AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್:​ ಮಾಲ್​ನ 4ನೇ ಮಹಡಿಯಿಂದ ಹಾರಿ ಬಾಲಕ ಆತ್ಮಹತ್ಯೆ

ಇತ್ತೀಚಿನ ದಿನಗಳಲ್ಲಿ ಯುವಕರನ್ನು ಖಿನ್ನತೆ ಸಮಸ್ಯೆ ಹೆಚ್ಚಾಗಿ ಬಾಧಿಸುತ್ತಿದೆ. ಅದರಿಂದ ಹೊರಬರುವ ಪ್ರಯತ್ನ ಮಾಡುವ ಬದಲು ತಪ್ಪು ದಾರಿ ತುಳಿಯುತ್ತಿರುವುದು ಬೇಸರದ ಸಂಗತಿ. ಪಂಜಾಬ್​ ಮಾಲ್​ನಲ್ಲಿ 17 ವರ್ಷದ ಬಾಲಕ 4ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ ಕೆಲವು ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದ ಎಂದು ಪೋಷಕರು ತಿಳಿಸಿದ್ದಾರೆ. ಆದರೆ ಈಗ ಆತ್ಮಹತ್ಯೆಗೆ ನಿಜವಾದ ಕಾರಣವೇನೆಂಬುದು ತಿಳಿದುಬಂದಿಲ್ಲ, ಹಾಗೆಯೇ ಯಾವ ಸಮಸ್ಯೆ ಆತನನ್ನು ಬಾಧಿಸುತ್ತಿತ್ತು ಎಂಬುದು ಹೊರಬರಬೇಕಿದೆ.

ಪಂಜಾಬ್:​ ಮಾಲ್​ನ 4ನೇ ಮಹಡಿಯಿಂದ ಹಾರಿ ಬಾಲಕ ಆತ್ಮಹತ್ಯೆ
ಬಾಲಕ
ನಯನಾ ರಾಜೀವ್
|

Updated on: Apr 06, 2025 | 12:59 PM

Share

ಪಂಜಾಬ್​, ಏಪ್ರಿಲ್ 06: ಮಾಲ್​ನ 4ನೇ ಮಹಡಿಯಿಂದ ಹಾರಿ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್​ನ ಮೊಹಾಲಿಯಲ್ಲಿ ನಡೆದಿದೆ. ಬೆಸ್ಟೆಕ್ ಮಾಲ್‌ನ ನಾಲ್ಕನೇ ಮಹಡಿಯಿಂದ ಹಾರಿ 17 ವರ್ಷದ ಬಾಲಕ ಶನಿವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಭಿಜಿತ್ ಎಂದು ಗುರುತಿಸಲಾದ ಈ ಬಾಲಕ 12 ನೇ ತರಗತಿ ವಿದ್ಯಾರ್ಥಿಯಾಗಿದ್ದು, ಕಳೆದ ಕೆಲವು ದಿನಗಳಿಂದ ಖಿನ್ನತೆ(Depression)ಯಿಂದ ಬಳಲುತ್ತಿದ್ದ ಎಂದು ವರದಿಯಾಗಿದೆ.

ತನಿಖೆಯ ನೇತೃತ್ವ ವಹಿಸಿರುವ ಇನ್ಸ್‌ಪೆಕ್ಟರ್ ಗಗನ್‌ದೀಪ್ ಸಿಂಗ್ ಮಾತನಾಡಿ, ಬಾಲಕ ಬೆಳಗ್ಗೆ 9.19 ರ ಸುಮಾರಿಗೆ ಮಾಲ್ ತಲುಪಿ ನಾಲ್ಕನೇ ಮಹಡಿಯಿಂದ ಹಾರಿದ್ದಾನೆ. ತಕ್ಷಣ ಆತನನ್ನು ಮೊಹಾಲಿಯ 6 ನೇ ಹಂತದಲ್ಲಿರುವ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾನೆ.

ತನ್ನ ಮಗನಲ್ಲಿ ಇತ್ತೀಚೆಗೆ ಖಿನ್ನತೆಯ ಲಕ್ಷಣ ಕಾಣಿಸಿಕೊಂಡಿತ್ತು ಎಂದು ಅಭಿಜಿತ್ ತಂದೆ ಪೊಲೀಸರಿಗೆ ತಿಳಿಸಿದ್ದಾರೆ. ಮಾಲ್‌ನ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಹುಡುಗ ನಾಲ್ಕನೇ ಮಹಡಿಯಲ್ಲಿ ಕೆಲವು ನಿಮಿಷಗಳ ಕಾಲ ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿರುವುದನ್ನು ತೋರಿಸಲಾಗಿದೆ.

ಆತ ನೀರಿನ ಬಾಟಲಿಯನ್ನು ಖರೀದಿಸಿ, ನಂತರ ಕಾಯುತ್ತಿರುವಂತೆ ಹಿಂದಕ್ಕೆ ಮತ್ತು ಮುಂದಕ್ಕೆ ನಡೆಯುತ್ತಿರುವುದು ಕಂಡುಬರುತ್ತದೆ. ಇನ್ಸ್‌ಪೆಕ್ಟರ್ ಸಿಂಗ್ ಪ್ರಕಾರ, ಯಾರೂ ತನ್ನನ್ನು ನೋಡುತ್ತಿಲ್ಲ ಎಂದು ಭಾವಿಸುವವರೆಗೂ ಅವನು ಕಾದು ನಂತರ ಹಾರಿದ್ದಾನೆ. ನಮ್ಮ ತಂಡವು ಐದರಿಂದ ಎಂಟು ನಿಮಿಷಗಳ ಒಳಗೆ ಸ್ಥಳಕ್ಕೆ ತಲುಪಿತು ಮತ್ತು ಅವನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಕೆಲವು ಗಂಟೆಗಳ ನಂತರ ಅವನು ಮೃತಪಟ್ಟಿದ್ದಾನೆ ಎಂದು ಆಸ್ಪತ್ರೆಯಿಂದ ನಮಗೆ ತಿಳಿಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಆತಂಕವೋ, ಖಿನ್ನತೆಯೋ? ನಿಮ್ಮ ಭಾವನೆಗಳನ್ನು ಅರಿಯುವುದು ಹೇಗೆ?

ಆ ಹುಡುಗ ಬೆಳಗ್ಗೆ ಮಾಲ್‌ನಲ್ಲಿ ಏನು ಮಾಡುತ್ತಿದ್ದ ಎಂದು ವಿಚಾರಿಸಿದಾಗ, ಮಾಲ್‌ನಲ್ಲಿರುವ ಫುಡ್ ಕೋರ್ಟ್ ಮತ್ತು ಮಲ್ಟಿಪ್ಲೆಕ್ಸ್ ಬೇಗನೆ ತೆರೆಯುತ್ತವೆ, ಮಾಲ್‌ನ ಸಿಬ್ಬಂದಿ ಅವನು ನೀರಿನ ಬಾಟಲಿಯನ್ನು ಖರೀದಿಸಿದ್ದಾಗಿ ನಮಗೆ ತಿಳಿಸಿದರು ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ