AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ದಿನಗಳಿಂದ ಹೋಟೆಲ್​ ರೂಂನಲ್ಲಿ ಬಂಧಿಯಾಗಿದ್ದ ವಿದ್ಯಾರ್ಥಿನಿಯ ರಕ್ಷಣೆ

ಕಳೆದ 20 ದಿನಗಳಿಂದ ಹೋಟೆಲ್​ ರೂಂನಲ್ಲಿ ಬಂಧಿಯಾಗಿದ್ದ ವಿದ್ಯಾರ್ಥಿನಿಯನ್ನು ಹೈದರಾಬಾದ್​ನ ಮಹಿಳಾ ಪೊಲೀಸರು ರಕ್ಷಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆಕೆಯನ್ನು ಕರೆದೊಯ್ದು ರೂಮಿನಲ್ಲಿ ಬಂಧಿಸಿಟ್ಟಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.

20 ದಿನಗಳಿಂದ ಹೋಟೆಲ್​ ರೂಂನಲ್ಲಿ ಬಂಧಿಯಾಗಿದ್ದ  ವಿದ್ಯಾರ್ಥಿನಿಯ ರಕ್ಷಣೆ
ಅಪರಹಣImage Credit source: Shutterstock
ನಯನಾ ರಾಜೀವ್
|

Updated on: Sep 09, 2024 | 8:36 AM

Share

ಕಳೆದ 20 ದಿನಗಳಿಂದ ಹೋಟೆಲ್​ ರೂಂನಲ್ಲಿ ಬಂಧಿಯಾಗಿದ್ದ ವಿದ್ಯಾರ್ಥಿನಿಯನ್ನು ಹೈದರಾಬಾದ್​ನ ಮಹಿಳಾ ಪೊಲೀಸರು ರಕ್ಷಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆಕೆಯನ್ನು ಕರೆದೊಯ್ದು ರೂಮಿನಲ್ಲಿ ಬಂಧಿಸಿಟ್ಟಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.

ಹೈದರಾಬಾದ್​ ಪೊಲೀಸ್​ ವಿಭಾಗದ ‘SHE’ತಂಡವು ವಿದ್ಯಾರ್ಥಿನಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ. 19 ವರ್ಷದ ಆರೋಪಿಯನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ನಾರಾಯಣಗುಡ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಭೈಂಸಾ ಪಟ್ಟಣದ ವಿದ್ಯಾರ್ಥಿನಿಯ ಪೋಷಕರು ಹೈದರಾಬಾದ್‌ನ ಶಿ ಟೀಮ್​ಗೆ ದೂರು ಸಲ್ಲಿಸಿದ್ದರು, ತಮ್ಮ ಮಗಳು ಟ್ರ್ಯಾಪ್​ ಆಗಿದ್ದಾಳೆ ಎಂಬುದನ್ನು ತಿಳಿಸಿದ್ದರು. ಆರೋಪಿ ಬೆದರಿಕೆ ಹಾಕಿದ್ದ, ಹೈದರಾಬಾದ್​ಗೆ ಬರುವಂತೆ ಒತ್ತಾಯಿಸಿದ್ದ, 20 ದಿನಗಳ ಕಾಲ ಹೋಟೆಲ್​ ಕೊಠಡಿಯಲ್ಲಿ ಬೀಗ ಹಾಕಿ ಕೂರಿಸಿದ್ದ ಎಂದು ವಿದ್ಯಾರ್ಥಿನಿ ಹೇಳಿದ್ದಾಳೆ.

ಮತ್ತಷ್ಟು ಓದಿ: ತೆಲಂಗಾಣ: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 9ನೇ ತರಗತಿ ವಿದ್ಯಾರ್ಥಿನಿ ಈಗ ಗರ್ಭಿಣಿ

ಆಕೆ ಇನ್​ಸ್ಟೆಂಟ್ ಮೆಸೇಜಿಂಗ್ ಆ್ಯಪ್ ಮೂಲಕ ಪೋಷಕರಿಗೆ ಸಂದೇಶ ಕಳುಹಿಸಿದ್ದಳು. ತಕ್ಷಣವೇ ಪೊಲೀಸರು ಸ್ಥಳವನ್ನು ಪತ್ತೆ ಹಚ್ಚಿದ್ದಾರೆ.

ನಾರಾಯಣಗುಡಾದಲ್ಲಿ ಬೀಗ ಹಾಕಲಾದ ಹೋಟೆಲ್ ಕೋಣೆಯಲ್ಲಿ ಬಾಲಕಿಯನ್ನು ಪತ್ತೆಹಚ್ಚಿ, ರಕ್ಷಿಸಿ ಪೋಷಕರಿಗೆ ಒಪ್ಪಿಸಿದ್ದಾರೆ. ಬಳಿಕ ಆರೋಪಿಯನ್ನೂ ಬಂಧಿಸಲಾಗಿದೆ. ಹೈದರಾಬಾದ್​ನಲ್ಲಿ ಮಹಿಳೆಯರ ಸುರಕ್ಷತೆಗಾಗಿಯೇ ಶಿ ಟೀಮ್ಸ್​ ವಿಭಾಗವನ್ನು ತೆರೆಯಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್