ಲಂಚ ಆರೋಪ: ಅರವಿಂದ್ ಕೇಜ್ರಿವಾಲ್ ಮನೆಗೆ ಬಂದು ನೋಟಿಸ್ ನೀಡಿದ ದೆಹಲಿ ಕ್ರೈಂ ಬ್ರಾಂಚ್

ಕಳೆದ ವಾರ ಪತ್ರಿಕಾಗೋಷ್ಠಿಯಲ್ಲಿ ದೆಹಲಿ ಸಚಿವೆ ಅತಿಶಿ, ಬಿಜೆಪಿ ತನ್ನ ಏಳು ಶಾಸಕರಿಗೆ ಪಕ್ಷವನ್ನು ತೊರೆಯಲು ತಲಾ 25 ಕೋಟಿ ರೂಪಾಯಿಗಳನ್ನು ನೀಡುವುದಾಗಿ ಆಫರ್ ಮಾಡಿದ್ದು ಕೇಜ್ರಿವಾಲ್ ಸರ್ಕಾರವನ್ನು ಉರುಳಿಸುವುದಾಗಿ ಬೆದರಿಕೆ ಹಾಕಿದರು ಎಂದು ಆರೋಪಿಸಿದ್ದರು. ಈ ಆರೋಪಕ್ಕೆ ಸಂಬಂಧಿಸಿದಂತೆ ನೋಟಿಸಿ ನೀಡಲು ದೆಹಲಿ ಕ್ರೈಂ ಬ್ರಾಂಚ್ ಕೇಜ್ರಿವಾಲ್ ಮನೆಗೆ ಬಂದಿದೆ.

ಲಂಚ ಆರೋಪ: ಅರವಿಂದ್ ಕೇಜ್ರಿವಾಲ್ ಮನೆಗೆ ಬಂದು ನೋಟಿಸ್ ನೀಡಿದ ದೆಹಲಿ ಕ್ರೈಂ ಬ್ರಾಂಚ್
ಅರವಿಂದ್ ಕೇಜ್ರಿವಾಲ್
Follow us
|

Updated on: Feb 02, 2024 | 8:56 PM

ದೆಹಲಿ ಫೆಬ್ರುವರಿ 02: ಆಮ್ ಆದ್ಮಿ ಪಕ್ಷದ (AAP) ಶಾಸಕರಿಗೆ ಲಂಚ ನೀಡುವ ಯತ್ನದ ಆರೋಪಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಲು ದೆಹಲಿ ಪೊಲೀಸರ ಕ್ರೈಂ ಬ್ರಾಂಚ್ (Delhi Crime Branch) ಘಟಕದ ತಂಡವು ಶುಕ್ರವಾರ ಸಂಜೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮನೆಗೆ ಬಂದಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ವಾರ ಪತ್ರಿಕಾಗೋಷ್ಠಿಯಲ್ಲಿ ದೆಹಲಿ ಸಚಿವೆ ಅತಿಶಿ, ಬಿಜೆಪಿ ತನ್ನ ಏಳು ಶಾಸಕರಿಗೆ ಪಕ್ಷವನ್ನು ತೊರೆಯಲು ತಲಾ 25 ಕೋಟಿ ರೂಪಾಯಿಗಳನ್ನು ನೀಡುವುದಾಗಿ ಆಫರ್ ಮಾಡಿದ್ದು ಕೇಜ್ರಿವಾಲ್ ಸರ್ಕಾರವನ್ನು ಉರುಳಿಸುವುದಾಗಿ ಬೆದರಿಕೆ ಹಾಕಿದರು ಎಂದು ಆರೋಪಿಸಿದ್ದರು.

ಪಕ್ಷದ ಶಾಸಕರೊಬ್ಬರನ್ನು ಸಂಪರ್ಕಿಸಿದ ವ್ಯಕ್ತಿಯ ವಾಯ್ಸ್ ರೆಕಾರ್ಡ್ ಲಭ್ಯವಿದ್ದು, ಅದನ್ನು ನಂತರ ತೋರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಕೇಜ್ರಿವಾಲ್, ತಮ್ಮ ಪಕ್ಷದ ಏಳು ಶಾಸಕರನ್ನು “ಅವರು” ಅಥವಾ ಬಿಜೆಪಿಯವರು ಸಂಪರ್ಕಿಸಿದ್ದಾರೆ. ಶೀಘ್ರದಲ್ಲೇ ನನ್ನನ್ನು ಬಂಧಿಸಬಹುದು ಎಂದಿದ್ದಾರೆ. ದೆಹಲಿ ಸರ್ಕಾರ ಪತನಗೊಂಡ ನಂತರ ಚುನಾವಣೆಯಲ್ಲಿ ಸ್ಪರ್ಧಿಸಲು ಶಾಸಕರಿಗೆ ತಲಾ 25 ಕೋಟಿ ಮತ್ತು ಬಿಜೆಪಿ ಟಿಕೆಟ್ ನೀಡುವುದಾಗಿ ಭರವಸೆ ನೀಡಲಾಗಿತ್ತು ಎಂದು ಎಎಪಿ ನಾಯಕ ಆರೋಪಿಸಿದ್ದಾರೆ. ಎಲ್ಲಾ ಏಳು ಎಎಪಿ ಶಾಸಕರು ಪಕ್ಷ ತೊರೆಯಲು ನಿರಾಕರಿಸಿದ್ದಾರೆ ಎಂದು ಕೇಜ್ರಿವಾಲ್ ಹೇಳಿದರು.

ದೆಹಲಿಯಲ್ಲಿ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗದ ಬಿಜೆಪಿ ಅರವಿಂದ್ ಕೇಜ್ರಿವಾಲ್ ಸರ್ಕಾರವನ್ನು ಉರುಳಿಸಲು “ಕೊಳಕು ಪಿತೂರಿ” ನಡೆಸುತ್ತಿದೆ ಎಂದು ದೆಹಲಿಯ ಆಡಳಿತ ಪಕ್ಷ ಆರೋಪಿಸಿದೆ. ಕೇಜ್ರಿವಾಲ್ ಅವರು ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಭ್ರಷ್ಟಾಚಾರದ ತನಿಖೆ ನಡೆಸುತ್ತಿರುವ ಕೇಂದ್ರ ಸಂಸ್ಥೆಯಾದ ಜಾರಿ ನಿರ್ದೇಶನಾಲಯದ ಬಿಸಿಯನ್ನು ಎದುರಿಸುತ್ತಿದ್ದಾರೆ.

ಐದು ಬಾರಿ ಸಮನ್ಸ್ ಬಂದಿದ್ದು, ಸಮನ್ಸ್ ಅಕ್ರಮವಾಗಿದೆ ಎಂದು ಹೇಳಿ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಿಲ್ಲ.

ಆದಾಗ್ಯೂ, ದೆಹಲಿ ಬಿಜೆಪಿ ಈ ಆರೋಪಗಳನ್ನು ತಳ್ಳಿಹಾಕಿದ್ದು, ಆಫರ್‌ನೊಂದಿಗೆ ತಮ್ಮನ್ನು ಸಂಪರ್ಕಿಸಿದ ಶಾಸಕರು ಮತ್ತು ಜನರನ್ನು ಹೆಸರಿಸುವಂತೆ ಎಎಪಿಗೆ ಸವಾಲು ಹಾಕಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಪ್ರತಿಭಟನೆಯ ನಡುವೆ ಎಎಪಿ ನಾಯಕರ ಬಂಧನ, ಕೇಜ್ರಿವಾಲ್ ರಾಜೀನಾಮೆಗೆ ಬಿಜೆಪಿ ಒತ್ತಾಯ

ದಿಲ್ಲಿಯ ಬಿಜೆಪಿ ಕಾರ್ಯದರ್ಶಿ ಹರೀಶ್ ಖುರಾನಾ ಅವರು ಅತಿಶಿ ಅವರನ್ನು ಸಂಪರ್ಕಿಸಿದ ಶಾಸಕರು ಮತ್ತು ಆಫರ್‌ನೊಂದಿಗೆ ತಮ್ಮನ್ನು ತಲುಪಿದವರನ್ನು ಹೆಸರಿಸುವಂತೆ ಸವಾಲು ಹಾಕಿದರು. ಮದ್ಯದ ಹಗರಣದಲ್ಲಿ ವಿಚಾರಣೆಗಾಗಿ ಇಡಿ ಸಮನ್ಸ್‌ಗಳಿಗೆ ಗೈರಾಗುವ ಮೂಲಕ ಕೇಜ್ರಿವಾಲ್‌ನಿಂದ ಗಮನವನ್ನು ಬದಲಾಯಿಸಲು ಎಎಪಿ ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ