AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ದಿನಗಳಿಂದ ಹೋಟೆಲ್​ ರೂಂನಲ್ಲಿ ಬಂಧಿಯಾಗಿದ್ದ ವಿದ್ಯಾರ್ಥಿನಿಯ ರಕ್ಷಣೆ

ಕಳೆದ 20 ದಿನಗಳಿಂದ ಹೋಟೆಲ್​ ರೂಂನಲ್ಲಿ ಬಂಧಿಯಾಗಿದ್ದ ವಿದ್ಯಾರ್ಥಿನಿಯನ್ನು ಹೈದರಾಬಾದ್​ನ ಮಹಿಳಾ ಪೊಲೀಸರು ರಕ್ಷಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆಕೆಯನ್ನು ಕರೆದೊಯ್ದು ರೂಮಿನಲ್ಲಿ ಬಂಧಿಸಿಟ್ಟಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.

20 ದಿನಗಳಿಂದ ಹೋಟೆಲ್​ ರೂಂನಲ್ಲಿ ಬಂಧಿಯಾಗಿದ್ದ  ವಿದ್ಯಾರ್ಥಿನಿಯ ರಕ್ಷಣೆ
ಅಪರಹಣImage Credit source: Shutterstock
ನಯನಾ ರಾಜೀವ್
|

Updated on: Sep 09, 2024 | 8:36 AM

Share

ಕಳೆದ 20 ದಿನಗಳಿಂದ ಹೋಟೆಲ್​ ರೂಂನಲ್ಲಿ ಬಂಧಿಯಾಗಿದ್ದ ವಿದ್ಯಾರ್ಥಿನಿಯನ್ನು ಹೈದರಾಬಾದ್​ನ ಮಹಿಳಾ ಪೊಲೀಸರು ರಕ್ಷಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆಕೆಯನ್ನು ಕರೆದೊಯ್ದು ರೂಮಿನಲ್ಲಿ ಬಂಧಿಸಿಟ್ಟಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.

ಹೈದರಾಬಾದ್​ ಪೊಲೀಸ್​ ವಿಭಾಗದ ‘SHE’ತಂಡವು ವಿದ್ಯಾರ್ಥಿನಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ. 19 ವರ್ಷದ ಆರೋಪಿಯನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ನಾರಾಯಣಗುಡ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಭೈಂಸಾ ಪಟ್ಟಣದ ವಿದ್ಯಾರ್ಥಿನಿಯ ಪೋಷಕರು ಹೈದರಾಬಾದ್‌ನ ಶಿ ಟೀಮ್​ಗೆ ದೂರು ಸಲ್ಲಿಸಿದ್ದರು, ತಮ್ಮ ಮಗಳು ಟ್ರ್ಯಾಪ್​ ಆಗಿದ್ದಾಳೆ ಎಂಬುದನ್ನು ತಿಳಿಸಿದ್ದರು. ಆರೋಪಿ ಬೆದರಿಕೆ ಹಾಕಿದ್ದ, ಹೈದರಾಬಾದ್​ಗೆ ಬರುವಂತೆ ಒತ್ತಾಯಿಸಿದ್ದ, 20 ದಿನಗಳ ಕಾಲ ಹೋಟೆಲ್​ ಕೊಠಡಿಯಲ್ಲಿ ಬೀಗ ಹಾಕಿ ಕೂರಿಸಿದ್ದ ಎಂದು ವಿದ್ಯಾರ್ಥಿನಿ ಹೇಳಿದ್ದಾಳೆ.

ಮತ್ತಷ್ಟು ಓದಿ: ತೆಲಂಗಾಣ: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 9ನೇ ತರಗತಿ ವಿದ್ಯಾರ್ಥಿನಿ ಈಗ ಗರ್ಭಿಣಿ

ಆಕೆ ಇನ್​ಸ್ಟೆಂಟ್ ಮೆಸೇಜಿಂಗ್ ಆ್ಯಪ್ ಮೂಲಕ ಪೋಷಕರಿಗೆ ಸಂದೇಶ ಕಳುಹಿಸಿದ್ದಳು. ತಕ್ಷಣವೇ ಪೊಲೀಸರು ಸ್ಥಳವನ್ನು ಪತ್ತೆ ಹಚ್ಚಿದ್ದಾರೆ.

ನಾರಾಯಣಗುಡಾದಲ್ಲಿ ಬೀಗ ಹಾಕಲಾದ ಹೋಟೆಲ್ ಕೋಣೆಯಲ್ಲಿ ಬಾಲಕಿಯನ್ನು ಪತ್ತೆಹಚ್ಚಿ, ರಕ್ಷಿಸಿ ಪೋಷಕರಿಗೆ ಒಪ್ಪಿಸಿದ್ದಾರೆ. ಬಳಿಕ ಆರೋಪಿಯನ್ನೂ ಬಂಧಿಸಲಾಗಿದೆ. ಹೈದರಾಬಾದ್​ನಲ್ಲಿ ಮಹಿಳೆಯರ ಸುರಕ್ಷತೆಗಾಗಿಯೇ ಶಿ ಟೀಮ್ಸ್​ ವಿಭಾಗವನ್ನು ತೆರೆಯಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ