 ಕಿಮೀ ನಡೆಯುವ ಶಿಕ್ಷಕರು
ಬಿಸಿಯೂಟದ ದಿನಸಿ ಹೊತ್ತು ನಡೆಯುತ್ತಿರುವ ಶಿಕ್ಷಕರು
TV9 Web
| Edited By: |

Updated on: Oct 25, 2021 | 8:01 AM

Share

ಬಲರಾಮ್​ಪುರ: ಛತ್ತೀಸಗಡದ ಬಲರಾಮ್​ಪುರ ಜಿಲ್ಲೆಯ ಶಿಕ್ಷಕರು ಬೆಟ್ಟಗುಡ್ಡಗಳ ಹಾದಿಯಲ್ಲಿ ಪ್ರತಿದಿನ 8 ಕಿಮೀ ನಡೆದು ಮಕ್ಕಳಿಗಾಗಿ ಬಿಸಿಯೂಟದ ದಿನಸಿ ಹೊತ್ತು ತರುತ್ತಾರೆ. ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಪ್ಪಬಾರದು ಎನ್ನುವುದು ಅವರ ಕಾಳಜಿ. ಗುಡ್ಡದ ಮೇಲಿರುವ ಶಾಲೆಗೆ ಸಂಪರ್ಕ ರಸ್ತೆ ನಿರ್ಮಿಸುವಂತೆ ಶಿಕ್ಷಕರು ಹಲವು ಬಾರಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿರುವ ಶಿಕ್ಷಕ ಸುಶೀಲ್ ಯಾದವ್, ‘ಈ ರಸ್ತೆಯಲ್ಲಿ ಸಾಗಿಬರುವುದು ತುಂಬಾ ಕಷ್ಟ. ಮಳೆ ಬಿದ್ದರಂತೂ ಈ ರಸ್ತೆಯಲ್ಲಿ ನಡೆಯಲೂ ಆಗುವುದಿಲ್ಲ. ಮೇಲಾಗಿ ಕಾಡುಪ್ರಾಣಿಗಳ ಹಾವಳಿಯೂ ಇದೆ. ಆದರೂ ಮಕ್ಕಳು ಪ್ರತಿದಿನ ಮಧ್ಯಾಹ್ನದ ಊಟ ತಪ್ಪಿಸಿಕೊಳ್ಳಬಾರದು ಎಂದು ನಾವಿಷ್ಟು ಕಷ್ಟ ಪಡುತ್ತಿದ್ದೇವೆ’ ಎಂದು ಹೇಳಿದರು.

‘ಖಂಡಿಯಾ ದಾಮರ್ ಗ್ರಾಮ ಪಂಚಾಯಿತಿ ಶಾಲೆಯಲ್ಲಿ ಇಬ್ಬರು ಶಿಕ್ಷಕರು ಕೆಲಸ ಮಾಡುತ್ತಿದ್ದಾರೆ. ಪ್ರತಿದಿನ ನಡೆದೇ ಬರುವ ಶಿಕ್ಷಕರ ಬದ್ಧತೆಗೆ ಕೈಮುಗಿಯಬೇಕು ಎನ್ನಿಸುತ್ತದೆ’ ಎಂದು ಸ್ಥಳೀಯರಾದ ಲಖನ್ ಹೇಳಿದರು. ‘ಈ ವಿಷಯದ ಬಗ್ಗೆ ನನಗೆ ತಿಳಿದಿದೆ. ನಮ್ಮ ಶಿಕ್ಷಕರಾದ ಸುಶೀಲ್ ಯಾದವ್ ಮತ್ತು ಪಂಕಜ್ ಸಾರ್ವಜನಿಕ ಪಡಿತರ ಅಂಗಡಿಯಿಂದ ದಿನಸಿ ಹೊತ್ತು ಪ್ರತಿದಿನ 8 ಕಿಮೀ ಬೆಟ್ಟಗುಡ್ಡದ ಹಾದಿಯಲ್ಲಿ ನಡೆದು ಹೋಗುತ್ತಿದ್ದಾರೆ. ಅವರ ಬದ್ಧತೆ ಮತ್ತು ಕರ್ತವ್ಯನಿಷ್ಠೆಯ ಬಗ್ಗೆ ನಮಗೆ ಗೌರವವಿದೆ’ ಎಂದು ಬಲರಾಮ್​ಪುರ ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿ ಬಿ.ಎಕ್ಕಾ ಹೇಳಿದ್ದಾರೆ.

ಇದನ್ನೂ ಓದಿ: 1ರಿಂದ 5ನೇ ತರಗತಿ ಆರಂಭ: ಮಕ್ಕಳಿರುವ ಮನೆಗಳಲ್ಲಿ ಧಾವಂತ, ಶಾಲೆಗೆ ಹೊರಡಲು ಸಿದ್ಧತೆ ಇದನ್ನೂ ಓದಿ: ಶಾಲೆ ಆರಂಭಕ್ಕೂ ಮುನ್ನ ಹಾಗೂ ನಂತರ ಮಕ್ಕಳನ್ನು ಹೇಗೆ ಸಜ್ಜುಗೊಳಿಸಬೇಕು? ತಜ್ಞರ ಸಲಹೆ ಇಲ್ಲಿದೆ

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ