AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಆರೋಪ: ಅರವಿಂದ್ ಕೇಜ್ರಿವಾಲ್ ಮನೆಗೆ ಬಂದು ನೋಟಿಸ್ ನೀಡಿದ ದೆಹಲಿ ಕ್ರೈಂ ಬ್ರಾಂಚ್

ಕಳೆದ ವಾರ ಪತ್ರಿಕಾಗೋಷ್ಠಿಯಲ್ಲಿ ದೆಹಲಿ ಸಚಿವೆ ಅತಿಶಿ, ಬಿಜೆಪಿ ತನ್ನ ಏಳು ಶಾಸಕರಿಗೆ ಪಕ್ಷವನ್ನು ತೊರೆಯಲು ತಲಾ 25 ಕೋಟಿ ರೂಪಾಯಿಗಳನ್ನು ನೀಡುವುದಾಗಿ ಆಫರ್ ಮಾಡಿದ್ದು ಕೇಜ್ರಿವಾಲ್ ಸರ್ಕಾರವನ್ನು ಉರುಳಿಸುವುದಾಗಿ ಬೆದರಿಕೆ ಹಾಕಿದರು ಎಂದು ಆರೋಪಿಸಿದ್ದರು. ಈ ಆರೋಪಕ್ಕೆ ಸಂಬಂಧಿಸಿದಂತೆ ನೋಟಿಸಿ ನೀಡಲು ದೆಹಲಿ ಕ್ರೈಂ ಬ್ರಾಂಚ್ ಕೇಜ್ರಿವಾಲ್ ಮನೆಗೆ ಬಂದಿದೆ.

ಲಂಚ ಆರೋಪ: ಅರವಿಂದ್ ಕೇಜ್ರಿವಾಲ್ ಮನೆಗೆ ಬಂದು ನೋಟಿಸ್ ನೀಡಿದ ದೆಹಲಿ ಕ್ರೈಂ ಬ್ರಾಂಚ್
ಅರವಿಂದ್ ಕೇಜ್ರಿವಾಲ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 02, 2024 | 8:56 PM

Share

ದೆಹಲಿ ಫೆಬ್ರುವರಿ 02: ಆಮ್ ಆದ್ಮಿ ಪಕ್ಷದ (AAP) ಶಾಸಕರಿಗೆ ಲಂಚ ನೀಡುವ ಯತ್ನದ ಆರೋಪಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಲು ದೆಹಲಿ ಪೊಲೀಸರ ಕ್ರೈಂ ಬ್ರಾಂಚ್ (Delhi Crime Branch) ಘಟಕದ ತಂಡವು ಶುಕ್ರವಾರ ಸಂಜೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮನೆಗೆ ಬಂದಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ವಾರ ಪತ್ರಿಕಾಗೋಷ್ಠಿಯಲ್ಲಿ ದೆಹಲಿ ಸಚಿವೆ ಅತಿಶಿ, ಬಿಜೆಪಿ ತನ್ನ ಏಳು ಶಾಸಕರಿಗೆ ಪಕ್ಷವನ್ನು ತೊರೆಯಲು ತಲಾ 25 ಕೋಟಿ ರೂಪಾಯಿಗಳನ್ನು ನೀಡುವುದಾಗಿ ಆಫರ್ ಮಾಡಿದ್ದು ಕೇಜ್ರಿವಾಲ್ ಸರ್ಕಾರವನ್ನು ಉರುಳಿಸುವುದಾಗಿ ಬೆದರಿಕೆ ಹಾಕಿದರು ಎಂದು ಆರೋಪಿಸಿದ್ದರು.

ಪಕ್ಷದ ಶಾಸಕರೊಬ್ಬರನ್ನು ಸಂಪರ್ಕಿಸಿದ ವ್ಯಕ್ತಿಯ ವಾಯ್ಸ್ ರೆಕಾರ್ಡ್ ಲಭ್ಯವಿದ್ದು, ಅದನ್ನು ನಂತರ ತೋರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಕೇಜ್ರಿವಾಲ್, ತಮ್ಮ ಪಕ್ಷದ ಏಳು ಶಾಸಕರನ್ನು “ಅವರು” ಅಥವಾ ಬಿಜೆಪಿಯವರು ಸಂಪರ್ಕಿಸಿದ್ದಾರೆ. ಶೀಘ್ರದಲ್ಲೇ ನನ್ನನ್ನು ಬಂಧಿಸಬಹುದು ಎಂದಿದ್ದಾರೆ. ದೆಹಲಿ ಸರ್ಕಾರ ಪತನಗೊಂಡ ನಂತರ ಚುನಾವಣೆಯಲ್ಲಿ ಸ್ಪರ್ಧಿಸಲು ಶಾಸಕರಿಗೆ ತಲಾ 25 ಕೋಟಿ ಮತ್ತು ಬಿಜೆಪಿ ಟಿಕೆಟ್ ನೀಡುವುದಾಗಿ ಭರವಸೆ ನೀಡಲಾಗಿತ್ತು ಎಂದು ಎಎಪಿ ನಾಯಕ ಆರೋಪಿಸಿದ್ದಾರೆ. ಎಲ್ಲಾ ಏಳು ಎಎಪಿ ಶಾಸಕರು ಪಕ್ಷ ತೊರೆಯಲು ನಿರಾಕರಿಸಿದ್ದಾರೆ ಎಂದು ಕೇಜ್ರಿವಾಲ್ ಹೇಳಿದರು.

ದೆಹಲಿಯಲ್ಲಿ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗದ ಬಿಜೆಪಿ ಅರವಿಂದ್ ಕೇಜ್ರಿವಾಲ್ ಸರ್ಕಾರವನ್ನು ಉರುಳಿಸಲು “ಕೊಳಕು ಪಿತೂರಿ” ನಡೆಸುತ್ತಿದೆ ಎಂದು ದೆಹಲಿಯ ಆಡಳಿತ ಪಕ್ಷ ಆರೋಪಿಸಿದೆ. ಕೇಜ್ರಿವಾಲ್ ಅವರು ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಭ್ರಷ್ಟಾಚಾರದ ತನಿಖೆ ನಡೆಸುತ್ತಿರುವ ಕೇಂದ್ರ ಸಂಸ್ಥೆಯಾದ ಜಾರಿ ನಿರ್ದೇಶನಾಲಯದ ಬಿಸಿಯನ್ನು ಎದುರಿಸುತ್ತಿದ್ದಾರೆ.

ಐದು ಬಾರಿ ಸಮನ್ಸ್ ಬಂದಿದ್ದು, ಸಮನ್ಸ್ ಅಕ್ರಮವಾಗಿದೆ ಎಂದು ಹೇಳಿ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಿಲ್ಲ.

ಆದಾಗ್ಯೂ, ದೆಹಲಿ ಬಿಜೆಪಿ ಈ ಆರೋಪಗಳನ್ನು ತಳ್ಳಿಹಾಕಿದ್ದು, ಆಫರ್‌ನೊಂದಿಗೆ ತಮ್ಮನ್ನು ಸಂಪರ್ಕಿಸಿದ ಶಾಸಕರು ಮತ್ತು ಜನರನ್ನು ಹೆಸರಿಸುವಂತೆ ಎಎಪಿಗೆ ಸವಾಲು ಹಾಕಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಪ್ರತಿಭಟನೆಯ ನಡುವೆ ಎಎಪಿ ನಾಯಕರ ಬಂಧನ, ಕೇಜ್ರಿವಾಲ್ ರಾಜೀನಾಮೆಗೆ ಬಿಜೆಪಿ ಒತ್ತಾಯ

ದಿಲ್ಲಿಯ ಬಿಜೆಪಿ ಕಾರ್ಯದರ್ಶಿ ಹರೀಶ್ ಖುರಾನಾ ಅವರು ಅತಿಶಿ ಅವರನ್ನು ಸಂಪರ್ಕಿಸಿದ ಶಾಸಕರು ಮತ್ತು ಆಫರ್‌ನೊಂದಿಗೆ ತಮ್ಮನ್ನು ತಲುಪಿದವರನ್ನು ಹೆಸರಿಸುವಂತೆ ಸವಾಲು ಹಾಕಿದರು. ಮದ್ಯದ ಹಗರಣದಲ್ಲಿ ವಿಚಾರಣೆಗಾಗಿ ಇಡಿ ಸಮನ್ಸ್‌ಗಳಿಗೆ ಗೈರಾಗುವ ಮೂಲಕ ಕೇಜ್ರಿವಾಲ್‌ನಿಂದ ಗಮನವನ್ನು ಬದಲಾಯಿಸಲು ಎಎಪಿ ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!