AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ನೋಡೋದು ಬಿಟ್ಟು ಸ್ನಾನ ಮಾಡು ಎಂದು ಗದರಿದ್ದಕ್ಕೆ ಬಾವಿಗೆ ಹಾರಿದ ಬಾಲಕಿ

ಮೊಬೈಲ್(Mobile) ನೋಡುವುದು ಬಿಟ್ಟು ಸ್ನಾನ ಮಾಡು ಎಂದು ಪೋಷಕರು ಗದರಿದ್ದಕ್ಕೆ 17 ವರ್ಷದ ಬಾಲಕಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತೆಲಂಗಾಣದ ಆಸಿಫಾಬಾದ್​ನ ಸಂದೀಪ್​ ನಗರದಲ್ಲಿ ನಡೆದಿದೆ. ಸ್ವರ್ಣಲತಾ ಮತ್ತು ಪೋಚಿರಾಮ್ ದಂಪತಿಯ 17 ವರ್ಷದ ಮಗಳು ಸಾತ್ವಿಕಾ ಇಂಟರ್ಮೀಡಿಯೇಟ್ (ಪಿಯುಸಿ) ಮೊದಲ ವರ್ಷ ಮುಗಿಸಿ ದ್ವಿತೀಯ ವರ್ಷಕ್ಕೆ ಕಾಲಿಟ್ಟಿದ್ದಾಳೆ. ಬುಧವಾರದಂದು ಸಾತ್ವಿಕಾ ಮನೆಯಲ್ಲಿ ಸ್ನಾನ ಮಾಡದೆ ಗಂಟೆಗಟ್ಟಲೆ ಮೊಬೈಲ್ ಫೋನ್ ನೋಡುತ್ತಾ ಕುಳಿತಿದ್ದಳು. ಇದನ್ನು ಗಮನಿಸಿದ ಕುಟುಂಬಸ್ಥರು ಆಕೆಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು.

ಮೊಬೈಲ್ ನೋಡೋದು ಬಿಟ್ಟು ಸ್ನಾನ ಮಾಡು ಎಂದು ಗದರಿದ್ದಕ್ಕೆ ಬಾವಿಗೆ ಹಾರಿದ ಬಾಲಕಿ
ಬಾಲಕಿImage Credit source: Tv9 Telugu
ನಯನಾ ರಾಜೀವ್
|

Updated on:May 21, 2026 | 1:16 PM

Share

ಆಸಿಫಾಬಾದ್, ಮೇ 21: ಮೊಬೈಲ್(Mobile) ನೋಡುವುದು ಬಿಟ್ಟು ಸ್ನಾನ ಮಾಡು ಎಂದು ಪೋಷಕರು ಗದರಿದ್ದಕ್ಕೆ 17 ವರ್ಷದ ಬಾಲಕಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತೆಲಂಗಾಣದ ಆಸಿಫಾಬಾದ್​ನ ಸಂದೀಪ್​ ನಗರದಲ್ಲಿ ನಡೆದಿದೆ. ಸ್ವರ್ಣಲತಾ ಮತ್ತು ಪೋಚಿರಾಮ್ ದಂಪತಿಯ 17 ವರ್ಷದ ಮಗಳು ಸಾತ್ವಿಕಾ ಇಂಟರ್ಮೀಡಿಯೇಟ್ (ಪಿಯುಸಿ) ಮೊದಲ ವರ್ಷ ಮುಗಿಸಿ ದ್ವಿತೀಯ ವರ್ಷಕ್ಕೆ ಕಾಲಿಟ್ಟಿದ್ದಾಳೆ.

ಬುಧವಾರದಂದು ಸಾತ್ವಿಕಾ ಮನೆಯಲ್ಲಿ ಸ್ನಾನ ಮಾಡದೆ ಗಂಟೆಗಟ್ಟಲೆ ಮೊಬೈಲ್ ಫೋನ್ ನೋಡುತ್ತಾ ಕುಳಿತಿದ್ದಳು. ಇದನ್ನು ಗಮನಿಸಿದ ಕುಟುಂಬಸ್ಥರು ಆಕೆಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು, ತಕ್ಷಣ ಹೋಗಿ ಸ್ನಾನ ಮಾಡುವಂತೆ ಗದರಿಸಿದ್ದಾರೆ. ಇದರಿಂದ ತೀವ್ರವಾಗಿ ನೊಂದ ಮತ್ತು ಕೋಪಗೊಂಡ ಬಾಲಕಿ, ಮನೆಯಿಂದ ಹೊರಗೆ ಓಡಿಹೋಗಿ ಮುಂದಿನ ಬೀದಿಯಲ್ಲಿದ್ದ ಬಾವಿಗೆ ಧುಮುಕಿದ್ದಾಳೆ.

ಜೀವಭಯದಿಂದ ಕಿರುಚಾಟ, ನೆರವಾದ ಕಾಲೋನಿ ನಿವಾಸಿಗಳು ಕೋಪದಲ್ಲಿ ಬಾವಿಗಂತೂ ಹಾರಿದ ಬಾಲಕಿಗೆ ನೀರಿನಲ್ಲಿ ಮುಳುಗುತ್ತಿದ್ದಂತೆ ಜೀವಭಯ ಶುರುವಾಗಿದೆ. ಆಕೆ ಬಾವಿಯ ನೀರಿನಲ್ಲಿ ಒದ್ದಾಡುತ್ತಾ ಜೋರಾಗಿ ಕಿರುಚಲು ಆರಂಭಿಸಿದ್ದಾಳೆ. ಬಾಲಕಿಯ ಕೂಗು ಕೇಳಿ ಓಡಿಬಂದ ಕಾಲೋನಿ ನಿವಾಸಿಗಳು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಓದಿ: ಗೆಳೆಯನ ಮೊಬೈಲ್ ಬಚ್ಚಿಟ್ಟು ಮಜಾಕ್: ತಮಾಷೆಯಲ್ಲೇ ಹೋಯ್ತು ಸ್ನೇಹಿತನ ಜೀವ, ಆಗಿದ್ದೇನು?

ಮಾಹಿತಿ ಸಿಗುತ್ತಿದ್ದಂತೆ ಎಸ್‌ಎಚ್‌ಒ (SHO) ಬಾಲಾಜಿ ವರಪ್ರಸಾದ್ ಅವರ ನೇತೃತ್ವದ ಪೊಲೀಸ್ ತಂಡ ಅಗ್ನಿಶಾಮಕ ದಳದೊಂದಿಗೆ ಸ್ಥಳಕ್ಕೆ ಧಾವಿಸಿತು. ಅಗ್ನಿಶಾಮಕ ಸಿಬ್ಬಂದಿಗಳಾದ ನರೇಶ್, ರಾಮು ಮತ್ತು ಚಾಲಕ ಪ್ರವೀಣ್ ಕುಮಾರ್ ಅವರು ಸಮಯಪ್ರಜ್ಞೆ ಮೆರೆದು ಹಗ್ಗದ ಸಹಾಯದಿಂದ ಬಾವಿಗೆ ಇಳಿದಿದ್ದಾರೆ. ಬಾಲಕಿಗೆ ಲೈಫ್ ಜಾಕೆಟ್ ಧರಿಸಿ, ಆಕೆಯನ್ನು ಅತ್ಯಂತ ಸುರಕ್ಷಿತವಾಗಿ ಬಾವಿಯಿಂದ ಹೊರಗೆ ತಂದಿದ್ದಾರೆ.

ಸಕಾಲದಲ್ಲಿ ಸ್ಪಂದಿಸಿ ಬಾಲಕಿಯ ಜೀವ ಉಳಿಸಿದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಯ ಕಾರ್ಯವನ್ನು ಉನ್ನತ ಅಧಿಕಾರಿಗಳು ಹಾಗೂ ಸಾರ್ವಜನಿಕರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಬಾವಿಗೆ ಹಾರಿದ ರಭಸಕ್ಕೆ ಬಾಲಕಿಯ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಕೆಯನ್ನು ಚಿಕಿತ್ಸೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಷ್ಟು ಸಣ್ಣ ವಿಷಯಕ್ಕೆ ಪ್ರಾಣ ಕಳೆದುಕೊಳ್ಳಲು ಮುಂದಾದ ಬಾಲಕಿಗೆ ಪೊಲೀಸರು ಬುದ್ಧಿವಾದ ಹೇಳಿ ಕೌನ್ಸೆಲಿಂಗ್ (Counseling) ನಡೆಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:15 pm, Thu, 21 May 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಒಂದು ವರ್ಷದಲ್ಲಿ 13 ಸಿನಿಮಾ: ಹಳೆಯ ದಿನಗಳ ನೆನೆದ ಶ್ರುತಿ
ಒಂದು ವರ್ಷದಲ್ಲಿ 13 ಸಿನಿಮಾ: ಹಳೆಯ ದಿನಗಳ ನೆನೆದ ಶ್ರುತಿ
ಗೃಹಲಕ್ಷ್ಮಿ ಯೋಜನೆಗೆ ಮೇಜರ್ ಸರ್ಜರಿ: ಮಹತ್ವದ ಅಪ್ಡೇಟ್ ನೀಡಿದ ಸಿಎಂ ಡಿಕೆಶಿ
ಗೃಹಲಕ್ಷ್ಮಿ ಯೋಜನೆಗೆ ಮೇಜರ್ ಸರ್ಜರಿ: ಮಹತ್ವದ ಅಪ್ಡೇಟ್ ನೀಡಿದ ಸಿಎಂ ಡಿಕೆಶಿ
ಪೊಲೀಸರಿಗೂ ಎಚ್ಚರಿಕೆ ಕೊಟ್ಟ ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಪೊಲೀಸರಿಗೂ ಎಚ್ಚರಿಕೆ ಕೊಟ್ಟ ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್
36 ಸಾವಿರ ಕೋಟಿ ರೂ. ಲೂಟಿ ಆರೋಪ:ಲೋಕಾಯುಕ್ತಕ್ಕೂ ಬಿಜೆಪಿ ದೂರು
36 ಸಾವಿರ ಕೋಟಿ ರೂ. ಲೂಟಿ ಆರೋಪ:ಲೋಕಾಯುಕ್ತಕ್ಕೂ ಬಿಜೆಪಿ ದೂರು
ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್​​ ಭೇಟಿ
ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್​​ ಭೇಟಿ
ಬಿಸಿಎಂ ಹಾಸ್ಟೆಲ್​​​​​ನಲ್ಲಿ ಹುಡುಗ-ಹುಡುಗಿಯರಿಂದ ಬಿಂದಾಸ್ ಎಣ್ಣೆ ಪಾರ್ಟಿ
ಬಿಸಿಎಂ ಹಾಸ್ಟೆಲ್​​​​​ನಲ್ಲಿ ಹುಡುಗ-ಹುಡುಗಿಯರಿಂದ ಬಿಂದಾಸ್ ಎಣ್ಣೆ ಪಾರ್ಟಿ
ನಾಮಪತ್ರ ರದ್ದಾಗಲೆಂದೇ ಕಾಂಗ್ರೆಸ್ ಫಾರ್ಮ್ ತುಂಬಿತ್ತಾ? ಬಿಜೆಪಿ ಲೇವಡಿ
ನಾಮಪತ್ರ ರದ್ದಾಗಲೆಂದೇ ಕಾಂಗ್ರೆಸ್ ಫಾರ್ಮ್ ತುಂಬಿತ್ತಾ? ಬಿಜೆಪಿ ಲೇವಡಿ
ಏನಿದು ಕಸದಿಂದ ಕಾಸು? ಎಳೆ ಎಳೆಯಾಗಿ ಬಿಚ್ಚಿಟ್ಟ ಆರ್ ಅಶೋಕ್
ಏನಿದು ಕಸದಿಂದ ಕಾಸು? ಎಳೆ ಎಳೆಯಾಗಿ ಬಿಚ್ಚಿಟ್ಟ ಆರ್ ಅಶೋಕ್
ಕೇರಳದಲ್ಲಿ ಶಿಗೆಲ್ಲ ಮಾರಿಗೆ ಮಗು ಬಲಿ; ಏನಿದು ಶಿಗೆಲ್ಲ, ಇದು ಹರಡುವುದೇಗೆ?
ಕೇರಳದಲ್ಲಿ ಶಿಗೆಲ್ಲ ಮಾರಿಗೆ ಮಗು ಬಲಿ; ಏನಿದು ಶಿಗೆಲ್ಲ, ಇದು ಹರಡುವುದೇಗೆ?