AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahua Moitra: ಕೊನೆಗೂ ಸರ್ಕಾರಿ ಬಂಗಲೆಯಿಂದ ಹೊರ ನಡೆದ ಮಾಜಿ ಸಂಸದೆ ಮಹುವಾ ಮೊಯಿತ್ರಾ

ಟಿಎಂಸಿಯ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸರ್ಕಾರಿ ಬಂಗಲೆಯಿಂದ ಹೊರಹಾಕಲು ತಂಡವನ್ನು ಕಳುಹಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Mahua Moitra: ಕೊನೆಗೂ ಸರ್ಕಾರಿ ಬಂಗಲೆಯಿಂದ ಹೊರ ನಡೆದ ಮಾಜಿ ಸಂಸದೆ ಮಹುವಾ ಮೊಯಿತ್ರಾ
ಮಹುವಾ ಮೊಯಿತ್ರಾImage Credit source: Indian Express
ನಯನಾ ರಾಜೀವ್
|

Updated on:Jan 19, 2024 | 11:32 AM

Share

ಟಿಎಂಸಿಯ ಮಾಜಿ ಸಂಸದೆ ಮಹುವಾ ಮೊಯಿತ್ರಾ(Mahua Moitra) ಅವರನ್ನು ಸರ್ಕಾರಿ ಬಂಗಲೆಯಿಂದ ಹೊರಹಾಕಲು ತಂಡವನ್ನು ಕಳುಹಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದೀಗ ಸರ್ಕಾರಿ ಬಂಗಲೆಯಿಂದ ಮೊಯಿತ್ರಾ ಹೊರನಡೆದಿದ್ದಾರೆ. ತೃಣಮೂಲ ಕಾಂಗ್ರೆಸ್​ನ ಮಾಜಿ ಸಂಸದ ಮಹುವಾ ಮೊಯಿತ್ರಾ ಅವರನ್ನು ದೆಹಲಿಯಲ್ಲಿರುವ ಸರ್ಕಾರಿ ಬಂಗಲೆಯಿಂದ ಹೊರಹಾಕಲು ಎಸ್ಟೇಟ್ ನಿರ್ದೇಶನಾಲಯ ತಂಡವನ್ನು ಕಳುಹಿಸಿದೆ ಎಂದು ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಬಂಗಲೆಯನ್ನು ತೆರವು ಮಾಡುವಂತೆ ಟಿಎಂಸಿ ನಾಯಕಿಗೆ ನೀಡಿದ್ದ ತೆರವು ನೋಟಿಸ್‌ಗೆ ತಡೆಯಾಜ್ಞೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ ಒಂದು ದಿನದ ನಂತರ ತಂಡವನ್ನು ಕಳುಹಿಸಲಾಗಿದೆ.

ಮತ್ತಷ್ಟು ಓದಿ: ಬಂಗಲೆ ತೆರವು ನೋಟಿಸ್ ಪ್ರಶ್ನಿಸಿ ಮಹುವಾ ಮೊಯಿತ್ರಾ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್​

ತನಗೆ ನೀಡಲಾಗಿದ್ದ ಸರ್ಕಾರಿ ಬಂಗಲೆಯನ್ನು ತೆರವು ಮಾಡುವಂತೆ ತನಗೆ ಕಳುಹಿಸಿದ್ದ ನೋಟಿಸ್‌ ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್‌ನ ಮಾಜಿ ಸಂಸದೆ ಮಹುವಾ ಮೊಯಿತ್ರಾ(Mahua Moitra) ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ . ಗುರುವಾರ ಹೊರಡಿಸಿದ ತನ್ನ ಆದೇಶದಲ್ಲಿ, ಮೊಯಿತ್ರಾ ಅವರು ಸಂಸದೆಯಾಗಿ

ಅಮಾನತುಗೊಂಡಿರುವುದರಿಂದ ಬಂಗಲೆಯಲ್ಲಿ ವಾಸಿಸುವ ಹಕ್ಕು ಇಲ್ಲ ಎಂದು ಹೈಕೋರ್ಟ್ ಹೇಳಿದೆ. ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಉಡುಗೊರೆಗಳನ್ನು ಸ್ವೀಕರಿಸಿದ ಆರೋಪದ ಮೇಲೆ ಡಿಸೆಂಬರ್ 8 ರಂದು ಅವರನ್ನು ಉಚ್ಛಾಟಿಸಿದ ಬಳಿಕ ಜನವರಿ 7ರೊಳಗೆ ಬಂಗೆ ಖಾಲಿ ಮಾಡುವಂತೆ ಸೂಚನೆ ನೀಡಲಾಗಿತ್ತು.

ನಂತರ ತೃಣಮೂಲ ಕಾಂಗ್ರೆಸ್‌ನ ನಾಯಕರು ಡಿಒಇ ಆದೇಶವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ನ ಮೊರೆ ಹೋಗಿದ್ದರು. ಆದಾಗ್ಯೂ, ಜನವರಿ 4 ರಂದು ನ್ಯಾಯಾಲಯವು ಮಹುವಾ ಮೊಯಿತ್ರಾ ಅವರಿಗೆ ಸರ್ಕಾರವು ಮಂಜೂರು ಮಾಡಿದ ವಸತಿಗೃಹದಲ್ಲಿ ಉಳಿಯಲು ಅನುಮತಿಗಾಗಿ DoE ಅನ್ನು ಸಂಪರ್ಕಿಸಲು ಕೇಳಿತು.

ಮೊಯಿತ್ರಾ ಅವರು ತಕ್ಷಣ ಬಂಗಲೆಯನ್ನು ಖಾಲಿ ಮಾಡುವಂತೆ ಡಿಒಇಯ ಸೂಚನೆಯನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಮೊರೆ ಹೋದರು. ಆದಾಗ್ಯೂ, ನ್ಯಾಯಾಲಯವು ಆಕೆಯ ಮನವಿಯನ್ನು ತಿರಸ್ಕರಿಸಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:05 am, Fri, 19 January 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!