AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಇಂದಿನಿಂದ 3 ದಿನಗಳ ಗುಜರಾತ್​ ಪ್ರವಾಸ; ಜತೆಯಾಗಲಿದ್ದಾರೆ ಡಬ್ಲ್ಯೂಎಚ್​ಒ ಮಹಾನಿರ್ದೇಶಕ ಟೆಡ್ರೊಸ್ ಘೆಬ್ರೆಯೆಸಸ್

ಬುಧವಾರ ಘೆಬ್ರೆಯೆಸಸ್ ಗಾಂಧಿನಗರಕ್ಕೆ ಭೇಟಿ ಕೊಡಲಿದ್ದಾರೆ. ಅಂದು ಅಲ್ಲಿ ಪ್ರಧಾನಿ ಮೋದಿ ಜಾಗತಿಕ ಆಯುಷ್​ ಹೂಡಿಕೆ ಮತ್ತು ನಾವೀನ್ಯತೆ ಶೃಂಗಸಭೆ ಉದ್ಘಾಟನೆ ಮಾಡಲಿದ್ದಾರೆ. ಇದು ಮೂರು ದಿನಗಳ ಶೃಂಗಸಭೆಯಾಗಿದ್ದು, ಮಹಾತ್ಮಾ ಮಂದಿರ್​​ನಲ್ಲಿ ನಡೆಯಲಿದೆ. 

ಪ್ರಧಾನಿ ಮೋದಿ ಇಂದಿನಿಂದ 3 ದಿನಗಳ ಗುಜರಾತ್​ ಪ್ರವಾಸ; ಜತೆಯಾಗಲಿದ್ದಾರೆ ಡಬ್ಲ್ಯೂಎಚ್​ಒ ಮಹಾನಿರ್ದೇಶಕ ಟೆಡ್ರೊಸ್ ಘೆಬ್ರೆಯೆಸಸ್
ಡಾ ಟೆಡ್ರೊಸ್ ಘೆಬ್ರೆಯೆಸಸ್ ಮತ್ತು ಪ್ರಧಾನಿ ಮೋದಿ
TV9 Web
| Updated By: Lakshmi Hegde|

Updated on:Apr 18, 2022 | 9:25 AM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದಿನಿಂದ (ಏಪ್ರಿಲ್​ 3) ಮೂರು ದಿನಗಳ ಗುಜರಾತ್​ ಪ್ರವಾಸ ಹಮ್ಮಿಕೊಂಡಿದ್ದಾರೆ. ಈ ಮೂರು ದಿನಗಳ ಕಾಲ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.  ಪ್ರಧಾನಿ ನರೇಂದ್ರ ಮೋದಿಯವರು ಇಂದು ಮೊದಲು ಗುಜರಾತ್​ನ ಗಾಂಧಿ ನಗರದಲ್ಲಿರುವ ಕಮಾಂಡ್​ ಮತ್ತು ಕಂಟ್ರೋಲ್​ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಹಾಗೇ, ಮರುದಿನ  (ಏಪ್ರಿಲ್​ 19)  ಬನಸ್ಕಾಂತದ ಡಿಯೋದರ್​​ನಲ್ಲಿರುವ ಬನಾಸ್​ ಡೇರಿ ಸಂಕುಲ್​​ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವರು ಮತ್ತು ಅನುಷ್ಠಾನಗೊಂಡಿರುವ ಹಲವು ಯೋಜನೆಗಳನ್ನು ಉದ್ಘಾಟಿಸುವರು ಎಂದು ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದೆ.

ಹಾಗೇ, ವಿಶ್ವ ಆರೋಗ್ಯ ಸಂಸ್ಥೆಯ ಪ್ರಧಾನ ನಿರ್ದೇಶಕ ಡಾ ಟೆಡ್ರೊಸ್ ಘೆಬ್ರೆಯೆಸಸ್ ಕೂಡ ಇಂದಿನಿಂದ ಮೂರು ದಿನಗಳ ಭಾರತ ಪ್ರವಾಸ ಹಮ್ಮಿಕೊಂಡಿದ್ದಾರೆ. ಅವರು ಇಂದು ಗುಜರಾತ್​​ನ ರಾಜಕೋಟ್​ಗೆ ಭೇಟಿ ನೀಡಲಿದ್ದು, ನಂತರ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವಿವಿಧ ಕಾರ್ಯಕ್ರಮಗಳಲ್ಲಿ ಜತೆಯಾಗಲಿದ್ದಾರೆ. ಏಪ್ರಿಲ್​ 19ರಂದು ಗುಜರಾತ್​​ನ ಜಮ್ನಾಗರ್​​ನಲ್ಲಿ ಡಬ್ಲ್ಯೂಎಚ್​​ಒದ ಸಾಂಪ್ರದಾಯಿಕ ಔಷಧದ ಜಾಗತಿಕ ಕೇಂದ್ರ (GCTM)ವನ್ನು ಪ್ರಧಾನಿ ಮೋದಿ ಮತ್ತು ಟೆಡ್ರೊಸ್ ಘೆಬ್ರೆಯೆಸಸ್ ಜತೆಯಾಗಿ ಲೋಕಾರ್ಪಣೆಗೊಳಿಸಲಿದ್ದಾರೆ. ಈ ಜಿಸಿಟಿಎಂ ಜಗತ್ತಿನ ಏಕೈಕ ಸಾಂಪ್ರದಾಯಿಕ ಔಷಧ ಕೇಂದ್ರ ಎಂದು ರಾಜ್​ಕೋಟ್​ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಬುಧವಾರ ಘೆಬ್ರೆಯೆಸಸ್ ಗಾಂಧಿನಗರಕ್ಕೆ ಭೇಟಿ ಕೊಡಲಿದ್ದಾರೆ. ಅಂದು ಅಲ್ಲಿ ಪ್ರಧಾನಿ ಮೋದಿ ಜಾಗತಿಕ ಆಯುಷ್​ ಹೂಡಿಕೆ ಮತ್ತು ನಾವೀನ್ಯತೆ ಶೃಂಗಸಭೆ ಉದ್ಘಾಟನೆ ಮಾಡಲಿದ್ದಾರೆ. ಇದು ಮೂರು ದಿನಗಳ ಶೃಂಗಸಭೆಯಾಗಿದ್ದು, ಮಹಾತ್ಮಾ ಮಂದಿರ್​​ನಲ್ಲಿ ನಡೆಯಲಿದೆ.  90 ಪ್ರಖ್ಯಾತ ಭಾಷಣಕಾರರು ಮತ್ತು 100ಕ್ಕೂ ಹೆಚ್ಚು ಪ್ರದರ್ಶನಕಾರರು ಪಾಲ್ಗೊಳ್ಳಲಿದ್ದಾರೆ.   ಇನ್ನೊಂದು ವಿಶೇಷವೆಂದರೆ ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾಥ್ ಅವರೂ ಇಂದು ರಾಜ್‌ಕೋಟ್‌ಗೆ ಆಗಮಿಸಲಿದ್ದಾರೆ.  ವಿಮಾನ ನಿಲ್ದಾಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಅವರನ್ನು ಸ್ವಾಗತಿಸಲಾಗುವುದು. ಅಲ್ಲಿಂದ ಅಶ್ವದಳದ ಮೆರವಣಿಗೆ ಮೂಲಕ ಕರೆದುಕೊಂಡು ಬರಲಾಗುವುದು ಎಂದು ಹೇಳಲಾಗಿದೆ.

ಇದನ್ನೂ ಓದಿ: ರಣಬೀರ್​​-ಆಲಿಯಾ ಮದುವೆಗೆ ದೀಪಿಕಾ, ಕತ್ರಿನಾ ಗಿಫ್ಟ್​ ಏನು? ದಂಪತಿಗೆ ಕೋಟ್ಯಂತರ ರೂ. ಬೆಲೆಯ ಉಡುಗೊರೆ

Published On - 9:05 am, Mon, 18 April 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್