AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾಟೆ ಬೆಲ್ಟ್​ನಿಂದ ತಾಯಿಯ ಕತ್ತು ಹಿಸುಕಿ ಕೊಂದ ಮಗಳು; ಪೊಲೀಸರಿಗೆ ಫೋನ್​ ಮಾಡಿ ಸುಳ್ಳು ಹೇಳಿ, ಸಿಕ್ಕಿಬಿದ್ದಳು

ಜು.30ರಂದು ಪೊಲೀಸ್​ ಠಾಣೆಗೆ ಕರೆ ಮಾಡಿದ ಬಾಲಕಿ, ನನ್ನ ತಾಯಿ ಏಕಾಏಕಿ ಬಿದ್ದು ಮೃತಪಟ್ಟಿದ್ದಾಳೆ ಎಂದು ಹೇಳಿದ್ದಳು. ನಂತರ ತಾಯಿಯ ಮೃತದೇಹವನ್ನು ಪೋಸ್ಟ್​ಮಾರ್ಟಮ್​ಗೆ ಕಳಿಸಲಾಗಿತ್ತು.

ಕರಾಟೆ ಬೆಲ್ಟ್​ನಿಂದ ತಾಯಿಯ ಕತ್ತು ಹಿಸುಕಿ ಕೊಂದ ಮಗಳು; ಪೊಲೀಸರಿಗೆ ಫೋನ್​ ಮಾಡಿ ಸುಳ್ಳು ಹೇಳಿ, ಸಿಕ್ಕಿಬಿದ್ದಳು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 10, 2021 | 2:40 PM

Share

ಥಾಣೆ: 15ವರ್ಷದ ಬಾಲಕಿಯೊಬ್ಬಳು ತನ್ನ ತಾಯಿಯ ಕುತ್ತಿಗೆಯನ್ನು ಕರಾಟೆ ಬೆಲ್ಟ್​​ನಿಂದ ಹಿಸುಕಿ ಕೊಂದ ಘಟನೆ ನವಿ ಮುಂಬೈನಲ್ಲಿ ನಡೆದಿದೆ. ತಾಯಿಯನ್ನು ಹತ್ಯೆ ಮಾಡಿದ್ದಲ್ಲದೆ, ಅದೊಂದು ಆಕಸ್ಮಿಕ ಸಾವೆಂಬಂತೆ ಬಿಂಬಿಸಲೂ ಪ್ರಯತ್ನ ಮಾಡಿದ್ದಾಳೆ. ಅಷ್ಟಕ್ಕೂ ಆ ಬಾಲಕಿ ಅಮ್ಮನನ್ನು ಕೊಂದಿದ್ದು, ಆಕೆಯ ಶಿಕ್ಷಣಕ್ಕೆ ಸಂಬಂಧಪಟ್ಟ ವಿಚಾರದಲ್ಲಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನವಿ ಮುಂಬೈನ ಏರೋಲಿ ಎಂಬಲ್ಲಿ ಜು.30ರಂದು ನಡೆದ ಘಟನೆ ಈಗ ಬೆಳಕಿಗೆ ಬಂದಿದೆ.

ಆ ತಾಯಿಗೆ ತನ್ನ ಮಗಳು ವೈದ್ಯಕೀಯ ಶಿಕ್ಷಣ ಅಭ್ಯಾಸ ಮಾಡಲಿ ಎಂದು ಆಸೆ. ಆದರೆ ಮಗಳಿಗೆ ಅದು ಸುತಾರಾಂ ಇಷ್ಟವಿರಲಿಲ್ಲ. ಇದೇ ವಿಚಾರಕ್ಕೆ ಅಮ್ಮ-ಮಗಳ ನಡುವೆ ಪದೇಪದೆ ಜಗಳ ಆಗುತ್ತಲೇ ಇತ್ತು. ಇದೇ ವಿಚಾರಕ್ಕೆ ಅಮ್ಮನ ವಿರುದ್ಧ ಕಳೆದ ತಿಂಗಳು ಈಕೆ ಪೊಲೀಸರಿಗೆ ದೂರನ್ನೂ ನೀಡಿದ್ದಳು. ಆದರೆ ಪೊಲೀಸರು ಅವರಿಬ್ಬರಿಗೂ ಬುದ್ಧಿ ಹೇಳಿ ಕಳಿಸಿದ್ದರು.

ಜು.30ರಂದು ಪೊಲೀಸ್​ ಠಾಣೆಗೆ ಕರೆ ಮಾಡಿದ ಬಾಲಕಿ, ನನ್ನ ತಾಯಿ ಏಕಾಏಕಿ ಬಿದ್ದು ಮೃತಪಟ್ಟಿದ್ದಾಳೆ ಎಂದು ಹೇಳಿದ್ದಳು. ನಂತರ ತಾಯಿಯ ಮೃತದೇಹವನ್ನು ಪೋಸ್ಟ್​ಮಾರ್ಟಮ್​ಗೆ ಕಳಿಸಲಾಗಿತ್ತು. ಅದರಲ್ಲಿ ಮಹಿಳೆ ಸಹಜವಾಗಿ ಸತ್ತಿಲ್ಲ..ಆಕೆಯ ಕತ್ತು ಹಿಸುಕಿ ಕೊಲ್ಲಲಾಗಿದೆ ಎಂಬ ವಿಚಾರ ಬೆಳಕಿಗೆ ಬಂತು. ಕೂಡಲೇ ಬಾಲಕಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಸತ್ಯ ಬೆಳಕಿಗೆ ಬಂತು. ಆಕೆ ತಾನು ತನ್ನ ತಾಯಿಯನ್ನು ಕರಾಟೆ ಬೆಲ್ಟ್​​ನಿಂದ ಕತ್ತು ಹಿಸುಕಿ ಕೊಂದಿದ್ದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಸದ್ಯ ಬಾಲಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಪೊಲೀಸರ ಕೈಗೆ ಸಿಗದ ಗುರು ದೇಶಪಾಂಡೆ; ಮೃತನ ಕುಟುಂಬಕ್ಕೆ 10 ಲಕ್ಷ ಪರಿಹಾರದ ಭರವಸೆ

Mi TV 4C: ಅತಿ ಕಡಿಮೆ ಬೆಲೆಯ ಎಂಐ 4ಸಿ ಸ್ಮಾರ್ಟ್​ಟಿವಿ ಲಾಂಚ್: ಆಫರ್​ನಲ್ಲಿ ಪಡೆಯಿರಿ ಮತ್ತಷ್ಟು ಡಿಸ್ಕೌಂಟ್

Published On - 2:40 pm, Tue, 10 August 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ