ಅತಿಶಿ ನೇತೃತ್ವದ ಸಚಿವ ಸಂಪುಟದಲ್ಲಿರಲಿದ್ದಾರೆ ಕೇಜ್ರಿವಾಲ್ ಸರ್ಕಾರದಲ್ಲಿದ್ದ ನಾಲ್ವರು ಸಚಿವರು

ಸುಲ್ತಾನ್ ಪುರ್ ಮಜ್ರಾದ ಶಾಸಕ, ದಲಿತ ಮುಖಂಡ ಮುಖೇಶ್ ಅಹ್ಲಾವತ್ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಶುಕ್ರವಾರ ಎಲ್ಲ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅತಿಶಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಇಂದು ಹೇಳಿಕೆಯಲ್ಲಿ ತಿಳಿಸಿದೆ

ಅತಿಶಿ ನೇತೃತ್ವದ ಸಚಿವ ಸಂಪುಟದಲ್ಲಿರಲಿದ್ದಾರೆ ಕೇಜ್ರಿವಾಲ್ ಸರ್ಕಾರದಲ್ಲಿದ್ದ ನಾಲ್ವರು ಸಚಿವರು
ಅತಿಶಿ
ರಶ್ಮಿ ಕಲ್ಲಕಟ್ಟ

Updated on: Sep 19, 2024 | 4:46 PM

ದೆಹಲಿ ಸೆಪ್ಟೆಂಬರ್ 19 : ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ (Atishi )ಶುಕ್ರವಾರ ಅಧಿಕಾರ ವಹಿಸಿಕೊಳ್ಳಲಿದ್ದು ಅರವಿಂದ್ ಕೇಜ್ರಿವಾಲ್ (Arvind Kejriwal)ಸರ್ಕಾರದ ನಾಲ್ವರು ಸಚಿವರು ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಂಗಳವಾರ ಕೇಜ್ರಿವಾಲ್ ಅವರ ದಿಢೀರ್ ರಾಜೀನಾಮೆ ನಂತರ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಸಚಿವರಾದ ಸೌರಭ್ ಭಾರದ್ವಾಜ್, ಕೈಲಾಶ್ ಗಹ್ಲೋಟ್, ಗೋಪಾಲ್ ರಾಯ್ ಮತ್ತು ಇಮ್ರಾನ್ ಹುಸೇನ್ ಅವರು ಮತ್ತೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಸುಲ್ತಾನ್ ಪುರ್ ಮಜ್ರಾದ ಶಾಸಕ, ದಲಿತ ಮುಖಂಡ ಮುಖೇಶ್ ಅಹ್ಲಾವತ್ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಶುಕ್ರವಾರ ಎಲ್ಲ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅತಿಶಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಇಂದು ಹೇಳಿಕೆಯಲ್ಲಿ ತಿಳಿಸಿದೆ. “ಅತಿಶಿ ಸೆಪ್ಟೆಂಬರ್ 21 ರಂದು ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ, ಅವರ ಜೊತೆಗೆ ಇತರ ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ” ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ಅರವಿಂದ್ ಕೇಜ್ರಿವಾಲ್ ಸರ್ಕಾರದಲ್ಲಿ ಪ್ರಮುಖ ಖಾತೆಗಳನ್ನು ನಿರ್ವಹಿಸಿರುವ ಮತ್ತು ಎಎಪಿಯ ಪ್ರಮುಖ ಮುಖಗಳಲ್ಲಿ ಒಬ್ಬರಾಗಿರುವ ಕಲ್ಕಾಜಿಯ 43 ವರ್ಷದ ಶಾಸಕಿ ಅತಿಶಿ, ಕೇಜ್ರಿವಾಲ್ ಅವರು ರಾಜೀನಾಮೆ ನೀಡಿ ಉನ್ನತ ಹುದ್ದೆಗೆ ಹಿಂತಿರುಗುವುದಾಗಿ ಘೋಷಿಸಿದ ನಂತರ ಆಪ್ ಸದಸ್ಯರ ಒಪ್ಪಿಗೆಯಿಂದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. ದೆಹಲಿಯ ಈಗ ರದ್ದಾದ ಮದ್ಯ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಆರು ತಿಂಗಳ ನಂತರ, ಸುಪ್ರೀಂಕೋರ್ಟ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿದ ದಿನಗಳ ನಂತರ ಎಎಪಿ ಸಂಚಾಲಕರು ರಾಜೀನಾಮೆ ನೀಡುವುದಾಗಿ ಹೇಳಿದ್ದರು.

ಕೇಜ್ರಿವಾಲ್ ತನ್ನ ಮೇಲೆ ತೋರಿದ ವಿಶ್ವಾಸದಿಂದ ಸಂತೋಷವಾಗಿದೆ ಎಂದು ಅತಿಶಿ ಹೇಳಿದ್ದಾರೆ. ಶ್ರೀ ಕೇಜ್ರಿವಾಲ್ ಅವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡಲು ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು.

“ಮೊದಲನೆಯದಾಗಿ, ನಾನು ದೆಹಲಿಯ ಜನಪ್ರಿಯ ಸಿಎಂ, ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ನನ್ನ ಗುರು ಅರವಿಂದ್ ಕೇಜ್ರಿವಾಲ್ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಅವರು ನನಗೆ ಅಂತಹ ದೊಡ್ಡ ಜವಾಬ್ದಾರಿಯನ್ನು ನೀಡಿದರು ಮತ್ತು ಅದಕ್ಕಾಗಿ ನನ್ನನ್ನು ನಂಬಿದ್ದರು. ಇದು ಎಎಪಿಯಲ್ಲಿ ಮಾತ್ರ ಕಾಣಬಹುದು. ಅರವಿಂದ್ ಕೇಜ್ರಿವಾಲ್ ನಾಯಕತ್ವದ ಪ್ರಕಾರ, ಮೊದಲ ಬಾರಿಗೆ ರಾಜಕಾರಣಿಯೊಬ್ಬರು ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆ, ನಾನು ಬೇರೆ ಯಾವುದೇ ಪಕ್ಷದಲ್ಲಿದ್ದರೆ, ಬಹುಶಃ ನನಗೆ ಚುನಾವಣೆ ಟಿಕೆಟ್ ನೀಡಲಾಗುತ್ತಿರಲಿಲ್ಲ.

ಇದನ್ನೂ ಓದಿ: ಅಗ್ನಿವೀರರಿಗೆ ಉದ್ಯೋಗ, ಮಹಿಳೆಯರಿಗೆ 2,100 ರೂ; ಹರಿಯಾಣ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಸುಷ್ಮಾ ಸ್ವರಾಜ್ ಮತ್ತು ಶೀಲಾ ದೀಕ್ಷಿತ್ ನಂತರ ಅತಿಶಿ ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿಯಾಗಲಿದ್ದಾರೆ. ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿ ಆದ ಅತಿಶಿ ಶಾಲೆಗಳಲ್ಲಿ ಶಿಕ್ಷಣವನ್ನು ಕೂಲಂಕಷವಾಗಿ ಪರಿಶೀಲಿಸಲು AAP ನ ಪ್ರಮುಖ ಪ್ರಕ್ರಿಯೆಗಳಲ್ಲಿ ಕೆಲಸ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us