AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ, ಶಿಶು ಸಾವು

ಶಾಲೆಯ ಶೌಚಾಲಯದಲ್ಲಿ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಚೀಮಕುರ್ತಿ ಮಂಡಲದ ನಿವಾಸಿಯಾದ 16 ವರ್ಷದ ವಿದ್ಯಾರ್ಥಿಯು ಕೋತಪಟ್ಟಣಂನ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ (ಕೆಜಿಬಿವಿ) ಓದುತ್ತಿದ್ದಳು. ಆಕೆ ಜೂನ್ 19 ರಂದು ಶಾಲೆಗೆ ಸೇರಿದ್ದಳು ಮತ್ತು ನಿತ್ಯವೂ ತರಗತಿಗಳಿಗೆ ಹಾಜರಾಗುತ್ತಿದ್ದಳು.

ಶಾಲೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ, ಶಿಶು ಸಾವು
ಶಿಶು-ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: Aug 02, 2024 | 8:54 AM

Share

ಬಾಲಕಿಯೊಬ್ಬಳು ಶಾಲೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ಆಂಧ್ರಪ್ರದೇಶದ ಕೋತಪಟ್ಟಣಂನಲ್ಲಿ ನಡೆದಿದೆ. ಹುಟ್ಟಿ ಕೆಲವೇ ಕ್ಷಣಗಳಲ್ಲಿ ನವಜಾತ ಶಿಶು ಸಾವನ್ನಪ್ಪಿದೆ. ಚೀಮಕುರ್ತಿ ಮಂಡಲದ ನಿವಾಸಿಯಾದ 16 ವರ್ಷದ ವಿದ್ಯಾರ್ಥಿಯು ಕೋತಪಟ್ಟಣಂನ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ (ಕೆಜಿಬಿವಿ) ಓದುತ್ತಿದ್ದಳು. ಆಕೆ ಜೂನ್ 19 ರಂದು ಶಾಲೆಗೆ ಸೇರಿದ್ದಳು ಮತ್ತು ನಿತ್ಯವೂ ತರಗತಿಗಳಿಗೆ ಹಾಜರಾಗುತ್ತಿದ್ದಳು.

ವಿದ್ಯಾರ್ಥಿನಿ ಶೌಚಾಲಯಕ್ಕೆ ಹೋಗಿದ್ದ ಸಂದರ್ಭದಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಆಕೆಗೆ ಹಲವಾರು ಗಂಟೆಗಳ ಕಾಲ ಹೆರಿಗೆ ನೋವು ಕಾಣಿಸಿಕೊಂಡರೂ ಯಾರಿಗೂ ತಿಳಿಸಿರಲಿಲ್ಲ. ಆಕೆ ಗರ್ಭಿಣಿಯಾಗಿರುವ ಬಗ್ಗೆ ಶಾಲಾ ಅಧಿಕಾರಿಗಳು ಮತ್ತು ಶಿಕ್ಷಕರಿಗೆ ತಿಳಿದಿರಲಿಲ್ಲ.

ವಿದ್ಯಾರ್ಥಿನಿ ತುಂಬಾ ಸಮಯದವರೆಗೆ ತರಗತಿಗೆ ಹಿಂದಿರುಗದಿದ್ದಾಗ ಆಕೆಯ ಸಹಪಾಠಿಗಳುಹಾಗೂ ಶಿಕ್ಷಕರು ಪರೀಕ್ಷಿಸಲು ಶೌಚಾಲಯಕ್ಕೆ ಹೋಗಿದ್ದಾರೆ. ಅಲ್ಲಿ ಆಕೆ ರಕ್ತದ ಮಡುವಿನಲ್ಲಿ ಬಿದ್ದಿದ್ದಳು. ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ಕಂಡು ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಮತ್ತಷ್ಟು ಓದಿ: ಗಂಡು ಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ; ಸಹೋದರ ಅರೆಸ್ಟ್, ಪ್ರಾಚಾರ್ಯ ಹಾಗೂ ವಾರ್ಡನ್ ಅಮಾನತು

ವಿದ್ಯಾರ್ಥಿನಿಯನ್ನು ಒಂಗೋಲ್‌ನ ರಾಜೀವ್ ಗಾಂಧಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (RIMS) ರವಾನಿಸಲಾಗಿದ್ದು, ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ. ನವಜಾತ ಶಿಶು ಜನಿಸಿದ ಸ್ವಲ್ಪ ಸಮಯದ ನಂತರ ಸಾವನ್ನಪ್ಪಿತು. ಈ ವಿಚಾರ ಆಕೆಯ ಪೋಷಕರಿಗೆ ತಿಳಿದಿತ್ತೇ ಎನ್ನುವ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್