AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕ್​ಟಾಕ್ ಸಹಿತ 59 ಚೀನಾ ಅಪ್ಲಿಕೇಷನ್​ಗಳಿಗೆ ಶಾಶ್ವತ ನಿರ್ಬಂಧ ಹೇರಲು ಭಾರತ ನಿರ್ಧಾರ

ಅಪ್ಲಿಕೇಷನ್​ಗಳನ್ನು ನಿರ್ಬಂಧಿಸುವ ಬಗ್ಗೆ ಚೀನಾ ಆಪ್​ಗಳು ನೀಡಿದ ಉತ್ತರ ಮತ್ತು ಸ್ಪಷ್ಟೀಕರಣಗಳು ಅಸಮರ್ಪಕ ಹಾಗೂ ಅಪೂರ್ಣವಾಗಿವೆ. ಹಾಗಾಗಿ, 59 ಚೀನಾ ಅಪ್ಲಿಕೇಷನ್​ಗಳನ್ನು ಶಾಶ್ವತವಾಗಿ ನಿರ್ಬಂಧಿಸಲು ನೋಟೀಸ್ ನೀಡಲಾಗಿದೆ.

ಟಿಕ್​ಟಾಕ್ ಸಹಿತ 59 ಚೀನಾ ಅಪ್ಲಿಕೇಷನ್​ಗಳಿಗೆ ಶಾಶ್ವತ ನಿರ್ಬಂಧ ಹೇರಲು ಭಾರತ ನಿರ್ಧಾರ
ಟಿಕ್​ಟಾಕ್
TV9 Web
| Edited By: |

Updated on:Apr 06, 2022 | 8:41 PM

Share

ದೆಹಲಿ: ಚೀನಾ ಜೊತೆಗಿನ ಗಡಿ ಸಂಘರ್ಷದ ಬಳಿಕ, ಸುಮಾರು 59 ಚೀನಾ ಅಪ್ಲಿಕೇಷನ್​ಗಳಿಗೆ ಭಾರತ ಶೋ ಕಾಸ್ ನೋಟೀಸ್ ನೀಡಿತ್ತು. ಅದಾದ ಏಳು ತಿಂಗಳ ನಂತರ, ಈಗ ಭಾರತ ಸರ್ಕಾರ ಚೀನಾದ ಅಪ್ಲಿಕೇಷನ್​ಗಳನ್ನು ಶಾಶ್ವತವಾಗಿ ನಿರ್ಬಂಧಿಸುವ ಬಗ್ಗೆ ಹೊಸ ನೋಟೀಸು ಜಾರಿಗೊಳಿಸಿದೆ. ಈ ಮೂಲಕ ಟಿಕ್​ಟಾಕ್ ಸಹಿತ 59 ಚೀನಾ ಆಪ್​ಗಳು ಶಾಶ್ವತವಾಗಿ ಬ್ಯಾನ್ ಆಗಲಿವೆ.

ಅಪ್ಲಿಕೇಷನ್​ಗಳನ್ನು ನಿರ್ಬಂಧಿಸುವ ಬಗ್ಗೆ ಚೀನಾ ಆಪ್​ಗಳು ನೀಡಿದ ಉತ್ತರ ಮತ್ತು ಸ್ಪಷ್ಟೀಕರಣಗಳು ಅಸಮರ್ಪಕ,  ಅಪೂರ್ಣವಾಗಿವೆ. ಹಾಗಾಗಿ, 59 ಚೀನಾ ಅಪ್ಲಿಕೇಷನ್​ಗಳನ್ನು ಶಾಶ್ವತವಾಗಿ ನಿರ್ಬಂಧಿಸಲು ನೋಟೀಸ್ ನೀಡಲಾಗಿದೆ ಎಂದು ಭಾರತೀಯ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.

ಕಳೆದ ವರ್ಷ ಜೂನ್ ತಿಂಗಳಲ್ಲಿ 59 ಚೀನಾ ಅಪ್ಲಿಕೇಷನ್​ಗಳ ಮೇಲೆ ಭಾರತ ಸರ್ಕಾರ ತಾತ್ಕಾಲಿಕ ನಿರ್ಬಂಧ ಹೇರಿತ್ತು. ಅವುಗಳು ಭಾರತದ ಸಾರ್ವಭೌಮತ್ವ, ಏಕತೆ ಹಾಗೂ ರಾಷ್ಟ್ರೀಯ ಭದ್ರತೆಯ ವಿಚಾರದಲ್ಲಿ ಪೂರ್ವಾಗ್ರಹ ಹೊಂದಿವೆ ಎಂದು ಆರೋಪಿಸಲಾಗಿತ್ತು. ಟಿಕ್​ಟಾಕ್, ಹೆಲೋ, ವಿ ಚಾಟ್, ಅಲಿಬಾಬಾ ಕಂಪೆನಿಯ ಯುಸಿ ಬ್ರೌಸರ್, ಯುಸಿ ನ್ಯೂಸ್, ಶೈನ್, ಕಲ್ಬ್ ಫ್ಯಾಕ್ಟರಿ, ಲೈಕೀ, ಬಿಗೊ ಲೈವ್, ಕ್ವಾಯ್, ಕ್ಲಾಷ್ ಆಫ್ ಕಿಂಗ್ಸ್ ಹಾಗೂ ಕ್ಯಾಮ್ ಸ್ಕಾನರ್ ಸಹಿತ 59 ಆಪ್​ಗಳ ಮೇಲೆ ಭಾರತ ನಿರ್ಬಂಧ ಹೇರಿತ್ತು.

ತೀವ್ರ ಸ್ವರೂಪ ಪಡೆದ ಪ್ರತಿಭಟನೆ.. ರೈತರ ಮೇಲೆ ಅಶ್ರುವಾಯು, ಲಾಠಿಚಾರ್ಜ್‌, ಜಲಫಿರಂಗಿ ಪ್ರಯೋಗ

ಕೇಂದ್ರ ಬಜೆಟ್ 2021: ಬಜೆಟ್ ಮೊಬೈಲ್ ಆ್ಯಪ್​ನಲ್ಲಿ ಏನಿದೆ?

Published On - 2:25 pm, Tue, 26 January 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!