AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ: ಮೊಬೈಲ್ ಕದ್ದ ಶಂಕೆ, ಬಾಲಕನನ್ನು ಉಲ್ಟಾ ನೇತು ಹಾಕಿ, ಕರೆಂಟ್ ಶಾಕ್ ಕೊಟ್ರು

ಕಾರ್ಖಾನೆಯಲ್ಲಿ ಮಾಲೀಕರ ಮೊಬೈಲ್ ಕಳ್ಳತನದ ಅನುಮಾನದ ಮೇರೆಗೆ 14 ವರ್ಷದ ಬಾಲಕನನ್ನು ಉಲ್ಟಾ ನೇತು ಹಾಕಿ, ವಿದ್ಯುತ್ ಶಾಕ್ ಹೃದಯವಿದ್ರಾವಕ ಘಟನೆ ಪಶ್ಚಿಮ ಬಂಗಾಳದ ಮಹೇಶತಲಾದಲ್ಲಿ ನಡೆದಿದೆ. ಮೊಬೈಲ್ ಕದ್ದ ಅನುಮಾನದ ಮೇರೆಗೆ ಆತನನ್ನು ಕ್ರೂರವಾಗಿ ತಳಿಸಿದ್ದಲ್ಲದೆ ವಿದ್ಯುತ್ ಶಾಕ್ ನೀಡಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪಶ್ಚಿಮ ಬಂಗಾಳ: ಮೊಬೈಲ್ ಕದ್ದ ಶಂಕೆ, ಬಾಲಕನನ್ನು ಉಲ್ಟಾ ನೇತು ಹಾಕಿ, ಕರೆಂಟ್ ಶಾಕ್ ಕೊಟ್ರು
ವಿದ್ಯುತ್ ಶಾಕ್Image Credit source: Colombo Law
ನಯನಾ ರಾಜೀವ್
|

Updated on:Jun 05, 2025 | 12:22 PM

Share

ಕೋಲ್ಕತ್ತಾ, ಜೂನ್ 05: ಕಾರ್ಖಾನೆಯಲ್ಲಿ ಮಾಲೀಕರ ಮೊಬೈಲ್ ಕಳ್ಳತನದ ಅನುಮಾನದ ಮೇರೆಗೆ 14 ವರ್ಷದ ಬಾಲಕನನ್ನು ಉಲ್ಟಾ ನೇತು ಹಾಕಿ, ವಿದ್ಯುತ್ ಶಾಕ್(Electric Shock) ಹೃದಯವಿದ್ರಾವಕ ಘಟನೆ ಪಶ್ಚಿಮ ಬಂಗಾಳದ ಮಹೇಶತಲಾದಲ್ಲಿ ನಡೆದಿದೆ. ಮೊಬೈಲ್ ಕದ್ದ ಅನುಮಾನದ ಮೇರೆಗೆ ಆತನನ್ನು ಕ್ರೂರವಾಗಿ ತಳಿಸಿದ್ದಲ್ಲದೆ ವಿದ್ಯುತ್ ಶಾಕ್ ನೀಡಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪೊಲೀಸರು ತಕ್ಷಣ ಕ್ರಮ ಕೈಗೊಂಡು ಪ್ರಮುಖ ಆರೋಪಿಯನ್ನು ಬಂಧಿಸಿದರು. ಘಟನೆಯ ಗಂಭೀರತೆಯನ್ನು ಪರಿಗಣಿಸಿ, ತನಿಖೆಯನ್ನು ತ್ವರಿತವಾಗಿ ನಡೆಸಲಾಗುತ್ತಿದ್ದು, ಬಾಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವ್ಯಕ್ತಿಯ ಕುಟುಂಬದವರು ಕಳ್ಳತನದ ಆರೋಪವನ್ನು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಆತ ಯಾವುದೇ ಮೊಬೈಲ್ ಕದ್ದಿಲ್ಲ, ಸುಳ್ಳು ಆರೋಪದಲ್ಲಿ ಸಿಲುಕಿಸಿ ಚಿತ್ರಹಿಂಸೆ ನೀಡಲಾಗಿದೆ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ. ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯ ಕುಟುಂಬದವರು ದೂರು ದಾಖಲಿಸಿದ್ದಾರೆ.

ಮತ್ತಷ್ಟು ಓದಿ: ಮಕ್ಕಳಿಗೆ ವಿದ್ಯುತ್ ಶಾಕ್ ಹೊಡೆದರೆ ತಕ್ಷಣ ಏನು ಮಾಡಬೇಕು? ಮಾಹಿತಿ ಇಲ್ಲಿದೆ

ಜೀನ್ಸ್ ಬಣ್ಣ ಬಳಿಯುವ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ 14 ವರ್ಷದ ಬಾಲಕನನ್ನು ಮೊಬೈಲ್ ಫೋನ್ ಕಳ್ಳತನದ ಶಂಕೆಯಿಂದ ಘಟಕದ ಮಾಲೀಕರು ತಲೆಕೆಳಗಾಗಿ ನೇತುಹಾಕಿ, ಥಳಿಸಿ, ವಿದ್ಯುತ್ ಶಾಕ್ ನೀಡಿದ್ದಾರೆ . ಕಂಖುಲಿ ಪುರ್ಬಪಾರ ಪ್ರದೇಶದಲ್ಲಿರುವ ಕಾರ್ಖಾನೆಯಿಂದ ಬಾಲಕನನ್ನು ರಕ್ಷಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅವನು ಮೊಬೈಲ್ ಫೋನ್ ಕದ್ದಿದ್ದಾನೆ ಎಂಬ ಆರೋಪವನ್ನು ಬೆಂಬಲಿಸಲು ನಮಗೆ ಯಾವುದೇ ಪುರಾವೆಗಳು ಕಂಡುಬಂದಿಲ್ಲ. ಯಾವುದೇ ಕಾರಣವಿಲ್ಲದೆ ಅವನನ್ನು ಥಳಿಸಿ ಚಿತ್ರಹಿಂಸೆ ನೀಡಲಾಗಿದೆ. ನಾವು ಔಪಚಾರಿಕ ದೂರು ದಾಖಲಿಸಿದ್ದೇವೆ ಎಂದು ಬಾಲಕನ ಕುಟುಂಬ ಸದಸ್ಯರು ಹೇಳಿದ್ದಾರೆ.

ಛತ್ತೀಸ್​ಗಢದಲ್ಲಿ ಇಂಥದ್ದೇ ಘಟನೆ ನಡೆದಿತ್ತು ಛತ್ತೀಸ್​ಗಢದ ಕೊರ್ಬಾ ಜಿಲ್ಲೆಯಲ್ಲಿ ಇಬ್ಬರು ಐಸ್​ಕ್ರೀಂ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರ ಮೇಲೆ ಮಾಲೀಕ ಕಳ್ಳತನ ಆರೋಪ ಹೊರೆಸಿ ಥಳಿಸಿದ್ದರು.ರಾಜಸ್ಥಾನದ ಭಿಲ್ವಾರಾ ಜಿಲ್ಲೆಯವರಾದ ಅಭಿಷೇಕ್ ಭಂಬಿ ಮತ್ತು ವಿನೋದ್ ಭಂಬಿ ಅವರನ್ನು ಸಿವಿಲ್ ಲೈನ್ಸ್ ಪೊಲೀಸ್ ಠಾಣೆ ವ್ಯಾಪ್ತಿಯ ಖಪ್ರಭಟ್ಟಿ ಪ್ರದೇಶದ ಛೋಟು ಗುರ್ಜರ್ ಒಡೆತನದ ಐಸ್ ಕ್ರೀಮ್ ಕಾರ್ಖಾನೆಯಲ್ಲಿ ಕೆಲಸ ಮಾಡಲು ಗುತ್ತಿಗೆದಾರರ ಮೂಲಕ ನೇಮಿಸಲಾಗಿತ್ತು.

ಏಪ್ರಿಲ್ 14 ರಂದು, ಗುರ್ಜರ್ ಮತ್ತು ಅವರ ಸಹಚರ ಮುಖೇಶ್ ಶರ್ಮಾ ಇಬ್ಬರು ಕಾರ್ಮಿಕರ ಮೇಲೆ ಕಳ್ಳತನದ ಆರೋಪ ಹೊರಿಸಿದರು. ಇಬ್ಬರನ್ನೂ ವಿವಸ್ತ್ರಗೊಳಿಸಲಾಗಿತ್ತು. ವಿದ್ಯುತ್ ಶಾಕ್ ನೀಡಲಾಗಿತ್ತು. ಉಗುರುಗಳನ್ನು ಹೊರತೆಗೆದಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:18 pm, Thu, 5 June 25

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?