AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾಟೆ ಬೆಲ್ಟ್​ನಿಂದ ತಾಯಿಯ ಕತ್ತು ಹಿಸುಕಿ ಕೊಂದ ಮಗಳು; ಪೊಲೀಸರಿಗೆ ಫೋನ್​ ಮಾಡಿ ಸುಳ್ಳು ಹೇಳಿ, ಸಿಕ್ಕಿಬಿದ್ದಳು

ಜು.30ರಂದು ಪೊಲೀಸ್​ ಠಾಣೆಗೆ ಕರೆ ಮಾಡಿದ ಬಾಲಕಿ, ನನ್ನ ತಾಯಿ ಏಕಾಏಕಿ ಬಿದ್ದು ಮೃತಪಟ್ಟಿದ್ದಾಳೆ ಎಂದು ಹೇಳಿದ್ದಳು. ನಂತರ ತಾಯಿಯ ಮೃತದೇಹವನ್ನು ಪೋಸ್ಟ್​ಮಾರ್ಟಮ್​ಗೆ ಕಳಿಸಲಾಗಿತ್ತು.

ಕರಾಟೆ ಬೆಲ್ಟ್​ನಿಂದ ತಾಯಿಯ ಕತ್ತು ಹಿಸುಕಿ ಕೊಂದ ಮಗಳು; ಪೊಲೀಸರಿಗೆ ಫೋನ್​ ಮಾಡಿ ಸುಳ್ಳು ಹೇಳಿ, ಸಿಕ್ಕಿಬಿದ್ದಳು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 10, 2021 | 2:40 PM

Share

ಥಾಣೆ: 15ವರ್ಷದ ಬಾಲಕಿಯೊಬ್ಬಳು ತನ್ನ ತಾಯಿಯ ಕುತ್ತಿಗೆಯನ್ನು ಕರಾಟೆ ಬೆಲ್ಟ್​​ನಿಂದ ಹಿಸುಕಿ ಕೊಂದ ಘಟನೆ ನವಿ ಮುಂಬೈನಲ್ಲಿ ನಡೆದಿದೆ. ತಾಯಿಯನ್ನು ಹತ್ಯೆ ಮಾಡಿದ್ದಲ್ಲದೆ, ಅದೊಂದು ಆಕಸ್ಮಿಕ ಸಾವೆಂಬಂತೆ ಬಿಂಬಿಸಲೂ ಪ್ರಯತ್ನ ಮಾಡಿದ್ದಾಳೆ. ಅಷ್ಟಕ್ಕೂ ಆ ಬಾಲಕಿ ಅಮ್ಮನನ್ನು ಕೊಂದಿದ್ದು, ಆಕೆಯ ಶಿಕ್ಷಣಕ್ಕೆ ಸಂಬಂಧಪಟ್ಟ ವಿಚಾರದಲ್ಲಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನವಿ ಮುಂಬೈನ ಏರೋಲಿ ಎಂಬಲ್ಲಿ ಜು.30ರಂದು ನಡೆದ ಘಟನೆ ಈಗ ಬೆಳಕಿಗೆ ಬಂದಿದೆ.

ಆ ತಾಯಿಗೆ ತನ್ನ ಮಗಳು ವೈದ್ಯಕೀಯ ಶಿಕ್ಷಣ ಅಭ್ಯಾಸ ಮಾಡಲಿ ಎಂದು ಆಸೆ. ಆದರೆ ಮಗಳಿಗೆ ಅದು ಸುತಾರಾಂ ಇಷ್ಟವಿರಲಿಲ್ಲ. ಇದೇ ವಿಚಾರಕ್ಕೆ ಅಮ್ಮ-ಮಗಳ ನಡುವೆ ಪದೇಪದೆ ಜಗಳ ಆಗುತ್ತಲೇ ಇತ್ತು. ಇದೇ ವಿಚಾರಕ್ಕೆ ಅಮ್ಮನ ವಿರುದ್ಧ ಕಳೆದ ತಿಂಗಳು ಈಕೆ ಪೊಲೀಸರಿಗೆ ದೂರನ್ನೂ ನೀಡಿದ್ದಳು. ಆದರೆ ಪೊಲೀಸರು ಅವರಿಬ್ಬರಿಗೂ ಬುದ್ಧಿ ಹೇಳಿ ಕಳಿಸಿದ್ದರು.

ಜು.30ರಂದು ಪೊಲೀಸ್​ ಠಾಣೆಗೆ ಕರೆ ಮಾಡಿದ ಬಾಲಕಿ, ನನ್ನ ತಾಯಿ ಏಕಾಏಕಿ ಬಿದ್ದು ಮೃತಪಟ್ಟಿದ್ದಾಳೆ ಎಂದು ಹೇಳಿದ್ದಳು. ನಂತರ ತಾಯಿಯ ಮೃತದೇಹವನ್ನು ಪೋಸ್ಟ್​ಮಾರ್ಟಮ್​ಗೆ ಕಳಿಸಲಾಗಿತ್ತು. ಅದರಲ್ಲಿ ಮಹಿಳೆ ಸಹಜವಾಗಿ ಸತ್ತಿಲ್ಲ..ಆಕೆಯ ಕತ್ತು ಹಿಸುಕಿ ಕೊಲ್ಲಲಾಗಿದೆ ಎಂಬ ವಿಚಾರ ಬೆಳಕಿಗೆ ಬಂತು. ಕೂಡಲೇ ಬಾಲಕಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಸತ್ಯ ಬೆಳಕಿಗೆ ಬಂತು. ಆಕೆ ತಾನು ತನ್ನ ತಾಯಿಯನ್ನು ಕರಾಟೆ ಬೆಲ್ಟ್​​ನಿಂದ ಕತ್ತು ಹಿಸುಕಿ ಕೊಂದಿದ್ದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಸದ್ಯ ಬಾಲಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಪೊಲೀಸರ ಕೈಗೆ ಸಿಗದ ಗುರು ದೇಶಪಾಂಡೆ; ಮೃತನ ಕುಟುಂಬಕ್ಕೆ 10 ಲಕ್ಷ ಪರಿಹಾರದ ಭರವಸೆ

Mi TV 4C: ಅತಿ ಕಡಿಮೆ ಬೆಲೆಯ ಎಂಐ 4ಸಿ ಸ್ಮಾರ್ಟ್​ಟಿವಿ ಲಾಂಚ್: ಆಫರ್​ನಲ್ಲಿ ಪಡೆಯಿರಿ ಮತ್ತಷ್ಟು ಡಿಸ್ಕೌಂಟ್

Published On - 2:40 pm, Tue, 10 August 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ