AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಕಾಶ್ಮೀರಕ್ಕೆ 18 ರಾಯಭಾರಿಗಳ ಭೇಟಿ

ದೆಹಲಿ: ಜಮ್ಮುಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಬಳಿಕ ಕೆಲ ಭದ್ರತಾ ನಿರ್ಬಂಧಗಳನ್ನು ವಿಧಿಸಲಾಗಿತ್ತು. ಈ ನಿರ್ಬಂಧಗಳನ್ನು ಇನ್ನೂ ಸಂಪೂರ್ಣವಾಗಿ ತೆರವುಗೊಂಡಿಲ್ಲ. ಈಗಲೂ ಜಮ್ಮು ಕಾಶ್ಮೀರದ ಮಾಜಿ ಸಿಎಂಗಳಾದ ಫಾರೂಕ್ ಅಬ್ದುಲ್ಲಾ, ಓಮರ್ ಅಬ್ದುಲ್ಲಾ, ಮೆಹಬೂಬ್ ಮುಫ್ತಿ ಗೃಹ ಬಂಧನದಲ್ಲೇ ಇದ್ದಾರೆ. ಭಾರತದ ಸಂಸತ್ತಿನ ಸದಸ್ಯರು ಕಾಶ್ಮೀರಕ್ಕೆ ಭೇಟಿ ನೀಡಲು ಕೂಡ ಕೇಂದ್ರ ಸರ್ಕಾರ ಅವಕಾಶ ಕೊಡುತ್ತಿಲ್ಲ. ಇಂಥಾ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಜಮ್ಮುಕಾಶ್ಮೀರಕ್ಕೆ ಭೇಟಿ ನೀಡಿ ಗ್ರೌಂಡ್ ರಿಯಾಲಿಟಿ ಚೆಕ್ ಮಾಡಲು ದೆಹಲಿಯ ಯೂರೋಪಿಯನ್ ರಾಷ್ಟ್ರಗಳು ಹಾಗೂ […]

ಇಂದು ಕಾಶ್ಮೀರಕ್ಕೆ 18 ರಾಯಭಾರಿಗಳ ಭೇಟಿ
ಸಾಧು ಶ್ರೀನಾಥ್​
|

Updated on: Jan 09, 2020 | 9:06 AM

Share

ದೆಹಲಿ: ಜಮ್ಮುಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಬಳಿಕ ಕೆಲ ಭದ್ರತಾ ನಿರ್ಬಂಧಗಳನ್ನು ವಿಧಿಸಲಾಗಿತ್ತು. ಈ ನಿರ್ಬಂಧಗಳನ್ನು ಇನ್ನೂ ಸಂಪೂರ್ಣವಾಗಿ ತೆರವುಗೊಂಡಿಲ್ಲ. ಈಗಲೂ ಜಮ್ಮು ಕಾಶ್ಮೀರದ ಮಾಜಿ ಸಿಎಂಗಳಾದ ಫಾರೂಕ್ ಅಬ್ದುಲ್ಲಾ, ಓಮರ್ ಅಬ್ದುಲ್ಲಾ, ಮೆಹಬೂಬ್ ಮುಫ್ತಿ ಗೃಹ ಬಂಧನದಲ್ಲೇ ಇದ್ದಾರೆ. ಭಾರತದ ಸಂಸತ್ತಿನ ಸದಸ್ಯರು ಕಾಶ್ಮೀರಕ್ಕೆ ಭೇಟಿ ನೀಡಲು ಕೂಡ ಕೇಂದ್ರ ಸರ್ಕಾರ ಅವಕಾಶ ಕೊಡುತ್ತಿಲ್ಲ. ಇಂಥಾ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಜಮ್ಮುಕಾಶ್ಮೀರಕ್ಕೆ ಭೇಟಿ ನೀಡಿ ಗ್ರೌಂಡ್ ರಿಯಾಲಿಟಿ ಚೆಕ್ ಮಾಡಲು ದೆಹಲಿಯ ಯೂರೋಪಿಯನ್ ರಾಷ್ಟ್ರಗಳು ಹಾಗೂ ಗಲ್ಪ್ ರಾಷ್ಟ್ರಗಳ ರಾಯಭಾರಿಗಳಿಗೆ ಆಹ್ವಾನ ನೀಡಿದೆ.

ಇಂದು, ನಾಳೆ ಕಾಶ್ಮೀರಕ್ಕೆ 18 ರಾಯಭಾರಿಗಳ ಭೇಟಿ! ಅಂದಹಾಗೆ ಗುರುವಾರ ಮತ್ತು ಶುಕ್ರವಾರ ಅಂದ್ರೆ ಇಂದು ಹಾಗು ನಾಳೆ 18 ರಾಯಭಾರಿಗಳು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಆದರೆ ಕೆಲ ರಾಯಭಾರಿಗಳು ತಾವು ಮುಕ್ತವಾಗಿ ಜಮ್ಮು ಕಾಶ್ಮೀರದಲ್ಲಿ ಓಡಾಡಿ ಜನರೊಂದಿಗೆ ಮಾತನಾಡಲು ಸಾಧ್ಯವೇ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಕಾಶ್ಮೀರದ ಸ್ಥಳೀಯ ಜನ, ನಾಯಕರು, ಅಧಿಕಾರಿಗಳು ಹಾಗೂ ಭದ್ರತಾ ಪಡೆಗಳ ಅಧಿಕಾರಿಗಳೊಂದಿಗೆ ಮುಕ್ತವಾಗಿ ಮಾತುಕತೆ ನಡೆಸಬಹುದು ಎಂದು ಹೇಳಿದೆ. ಪೋನ್ ಸಂಪರ್ಕಕ್ಕೆ ವಿಧಿಸಲಾಗಿದ್ದ ನಿರ್ಬಂಧ ಸ್ಪಲ್ಪ ಮಟ್ಟಿಗೆ ತೆರವಾಗಿದೆ. ಆದರೆ ನಿರ್ಬಂಧ ಸಂಪೂರ್ಣವಾಗಿ ರದ್ದುಪಡಿಸಿಲ್ಲ. 6 ಸಾವಿರ ಹೆಚ್ಚುವರಿ ಭದ್ರತಾ ಪಡೆಗಳನ್ನ ವಾಪಸ್ ಕರೆಸಿಕೊಳ್ಳಲಾಗಿದೆ.

ಅಂದಹಾಗೆ ಇದೇ ರೀತಿ ಕಳೆದ ಆಕ್ಟೋಬರ್​ನಲ್ಲೂ ಯೂರೋಪಿಯನ್ ಯೂನಿಯನ್ ಪಾರ್ಲಿಮೆಂಟ್ ಸದಸ್ಯರಿಗೆ ಕಾಶ್ಮೀರಕ್ಕೆ ಭೇಟಿ ನೀಡಲು ಅವಕಾಶ ಕೊಡಲಾಗಿತ್ತು. ಆಗಲೂ ವಿಪಕ್ಷಗಳು ಗರಂ ಆಗಿದ್ದವು. ವಿದೇಶಿ ಪಾರ್ಲಿಮೆಂಟ್ ಸದಸ್ಯರ ಭೇಟಿಗೆ ಅವಕಾಶ ಕೊಟ್ಟು ಭಾರತದ ಸಂಸದರ ಭೇಟಿಗೆ ಅವಕಾಶ ಕೊಡದೇ ಇರೋ ಕ್ರಮವನ್ನು ತೀವ್ರವಾಗಿ ಟೀಕಿಸಲಾಗಿತ್ತು.

ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷಗಳ ಸಂಸದರು ಕಾಶ್ಮೀರಕ್ಕೆ ಹೋದಾಗ ಏರ್​ಪೋರ್ಟ್​ನಿಂದಲೇ ದೆಹಲಿಗೆ ವಾಪಸ್ ಕಳಿಸಲಾಗಿತ್ತು. ಇದನ್ನು ಸಂಸತ್‌ ನಲ್ಲೂ ಪ್ರಶ್ನಿಸಲಾಗಿತ್ತು. ಈಗ ಮತ್ತೆ ಕೇಂದ್ರ ಸರ್ಕಾರವು ವಿದೇಶಿ ರಾಯಭಾರಿಗಳಿಗೆ ಕಾಶ್ಮೀರಕ್ಕೆ ಭೇಟಿ ನೀಡಲು ಅವಕಾಶ ಕೊಡುವ ಮೂಲಕ ಯೂರೋಪಿಯನ್ ಯೂನಿಯನ್, ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಕಾಶ್ಮೀರದ ಬಗ್ಗೆ ಇರೋ ಅಭಿಪ್ರಾಯ ಬದಲಿಸಲು ಮುಂದಾಗಿದೆ. ಈ ಭೇಟಿಯಿಂದ ನಿಜಕ್ಕೂ ವಿದೇಶಿ ರಾಯಭಾರಿಗಳಿಗೆ ಕಾಶ್ಮೀರದ ಈಗಿನ ಸ್ಥಿತಿ ಬಗ್ಗೆ ಯಾವ ಅಭಿಪ್ರಾಯ ಬರಲಿದೆ ಅನ್ನೋದು ಇನ್ನೂ ಒಂದೆರೆಡು ದಿನಗಳಲ್ಲಿ ಗೊತ್ತಾಗಲಿದೆ.

VIDEO: ರಣರೋಚಕ ಪಂದ್ಯ ರನೌಟ್​ನೊಂದಿಗೆ ಅಂತ್ಯ
VIDEO: ರಣರೋಚಕ ಪಂದ್ಯ ರನೌಟ್​ನೊಂದಿಗೆ ಅಂತ್ಯ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು