AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

17 ವರ್ಷದ ಹುಡುಗನ ಬಲಿಪಡೆದ ಪ್ರೀತಿ; ಗುಪ್ತಾಂಗ ಕತ್ತರಿಸಿ, ಥಳಿಸಿ ಹತ್ಯೆ ಮಾಡಿದ ಹುಡುಗಿಯ ಕುಟುಂಬದವರು

ಮೃತ ಬಾಲಕನ ಹೆಸರು ಸೌರಭ್​ ಕುಮಾರ್​. ಈ ಗ್ರಾಮದ ಪಕ್ಕದಲ್ಲೇ ಇರುವ ಸೊರ್ಬಾರಾ ಹಳ್ಳಿಯ ಹುಡುಗಿಯನ್ನು ಪ್ರೀತಿಸುತ್ತಿದ್ದ. ಶುಕ್ರವಾರ ರಾತ್ರಿ ಸೌರಭ್​ ತನ್ನ ಗರ್ಲ್​ಫ್ರೆಂಡ್​ ಮನೆಗೆ ಹೋಗಿದ್ದಾಗ ಇಬ್ಬರೂ ಒಟ್ಟಿಗೇ ಸಿಕ್ಕಿಬಿದ್ದಿದ್ದಾರೆ.

17 ವರ್ಷದ ಹುಡುಗನ ಬಲಿಪಡೆದ ಪ್ರೀತಿ; ಗುಪ್ತಾಂಗ ಕತ್ತರಿಸಿ, ಥಳಿಸಿ ಹತ್ಯೆ ಮಾಡಿದ ಹುಡುಗಿಯ ಕುಟುಂಬದವರು
ಹುಡುಗಿಯ ಮನೆಯ ಎದುರು ಮೃತನ ಅಂತ್ಯಸಂಸ್ಕಾರ (ಫೋಟೋ ಕೃಪೆ-ಇಂಡಿಯಾ ಟುಡೆ)
TV9 Web
| Updated By: Lakshmi Hegde|

Updated on: Jul 25, 2021 | 1:07 PM

Share

ಪ್ರೀತಿ-ಪ್ರೇಮ ಎಂಬುದು ಎಷ್ಟೋ ಜನರ ಬದುಕನ್ನು ಹಸನಾಗಿಟ್ಟಿದ್ದು ಎಷ್ಟು ಸತ್ಯವೋ..ಅನೇಕರ ಬದುಕನ್ನು ಕಿತ್ತುಕೊಂಡಿದ್ದೂ ಅಷ್ಟೇ ಸತ್ಯ. ಪ್ರೀತಿ ಮಾಡಿದ್ದಾನೆ/ಳೆ ಎಂಬ ಒಂದೇ ಕಾರಣಕ್ಕೆ ಕೊಲೆಯಾದವರೂ ಇದ್ದಾರೆ. ಹಾಗೇ, ಬಿಹಾರದ ಮುಜಾಫರ್​ಪುರ ಜಿಲ್ಲೆಯಲ್ಲಿ 17ವರ್ಷದ ಬಾಲಕ ಇದೇ ಕಾರಣಕ್ಕೀಗ ಹತ್ಯೆಯಾಗಿದ್ದಾನೆ. ಹುಡುಗಿಯ ಕುಟುಂಬದ ಕಡೆಯವರು ತುಂಬ ಭೀಕರವಾಗಿ ಇವನನ್ನು ಕೊಂದಿದ್ದಾರೆ. ಹಾಗೇ ಇವನ ಗುಪ್ತಾಂಗವನ್ನೂ ಕತ್ತರಿಸಿ ಹಾಕಿದ್ದಾರೆ.

ರೇಪುರಾ ರಾಮಪುರಶಾಹ್​​ ಹಳ್ಳಿಯಲ್ಲಿ ದುರ್ಘಟನೆ ನಡೆದಿದೆ. ಮೃತ ಬಾಲಕನ ಹೆಸರು ಸೌರಭ್​ ಕುಮಾರ್​. ಈ ಗ್ರಾಮದ ಪಕ್ಕದಲ್ಲೇ ಇರುವ ಸೊರ್ಬಾರಾ ಹಳ್ಳಿಯ ಹುಡುಗಿಯನ್ನು ಪ್ರೀತಿಸುತ್ತಿದ್ದ. ಶುಕ್ರವಾರ ರಾತ್ರಿ ಸೌರಭ್​ ತನ್ನ ಗರ್ಲ್​ಫ್ರೆಂಡ್​ ಮನೆಗೆ ಹೋಗಿದ್ದಾಗ ಇಬ್ಬರೂ ಒಟ್ಟಿಗೇ ಸಿಕ್ಕಿಬಿದ್ದಿದ್ದಾರೆ. ಅದನ್ನು ನೋಡಿ ತುಂಬ ಕೋಪಗೊಂಡ ಹುಡುಗಿಯ ಕುಟುಂಬದವರು, ಸಂಬಂಧಿಕರು ಆತನಿಗೆ ಮನಬಂದಂತೆ ಥಳಿಸಿದ್ದಾರೆ. ಅಷ್ಟೇ ಅಲ್ಲ, ಗುಪ್ತಾಂಗವನ್ನೂ ಕತ್ತರಿಸಿದ್ದಾರೆ. ಅಷ್ಟರಲ್ಲಿ ಹುಡುಗನ ಕುಟುಂಬದವರಿಗೆ ವಿಷಯ ಗೊತ್ತಾಗಿ, ಅವರೇ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಒಂದು ಖಾಸಗಿ ಆಸ್ಪತ್ರೆಗೆ ಬಾಲಕನನ್ನು ದಾಖಲು ಮಾಡಿದರೂ ಸಹ ಯಾವುದೇ ಪ್ರಯೋಜನ ಆಗಲಿಲ್ಲ. ಅಂದೇ ರಾತ್ರಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಆದರೆ ಸೌರಭ್ ಕುಮಾರ್ ಕುಟುಂಬದವರು ಇದರಿಂದ ತೀವ್ರವಾಗಿ ಕೋಪಗೊಂಡಿದ್ದಲ್ಲದೆ, ಹುಡುಗಿಯ ಮನೆಯ ಎದುರೇ ಸೌರಭ್​ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಪ್ರಸ್ತುತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಲವರನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನೂ ಹಲವರು ನಾಪತ್ತೆಯಾಗಿದ್ದಾರೆ. ಪ್ರೀತಿ ವಿಚಾರಕ್ಕೇ ಬಾಲಕನನ್ನು ಹತ್ಯೆ ಮಾಡಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದ್ದರೂ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತೇವೆ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪೋಸ್ಟರ್​ನಲ್ಲಿ ದರ್ಶನ್​​ ಜೊತೆ ಸಪ್ಲೈಯರ್​ ಹುಡುಗನ ಫೋಟೋ; ಅಚ್ಚರಿ ಮೂಡಿಸಿದ ‘ಝೂ’ ಚಿತ್ರ

Teen killed private part chopped by his girlfriend family in Bihar

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ