AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ದಿನಗಳಿಂದ ಹೋಟೆಲ್​ ರೂಂನಲ್ಲಿ ಬಂಧಿಯಾಗಿದ್ದ ವಿದ್ಯಾರ್ಥಿನಿಯ ರಕ್ಷಣೆ

ಕಳೆದ 20 ದಿನಗಳಿಂದ ಹೋಟೆಲ್​ ರೂಂನಲ್ಲಿ ಬಂಧಿಯಾಗಿದ್ದ ವಿದ್ಯಾರ್ಥಿನಿಯನ್ನು ಹೈದರಾಬಾದ್​ನ ಮಹಿಳಾ ಪೊಲೀಸರು ರಕ್ಷಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆಕೆಯನ್ನು ಕರೆದೊಯ್ದು ರೂಮಿನಲ್ಲಿ ಬಂಧಿಸಿಟ್ಟಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.

20 ದಿನಗಳಿಂದ ಹೋಟೆಲ್​ ರೂಂನಲ್ಲಿ ಬಂಧಿಯಾಗಿದ್ದ  ವಿದ್ಯಾರ್ಥಿನಿಯ ರಕ್ಷಣೆ
ಅಪರಹಣImage Credit source: Shutterstock
ನಯನಾ ರಾಜೀವ್
|

Updated on: Sep 09, 2024 | 8:36 AM

Share

ಕಳೆದ 20 ದಿನಗಳಿಂದ ಹೋಟೆಲ್​ ರೂಂನಲ್ಲಿ ಬಂಧಿಯಾಗಿದ್ದ ವಿದ್ಯಾರ್ಥಿನಿಯನ್ನು ಹೈದರಾಬಾದ್​ನ ಮಹಿಳಾ ಪೊಲೀಸರು ರಕ್ಷಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆಕೆಯನ್ನು ಕರೆದೊಯ್ದು ರೂಮಿನಲ್ಲಿ ಬಂಧಿಸಿಟ್ಟಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.

ಹೈದರಾಬಾದ್​ ಪೊಲೀಸ್​ ವಿಭಾಗದ ‘SHE’ತಂಡವು ವಿದ್ಯಾರ್ಥಿನಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ. 19 ವರ್ಷದ ಆರೋಪಿಯನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ನಾರಾಯಣಗುಡ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಭೈಂಸಾ ಪಟ್ಟಣದ ವಿದ್ಯಾರ್ಥಿನಿಯ ಪೋಷಕರು ಹೈದರಾಬಾದ್‌ನ ಶಿ ಟೀಮ್​ಗೆ ದೂರು ಸಲ್ಲಿಸಿದ್ದರು, ತಮ್ಮ ಮಗಳು ಟ್ರ್ಯಾಪ್​ ಆಗಿದ್ದಾಳೆ ಎಂಬುದನ್ನು ತಿಳಿಸಿದ್ದರು. ಆರೋಪಿ ಬೆದರಿಕೆ ಹಾಕಿದ್ದ, ಹೈದರಾಬಾದ್​ಗೆ ಬರುವಂತೆ ಒತ್ತಾಯಿಸಿದ್ದ, 20 ದಿನಗಳ ಕಾಲ ಹೋಟೆಲ್​ ಕೊಠಡಿಯಲ್ಲಿ ಬೀಗ ಹಾಕಿ ಕೂರಿಸಿದ್ದ ಎಂದು ವಿದ್ಯಾರ್ಥಿನಿ ಹೇಳಿದ್ದಾಳೆ.

ಮತ್ತಷ್ಟು ಓದಿ: ತೆಲಂಗಾಣ: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 9ನೇ ತರಗತಿ ವಿದ್ಯಾರ್ಥಿನಿ ಈಗ ಗರ್ಭಿಣಿ

ಆಕೆ ಇನ್​ಸ್ಟೆಂಟ್ ಮೆಸೇಜಿಂಗ್ ಆ್ಯಪ್ ಮೂಲಕ ಪೋಷಕರಿಗೆ ಸಂದೇಶ ಕಳುಹಿಸಿದ್ದಳು. ತಕ್ಷಣವೇ ಪೊಲೀಸರು ಸ್ಥಳವನ್ನು ಪತ್ತೆ ಹಚ್ಚಿದ್ದಾರೆ.

ನಾರಾಯಣಗುಡಾದಲ್ಲಿ ಬೀಗ ಹಾಕಲಾದ ಹೋಟೆಲ್ ಕೋಣೆಯಲ್ಲಿ ಬಾಲಕಿಯನ್ನು ಪತ್ತೆಹಚ್ಚಿ, ರಕ್ಷಿಸಿ ಪೋಷಕರಿಗೆ ಒಪ್ಪಿಸಿದ್ದಾರೆ. ಬಳಿಕ ಆರೋಪಿಯನ್ನೂ ಬಂಧಿಸಲಾಗಿದೆ. ಹೈದರಾಬಾದ್​ನಲ್ಲಿ ಮಹಿಳೆಯರ ಸುರಕ್ಷತೆಗಾಗಿಯೇ ಶಿ ಟೀಮ್ಸ್​ ವಿಭಾಗವನ್ನು ತೆರೆಯಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!