AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ, ಶಿಶು ಸಾವು

ಶಾಲೆಯ ಶೌಚಾಲಯದಲ್ಲಿ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಚೀಮಕುರ್ತಿ ಮಂಡಲದ ನಿವಾಸಿಯಾದ 16 ವರ್ಷದ ವಿದ್ಯಾರ್ಥಿಯು ಕೋತಪಟ್ಟಣಂನ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ (ಕೆಜಿಬಿವಿ) ಓದುತ್ತಿದ್ದಳು. ಆಕೆ ಜೂನ್ 19 ರಂದು ಶಾಲೆಗೆ ಸೇರಿದ್ದಳು ಮತ್ತು ನಿತ್ಯವೂ ತರಗತಿಗಳಿಗೆ ಹಾಜರಾಗುತ್ತಿದ್ದಳು.

ಶಾಲೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ, ಶಿಶು ಸಾವು
ಶಿಶು-ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: Aug 02, 2024 | 8:54 AM

Share

ಬಾಲಕಿಯೊಬ್ಬಳು ಶಾಲೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ಆಂಧ್ರಪ್ರದೇಶದ ಕೋತಪಟ್ಟಣಂನಲ್ಲಿ ನಡೆದಿದೆ. ಹುಟ್ಟಿ ಕೆಲವೇ ಕ್ಷಣಗಳಲ್ಲಿ ನವಜಾತ ಶಿಶು ಸಾವನ್ನಪ್ಪಿದೆ. ಚೀಮಕುರ್ತಿ ಮಂಡಲದ ನಿವಾಸಿಯಾದ 16 ವರ್ಷದ ವಿದ್ಯಾರ್ಥಿಯು ಕೋತಪಟ್ಟಣಂನ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ (ಕೆಜಿಬಿವಿ) ಓದುತ್ತಿದ್ದಳು. ಆಕೆ ಜೂನ್ 19 ರಂದು ಶಾಲೆಗೆ ಸೇರಿದ್ದಳು ಮತ್ತು ನಿತ್ಯವೂ ತರಗತಿಗಳಿಗೆ ಹಾಜರಾಗುತ್ತಿದ್ದಳು.

ವಿದ್ಯಾರ್ಥಿನಿ ಶೌಚಾಲಯಕ್ಕೆ ಹೋಗಿದ್ದ ಸಂದರ್ಭದಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಆಕೆಗೆ ಹಲವಾರು ಗಂಟೆಗಳ ಕಾಲ ಹೆರಿಗೆ ನೋವು ಕಾಣಿಸಿಕೊಂಡರೂ ಯಾರಿಗೂ ತಿಳಿಸಿರಲಿಲ್ಲ. ಆಕೆ ಗರ್ಭಿಣಿಯಾಗಿರುವ ಬಗ್ಗೆ ಶಾಲಾ ಅಧಿಕಾರಿಗಳು ಮತ್ತು ಶಿಕ್ಷಕರಿಗೆ ತಿಳಿದಿರಲಿಲ್ಲ.

ವಿದ್ಯಾರ್ಥಿನಿ ತುಂಬಾ ಸಮಯದವರೆಗೆ ತರಗತಿಗೆ ಹಿಂದಿರುಗದಿದ್ದಾಗ ಆಕೆಯ ಸಹಪಾಠಿಗಳುಹಾಗೂ ಶಿಕ್ಷಕರು ಪರೀಕ್ಷಿಸಲು ಶೌಚಾಲಯಕ್ಕೆ ಹೋಗಿದ್ದಾರೆ. ಅಲ್ಲಿ ಆಕೆ ರಕ್ತದ ಮಡುವಿನಲ್ಲಿ ಬಿದ್ದಿದ್ದಳು. ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ಕಂಡು ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಮತ್ತಷ್ಟು ಓದಿ: ಗಂಡು ಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ; ಸಹೋದರ ಅರೆಸ್ಟ್, ಪ್ರಾಚಾರ್ಯ ಹಾಗೂ ವಾರ್ಡನ್ ಅಮಾನತು

ವಿದ್ಯಾರ್ಥಿನಿಯನ್ನು ಒಂಗೋಲ್‌ನ ರಾಜೀವ್ ಗಾಂಧಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (RIMS) ರವಾನಿಸಲಾಗಿದ್ದು, ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ. ನವಜಾತ ಶಿಶು ಜನಿಸಿದ ಸ್ವಲ್ಪ ಸಮಯದ ನಂತರ ಸಾವನ್ನಪ್ಪಿತು. ಈ ವಿಚಾರ ಆಕೆಯ ಪೋಷಕರಿಗೆ ತಿಳಿದಿತ್ತೇ ಎನ್ನುವ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ