AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾಟೆ ಬೆಲ್ಟ್​ನಿಂದ ತಾಯಿಯ ಕತ್ತು ಹಿಸುಕಿ ಕೊಂದ ಮಗಳು; ಪೊಲೀಸರಿಗೆ ಫೋನ್​ ಮಾಡಿ ಸುಳ್ಳು ಹೇಳಿ, ಸಿಕ್ಕಿಬಿದ್ದಳು

ಜು.30ರಂದು ಪೊಲೀಸ್​ ಠಾಣೆಗೆ ಕರೆ ಮಾಡಿದ ಬಾಲಕಿ, ನನ್ನ ತಾಯಿ ಏಕಾಏಕಿ ಬಿದ್ದು ಮೃತಪಟ್ಟಿದ್ದಾಳೆ ಎಂದು ಹೇಳಿದ್ದಳು. ನಂತರ ತಾಯಿಯ ಮೃತದೇಹವನ್ನು ಪೋಸ್ಟ್​ಮಾರ್ಟಮ್​ಗೆ ಕಳಿಸಲಾಗಿತ್ತು.

ಕರಾಟೆ ಬೆಲ್ಟ್​ನಿಂದ ತಾಯಿಯ ಕತ್ತು ಹಿಸುಕಿ ಕೊಂದ ಮಗಳು; ಪೊಲೀಸರಿಗೆ ಫೋನ್​ ಮಾಡಿ ಸುಳ್ಳು ಹೇಳಿ, ಸಿಕ್ಕಿಬಿದ್ದಳು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 10, 2021 | 2:40 PM

Share

ಥಾಣೆ: 15ವರ್ಷದ ಬಾಲಕಿಯೊಬ್ಬಳು ತನ್ನ ತಾಯಿಯ ಕುತ್ತಿಗೆಯನ್ನು ಕರಾಟೆ ಬೆಲ್ಟ್​​ನಿಂದ ಹಿಸುಕಿ ಕೊಂದ ಘಟನೆ ನವಿ ಮುಂಬೈನಲ್ಲಿ ನಡೆದಿದೆ. ತಾಯಿಯನ್ನು ಹತ್ಯೆ ಮಾಡಿದ್ದಲ್ಲದೆ, ಅದೊಂದು ಆಕಸ್ಮಿಕ ಸಾವೆಂಬಂತೆ ಬಿಂಬಿಸಲೂ ಪ್ರಯತ್ನ ಮಾಡಿದ್ದಾಳೆ. ಅಷ್ಟಕ್ಕೂ ಆ ಬಾಲಕಿ ಅಮ್ಮನನ್ನು ಕೊಂದಿದ್ದು, ಆಕೆಯ ಶಿಕ್ಷಣಕ್ಕೆ ಸಂಬಂಧಪಟ್ಟ ವಿಚಾರದಲ್ಲಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನವಿ ಮುಂಬೈನ ಏರೋಲಿ ಎಂಬಲ್ಲಿ ಜು.30ರಂದು ನಡೆದ ಘಟನೆ ಈಗ ಬೆಳಕಿಗೆ ಬಂದಿದೆ.

ಆ ತಾಯಿಗೆ ತನ್ನ ಮಗಳು ವೈದ್ಯಕೀಯ ಶಿಕ್ಷಣ ಅಭ್ಯಾಸ ಮಾಡಲಿ ಎಂದು ಆಸೆ. ಆದರೆ ಮಗಳಿಗೆ ಅದು ಸುತಾರಾಂ ಇಷ್ಟವಿರಲಿಲ್ಲ. ಇದೇ ವಿಚಾರಕ್ಕೆ ಅಮ್ಮ-ಮಗಳ ನಡುವೆ ಪದೇಪದೆ ಜಗಳ ಆಗುತ್ತಲೇ ಇತ್ತು. ಇದೇ ವಿಚಾರಕ್ಕೆ ಅಮ್ಮನ ವಿರುದ್ಧ ಕಳೆದ ತಿಂಗಳು ಈಕೆ ಪೊಲೀಸರಿಗೆ ದೂರನ್ನೂ ನೀಡಿದ್ದಳು. ಆದರೆ ಪೊಲೀಸರು ಅವರಿಬ್ಬರಿಗೂ ಬುದ್ಧಿ ಹೇಳಿ ಕಳಿಸಿದ್ದರು.

ಜು.30ರಂದು ಪೊಲೀಸ್​ ಠಾಣೆಗೆ ಕರೆ ಮಾಡಿದ ಬಾಲಕಿ, ನನ್ನ ತಾಯಿ ಏಕಾಏಕಿ ಬಿದ್ದು ಮೃತಪಟ್ಟಿದ್ದಾಳೆ ಎಂದು ಹೇಳಿದ್ದಳು. ನಂತರ ತಾಯಿಯ ಮೃತದೇಹವನ್ನು ಪೋಸ್ಟ್​ಮಾರ್ಟಮ್​ಗೆ ಕಳಿಸಲಾಗಿತ್ತು. ಅದರಲ್ಲಿ ಮಹಿಳೆ ಸಹಜವಾಗಿ ಸತ್ತಿಲ್ಲ..ಆಕೆಯ ಕತ್ತು ಹಿಸುಕಿ ಕೊಲ್ಲಲಾಗಿದೆ ಎಂಬ ವಿಚಾರ ಬೆಳಕಿಗೆ ಬಂತು. ಕೂಡಲೇ ಬಾಲಕಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಸತ್ಯ ಬೆಳಕಿಗೆ ಬಂತು. ಆಕೆ ತಾನು ತನ್ನ ತಾಯಿಯನ್ನು ಕರಾಟೆ ಬೆಲ್ಟ್​​ನಿಂದ ಕತ್ತು ಹಿಸುಕಿ ಕೊಂದಿದ್ದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಸದ್ಯ ಬಾಲಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಪೊಲೀಸರ ಕೈಗೆ ಸಿಗದ ಗುರು ದೇಶಪಾಂಡೆ; ಮೃತನ ಕುಟುಂಬಕ್ಕೆ 10 ಲಕ್ಷ ಪರಿಹಾರದ ಭರವಸೆ

Mi TV 4C: ಅತಿ ಕಡಿಮೆ ಬೆಲೆಯ ಎಂಐ 4ಸಿ ಸ್ಮಾರ್ಟ್​ಟಿವಿ ಲಾಂಚ್: ಆಫರ್​ನಲ್ಲಿ ಪಡೆಯಿರಿ ಮತ್ತಷ್ಟು ಡಿಸ್ಕೌಂಟ್

Published On - 2:40 pm, Tue, 10 August 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್